AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಚಾರಿ ವಿಜಯ್​ ಬಳಿಕ ಮತ್ತೋರ್ವ ನಟನಿಗೆ ರಸ್ತೆ ಅಪಘಾತ; ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

Kathi Mahesh: ಕಾರು ಜಖಂ ಆಗಿರುವುದು ನೋಡಿದರೆ ಅಪಘಾತದ ತೀವ್ರತೆ ಹೇಗಿತ್ತು ಎಂಬುದು ಗೊತ್ತಾಗುತ್ತದೆ. ಹಾಗಾಗಿ ಮಹೇಶ್​ ಅವರಿಗೆ ಹೆಚ್ಚು ಗಾಯಗಳು ಆಗಿರಬಹುದು ಎಂಬ ಅನುಮಾನ ವ್ಯಕ್ತವಾಗುತ್ತಿದೆ.

ಸಂಚಾರಿ ವಿಜಯ್​ ಬಳಿಕ ಮತ್ತೋರ್ವ ನಟನಿಗೆ ರಸ್ತೆ ಅಪಘಾತ; ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ
ಅಪಘಾತಕ್ಕೆ ಒಳಗಾದ ಕತ್ತಿ ಮಹೇಶ್​ ಇನೊವಾ ಕಾರು
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ

Updated on: Jun 26, 2021 | 4:57 PM

Share

ನಟ ಸಂಚಾರಿ ವಿಜಯ್​ ಅವರು ಭೀಕರ ರಸ್ತೆ ಅಪಘಾತಕ್ಕೆ ಒಳಗಾದ ಶಾಕಿಂಗ್​ ಸುದ್ದಿ ಮಾಸುವ ಮುನ್ನವೇ ಮತ್ತೋರ್ವ ನಟನಿಗೆ ಅಪಘಾತ ಆಗಿದೆ. ಟಾಲಿವುಡ್​ ಸಿನಿಮಾಗಳಲ್ಲಿ ನಟಿಸಿರುವ ಕತ್ತಿ ಮಹೇಶ್​ ಅವರು ಚಿತ್ತೂರಿನಿಂದ ಹೈದರಾಬಾದ್​ಗೆ ಮರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅವರು ಚಲಿಸುತ್ತಿದ್ದ ಇನೊವಾ ಕಾರು ಟ್ರಕ್​ವೊಂದಕ್ಕೆ ಡಿಕ್ಕಿ ಹೊಡಿದಿದೆ! ಸದ್ಯ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಟನಾಗಿ ಮಾತ್ರವಲ್ಲದೆ, ವಿಮರ್ಶಕನಾಗಿ ಹಾಗೂ ಬಿಗ್​ ಬಾಸ್​ ತೆಲುಗು ಸೀಸನ್​ 1ರ ಸ್ಪರ್ಧಿಯಾಗಿಯೂ ಕತ್ತಿ ಮಹೇಶ್​ ಫೇಮಸ್​. ನೆಲ್ಲೂರಿನ ಹೊರವಲಯದ ಚಂದ್ರಶೇಖರಪುರಂ ಬಳಿ ಮಹೇಶ್​ ಚಲಿಸುತ್ತಿದ್ದ ಕಾರು ಶುಕ್ರವಾರ (ಏ.25) ಅಪಘಾತಕ್ಕೆ ಈಡಾಯಿತು. ಸರಿಯಾದ ಸಮಯಕ್ಕೆ ಕಾರಿನ ಏರ್​​ಬ್ಯಾಗ್​ ತೆರೆದುಕೊಂಡಿದ್ದರಿಂದ ಅವರಿಗೆ ಮಾರಣಾಂತಿಕ ಗಾಯಗಳಾಗುವುದು ತಪ್ಪಿದೆ ಎನ್ನಲಾಗಿದೆ. ಆದರೂ ಅವರಿಗೆ ಸದ್ಯಕ್ಕೆ ಪ್ರಜ್ಞೆ ಬಂದಿಲ್ಲ ಎಂದು ವರದಿ ಆಗಿದೆ.

ಮಹೇಶ್​ ಅವರ ಇನೊವಾ ಕಾರು ಜಖಂ ಆಗಿದೆ. ಸದ್ಯ ಆ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿವೆ. ಕಾರು ಜಖಂ ಆಗಿರುವುದು ನೋಡಿದರೆ ಅಪಘಾತದ ತೀವ್ರತೆ ಹೇಗಿತ್ತು ಎಂಬುದು ಗೊತ್ತಾಗುತ್ತದೆ. ಹಾಗಾಗಿ ಮಹೇಶ್​ ಅವರಿಗೆ ಹೆಚ್ಚು ಗಾಯಗಳಾಗಿರಬಹುದು ಎಂಬ ಅನುಮಾನ ವ್ಯಕ್ತವಾಗುತ್ತಿದೆ.

ಕಿರುಚಿತ್ರಗಳ ಮೂಲಕ ಮಹೇಶ್ ವೃತ್ತಿಜೀವನ ಆರಂಭಿಸಿದ್ದರು. ಸಿನಿಮಾ ವಿಮರ್ಶೆಯಲ್ಲಿ ವಿವಾದಾತ್ಮಕ ಅಭಿಪ್ರಾಯವನ್ನು ವ್ಯಕ್ತಪಡಿಸುವ ಮೂಲಕ ಮಹೇಶ್​ ಹೆಚ್ಚು ಖ್ಯಾತಿ ಪಡೆದುಕೊಂಡರು. ನೇನೆ ರಾಜು ನೇನೆ ಮಂತ್ರಿ, ಕ್ರ್ಯಾಕ್​, ಅಮ್ಮ ರಾಜ್ಯಂ ಲೋ ಕಡಪ ಬಿದ್ದಲು ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಈಗ ಅವರಿಗೆ ಅಪಘಾತ ಆಗಿರುವ ಸುದ್ದಿ ಕೇಳಿ ಅಭಿಮಾನಿಗಳಿಗೆ ಆತಂಕ ಆಗಿದೆ. ಮಹೇಶ್​ ಆರೋಗ್ಯದ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಸಿಗಬೇಕಿದೆ. ಆಸ್ಪತ್ರೆ ಬಿಡುಗಡೆ ಮಾಡಲಿರುವ ಹೆಲ್ತ್​ ಬುಲೆಟಿನ್​ಗಾಗಿ ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ:

ಸಂಚಾರಿ ವಿಜಯ್​ ರೀತಿಯಲ್ಲೇ ಅಪಘಾತದಲ್ಲಿ ಮೃತಪಟ್ಟ ಸ್ಯಾಂಡಲ್​ವುಡ್​ ಕಲಾವಿದರಿವರು

ಭೀಕರ ಅಪಘಾತದಲ್ಲಿ ಸುನೀಲ್​ ನಿಧನರಾದಾಗ ನಿಜವಾಗಿ ನಡೆದಿದ್ದು ಏನು? ಸಂಬಂಧಿ ಸಚಿನ್​ ತೆರೆದಿಟ್ಟ ಸತ್ಯ

ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ