AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರೂರು ಕಾಲ್ತುಳಿತ ಪ್ರಕರಣದಲ್ಲಿ ವಿಜಯ್​ನ ಬೆಂಬಲಿಸಿದ ಅಜಿತ್

ಕರೂರು ಕಾಲ್ತುಳಿತ ಪ್ರಕರಣದಲ್ಲಿ ನಟ ವಿಜಯ್‌ಗೆ ಅಜಿತ್ ಬೆಂಬಲ ಸೂಚಿಸಿದ್ದಾರೆ. 41 ಜನರ ಸಾವಿಗೆ ವಿಜಯ್ ಒಬ್ಬರೇ ಕಾರಣರಲ್ಲ ಎಂದು ಅಜಿತ್ ಹೇಳಿದರು. ನಟರು ಜನಪ್ರಿಯತೆಗಾಗಿ ಮಾಡುವ ತ್ಯಾಗ ಮತ್ತು ಅಭಿಮಾನಿಗಳ ಪ್ರೀತಿಯನ್ನು ಪ್ರದರ್ಶಿಸುವ ಸರಿಯಾದ ಮಾರ್ಗಗಳ ಕುರಿತು ಅಜಿತ್ ಮಾತನಾಡಿದ್ದಾರೆ.

ಕರೂರು ಕಾಲ್ತುಳಿತ ಪ್ರಕರಣದಲ್ಲಿ ವಿಜಯ್​ನ ಬೆಂಬಲಿಸಿದ ಅಜಿತ್
ಅಜಿತ್
ರಾಜೇಶ್ ದುಗ್ಗುಮನೆ
|

Updated on: Nov 01, 2025 | 8:43 PM

Share

ನಟ ಹಾಗೂ ರಾಜಕಾರಣಿ ವಿಜಯ್ ಅವರ ರ‍್ಯಾಲಿಯಲ್ಲಿ ಉಂಟಾದ ಕಾಲ್ತುಳಿತದಿಂದ 41 ಜನರು ನಿಧನ ಹೊಂದಿದರು. ತಮಿಳುನಾಡಿನ ಕರೂರ್​ನಲ್ಲಿ ಈ ಘಟನೆ ನಡೆದಿತ್ತು. ವಿಜಯ್ ಅವರೇ ಇದಕ್ಕೆ ನೇರ ಕಾರಣ ಎಂದು ಅನೇಕರು ಹೇಳಿದ್ದರು. ಆದಾಗ್ಯೂ ಕೆಲವರು ವಿಜಯ್ ಅವರನ್ನು ಬೆಂಬಲಿಸಿ ಮಾತನಾಡಿದ್ದರು. ವಿಶೇಷ ಎಂದರೆ ವಿಜಯ್ ಅವರನ್ನು ಅಜಿತ್ ಬೆಂಬಲಿಸಿದ್ದಾರೆ.

ಅಜಿತ್ ಹಾಗೂ ವಿಜಯ್ ಅಭಿಮಾನಿಗಳ ಮಧ್ಯೆ ಯಾವಾಗಲೂ ಕಿತ್ತಾಟ ನಡೆಯುತ್ತಲೇ ಇರುತ್ತದೆ. ಆದರೆ, ನಿಜಕ್ಕೂ ಇವರ ಮಧ್ಯೆ ವೈಮನಸ್ಸು ಇದೆಯೇ? ಈಗ ಅಜಿತ್ ಕೊಟ್ಟ ಉತ್ತರ ನೋಡಿದರೆ ಒಬ್ಬರ ಮೇಲೆ ಒಬ್ಬರಿಗೆ ಒಳ್ಳೆಯ ಭಾವನೆ ಇದೆ ಎಂಬುದು ಸ್ಪಷ್ಟವಾಗಿ ಕಾಣಿಸುತ್ತದೆ.

‘ನಾನು ಈ ವಿಷಯವನ್ನು ಸರಿಯಾದ ಮನೋಭಾವದಿಂದ ತೆಗೆದುಕೊಳ್ಳಲು ಬಯಸುತ್ತೇನೆ. ನಾನು ಯಾರನ್ನೂ ಕೀಳಾಗಿ ಕಾಣಲು ಬಯಸುವುದಿಲ್ಲ. ಇಂದು ತಮಿಳುನಾಡಿನಲ್ಲಿ ಸಾಕಷ್ಟು ಘಟನೆಗಳು ನಡೆಯುತ್ತಿವೆ. ಕರೂರ್ ಅಲ್ಲಿ ಕಾಲ್ತುಳಿತ ಸಂಭವಿಸಿದೆ. ಆ ವ್ಯಕ್ತಿ (ವಿಜಯ್) ಅದಕ್ಕೆ ಜವಾಬ್ದಾರನಲ್ಲ. ನಾವೆಲ್ಲರೂ ಜವಾಬ್ದಾರರು. ಇದರಲ್ಲಿ ಮಾಧ್ಯಮಗಳ ಪಾತ್ರವೂ ಇದೆ’ ಎಂದಿದ್ದಾರೆ ಅಜಿತ್.

ಇದನ್ನೂ ಓದಿ
Image
ಬಿಗ್ ಬಾಸ್​ನಲ್ಲಿ ಕನ್ನಡದ ಕಂಪು; ವಿಶ್ ತಿಳಿಸಿದ ಸುದೀಪ್
Image
ಟಾಲಿವುಡ್​ಗೆ 50 ಕೆಜಿ ಚಿನ್ನ ಧರಿಸಿ ಬಂದ ನಟಿ ಸೋನಾಕ್ಷಿ ಸಿನ್ಹಾ
Image
‘ಸಾವಿರ ಭಾಷೆ ನಾಲಿಗೆಯಲ್ಲಿರಲಿ, ಕನ್ನಡ ಭಾಷೆ ಹೃದಯದಲ್ಲಿರಲಿ’: ಯಶ್  
Image
ಸುದೀಪ್ ಹೇಳಿದ ‘ಗೌರವ’ದ ಪಾಠ ಮರೆತು ಮತ್ತೆ ಕಿತ್ತಾಟಕ್ಕೆ ಇಳಿದ ಅಶ್ವಿನಿ

‘ಜನರನ್ನು ಒಂದೆಡೆ ಸೇರಿಸಬೇಕು ಎಂಬ ಗೀಳು ಬಂದಿದೆ. ಇದೆಲ್ಲವೂ ಕೊನೆಗೊಳ್ಳಬೇಕು. ನನ್ನ ಪ್ರಕಾರ, ಕ್ರಿಕೆಟ್ ಪಂದ್ಯಗಳಿಗೂ ಜನರು ಹೋಗುತ್ತಾರೆ. ಆದರೆ, ಇದು ಯಾರ ಗಮನಕ್ಕೂ ಬರುತ್ತಿಲ್ಲ. ಇದು ಸೆಲೆಬ್ರಿಟಿಗಳಿಗೆ ಮಾತ್ರ ಆಗುತ್ತಿದೆ. ಸಿನಿಮಾ ಸೆಲೆಬ್ರಿಟಿಗಳು ಮಾತ್ರ ಏಕೆ ಕಾಣುತ್ತಾರೆ? ಇದು ಇಡೀ ಚಲನಚಿತ್ರೋದ್ಯಮವನ್ನು ಕೆಟ್ಟದಾಗಿ ತೋರಿಸುತ್ತದೆ’ ಎಂದಿದ್ದಾರೆ ಅಜಿತ್.

ಇದನ್ನೂ ಓದಿ: ಅಜಿತ್ ನಟನೆಯ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ತೆಗೆದುಹಾಕಿದ ನೆಟ್​ಫ್ಲಿಕ್ಸ್

‘ನಾವು ಈ ರೀತಿ ಆಗಲಿ ಎಂದು ಯಾವಾಗಲೂ ಬಯಸುವುದಿಲ್ಲ. ನಮಗೆ ಆ ಪ್ರೀತಿ ಬೇಕು. ಇದಕ್ಕಾಗಿಯೇ ನಾವು ಕೆಲಸ ಮಾಡುತ್ತೇವೆ. ಕುಟುಂಬದಿಂದ ದೂರವಿರುವುದು, ಸೆಟ್‌ಗಳಲ್ಲಿ ದೀರ್ಘಕಾಲ ಕೆಲಸ ಮಾಡುವುದು ಜನರ ಪ್ರೀತಿಗಾಗಿ. ಶೂಟ್ ಮಾಡುವಾಗ ಗಾಯ ಆಗುತ್ತದೆ, ನಿದ್ದೆ ಇಲ್ಲದಂತೆ ಆಗುತ್ತದೆ. ಇದೆಲ್ಲ ಮಾಡೋದು ಯಾವುದಕ್ಕಾಗಿ? ಜನರ ಪ್ರೀತಿಗಾಗಿ. ಆದರೆ ಆ ಪ್ರೀತಿಯನ್ನು ತೋರಿಸಲು ಒಂದು ಮಾರ್ಗವಿದೆ’ ಎಂದು ಅಜಿತ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ