AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಗಳಿಕೆ ಮಾಡಿದ ‘ಕರುಪ್ಪು’; ಮೂರೇ ದಿನಕ್ಕೆ 100 ಕೋಟಿ ಕ್ಲಬ್ ಸೇರಿದ ತ್ರಿಷಾ ಸಿನಿಮಾ

ಸೂರ್ಯ ಮತ್ತು ತ್ರಿಷಾ ಕೃಷ್ಣನ್ ಅಭಿನಯದ 'ಕರುಪ್ಪು' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಗಳಿಸಿದೆ. ಬಿಡುಗಡೆಯಾದ ಕೇವಲ ಮೂರೇ ದಿನಕ್ಕೆ 100 ಕೋಟಿ ಕ್ಲಬ್ ಸೇರಿದೆ. ಹಲವು ಅಡೆತಡೆಗಳು, ಆರ್ಥಿಕ ಬಿಕ್ಕಟ್ಟು ಹಾಗೂ ವಿತರಣೆಯ ಸಮಸ್ಯೆಗಳನ್ನು ಎದುರಿಸಿ ತೆರೆಕಂಡ ಕರುಪ್ಪು, ಸೂರ್ಯ ಮತ್ತು ತ್ರಿಷಾಗೆ ದೊಡ್ಡ ಗೆಲುವು ತಂದುಕೊಟ್ಟಿದೆ.

ಭರ್ಜರಿ ಗಳಿಕೆ ಮಾಡಿದ ‘ಕರುಪ್ಪು’; ಮೂರೇ ದಿನಕ್ಕೆ 100 ಕೋಟಿ ಕ್ಲಬ್ ಸೇರಿದ ತ್ರಿಷಾ ಸಿನಿಮಾ
ಕರುಪ್ಪು
ರಾಜೇಶ್ ದುಗ್ಗುಮನೆ
|

Updated on: May 18, 2026 | 7:09 AM

Share

ತಮಿಳು ಚಿತ್ರರಂಗದ ಸ್ಟಾರ್ ನಟ ಸೂರ್ಯ ಮತ್ತು ತ್ರಿಷಾ ಕೃಷ್ಣನ್ ಅಭಿನಯದ ‘ಕರುಪ್ಪು’ ಸಿನಿಮಾ (Karuppu Movie) ಸದ್ದು ಮಾಡುತ್ತಿದೆ. ಸಾಕಷ್ಟು ಅಡೆತಡೆಗಳನ್ನು ಮೀರಿ ರಿಲೀಸ್ ಆದ ಈ ಚಿತ್ರ ಬಾಕ್ಸ್ ಆಫೀಸ್​​ನ್ಲಿ ಯಶಸ್ಸು ಕಂಡಿದೆ. ಆರ್. ಜೆ. ಬಾಲಾಜಿ ನಿರ್ದೇಶನದ ಫ್ಯಾಂಟಸಿ ಆಕ್ಷನ್ ಡ್ರಾಮಾ ಸಿನಿಮಾ ಗಲ್ಲಾ ಪೆಟ್ಟಿಗೆಯಲ್ಲಿ ಭಾರೀ ಗಳಿಕೆ ಮಾಡುತ್ತಿದೆ. ಕೇವಲ ಮೂರೇ ದಿನಕ್ಕೆ ಸಿನಿಮಾ 100 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಹಲವು ವರ್ಷಗಳ ಬಳಿಕ ಸೂರ್ಯ ಅವರಿಗೆ ದೊಡ್ಡ ಗೆಲುವು ಸಿಕ್ಕಿದೆ.

‘ಕರುಪ್ಪು’ ಚಿತ್ರದ ಕಥೆ ಮೊದಲು ಸೂರ್ಯ ಅವರಿಗಾಗಿ ಮಾಡಿದ್ದಾಗಿರಲಿಲ್ಲ, ಬದಲಿಗೆ ತ್ರಿಷಾ ಅವರನ್ನು ಗಮನದಲ್ಲಿ ಇಟ್ಟುಕೊಂಡು ಸಿದ್ಧಪಡಿಸಲಾಗಿತ್ತು. ನಂತರ ನಂತರ ಚಿತ್ರಕ್ಕೆ ಕಮರ್ಷಿಯಲ್ ಮತ್ತು ಮಾಸ್ ಅಂಶಗಳನ್ನು ಸೇರಿಸಿ ಸೂರ್ಯ ಅವರಿಗೆ ಕಥೆ ಹೇಳಿದಾಗ, ಅವರು ತಕ್ಷಣವೇ ಒಪ್ಪಿಕೊಂಡರು. ಹೀಗೆ 2024ರ ಕೊನೆಯಲ್ಲಿ ಈ ಸಿನಿಮಾ ಆರಂಭ ಆಯಿತು. ಈಗ ಚಿತ್ರ ಭಾರೀ ಗಳಿಕೆ ಮಾಡಿದೆ.

‘ಕರಪ್ಪು’ ಚಿತ್ರಕ್ಕೆ ಶುಕ್ರವಾರ 15.50 ಕೋಟಿ ರೂಪಾಯಿ, ಶನಿವಾರ 24.15 ಕೋಟಿ ರೂಪಾಯಿ ಹಾಗೂ ಭಾನುವಾರ 28.35 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಈ ಮೂಲಕ ಭಾರತದಲ್ಲಿ 68 ಕೋಟಿ ನೆಟ್ ಕಲೆಕ್ಷನ್ ಹಾಗೂ 78 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಆಗಿದೆ. ವಿದೇಶದಿಂದ ಸಿನಿಮಾಗೆ 42 ಕೋಟಿ ರೂಪಾಯಿ ಗಳಿಕೆ ಆಗಿದ್ದು, ಸಿನಿಮಾದ ಕಲೆಕ್ಷನ್ 120 ಕೋಟಿ ರೂಪಾಯಿ ಆಗಿದೆ. ಈ ಮೂಲಕ ತ್ರಿಷಾ ಹಾಗೂ ಸೂರ್ಯ ದೊಡ್ಡ ಗೆಲುವು ಕಂಡಿದ್ದಾರೆ.

ಇದನ್ನೂ ಓದಿ:  ವಿಜಯ್ ಸಿಎಂ ಆದ ಬಳಿಕ ಗೆದ್ದ ತ್ರಿಷಾ; ‘ಕರುಪ್ಪು’ ಚಿತ್ರ ಹೊಗಳಿದ ಫ್ಯಾನ್ಸ್

ಇನ್ನು ಕರುಪ್ಪು ಸಿನಿಮಾದ ಹಾದಿ ಸುಲಭವಾಗಿರಲಿಲ್ಲ. ಶೂಟಿಂಗ್ ಹಂತದಲ್ಲಿ ಅನುಮತಿ ಪಡೆಯದ ಕಾರಣಕ್ಕೆ ಚೆನ್ನೈ ಬಳಿ ಪೊಲೀಸರು ಚಿತ್ರೀಕರಣವನ್ನು ತಡೆದಿದ್ದರು. ಆದರೆ ಅತಿ ದೊಡ್ಡ ವಿಘ್ನ ಎದುರಾಗಿದ್ದು ಬಿಡುಗಡೆಯ ದಿನ. ಮೇ 14, 2026 ರಂದು ರಿಲೀಸ್ ಆಗಬೇಕಿದ್ದ ಈ ಚಿತ್ರಕ್ಕೆ ಕೊನೆ ಕ್ಷಣದಲ್ಲಿ ಹಣಕಾಸಿನ ಸಮಸ್ಯೆ ಹಾಗೂ ವಿತರಣೆಯ ಬಿಕ್ಕಟ್ಟು ಎದುರಾಗಿ ಮುಂಜಾನೆಯ ಶೋಗಳು ರದ್ದಾದವು. ಇದು ಅಭಿಮಾನಿಗಳಲ್ಲಿ ಭಾರೀ ನಿರಾಸೆ ಮೂಡಿಸಿತು. ಅಂತಿಮವಾಗಿ ಸೂರ್ಯ ಮತ್ತು ಚಿತ್ರತಂಡದ ಪ್ರಯತ್ನದಿಂದ ಸಮಸ್ಯೆಗಳು ಬಗೆಹರಿದು, ಮೇ 15 ರಂದು ಸಿನಿಮಾ ಯಶಸ್ವಿಯಾಗಿ ತೆರೆಕಂಡು ಭರ್ಜರಿ ಕಲೆಕ್ಷನ್ ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು