AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಚಾರಿ ವಿಜಯ್​ ಬಳಿಕ ಮತ್ತೋರ್ವ ನಟನಿಗೆ ರಸ್ತೆ ಅಪಘಾತ; ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

Kathi Mahesh: ಕಾರು ಜಖಂ ಆಗಿರುವುದು ನೋಡಿದರೆ ಅಪಘಾತದ ತೀವ್ರತೆ ಹೇಗಿತ್ತು ಎಂಬುದು ಗೊತ್ತಾಗುತ್ತದೆ. ಹಾಗಾಗಿ ಮಹೇಶ್​ ಅವರಿಗೆ ಹೆಚ್ಚು ಗಾಯಗಳು ಆಗಿರಬಹುದು ಎಂಬ ಅನುಮಾನ ವ್ಯಕ್ತವಾಗುತ್ತಿದೆ.

ಸಂಚಾರಿ ವಿಜಯ್​ ಬಳಿಕ ಮತ್ತೋರ್ವ ನಟನಿಗೆ ರಸ್ತೆ ಅಪಘಾತ; ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ
ಅಪಘಾತಕ್ಕೆ ಒಳಗಾದ ಕತ್ತಿ ಮಹೇಶ್​ ಇನೊವಾ ಕಾರು
ಮದನ್​ ಕುಮಾರ್​
| Edited By: |

Updated on: Jun 26, 2021 | 4:57 PM

Share

ನಟ ಸಂಚಾರಿ ವಿಜಯ್​ ಅವರು ಭೀಕರ ರಸ್ತೆ ಅಪಘಾತಕ್ಕೆ ಒಳಗಾದ ಶಾಕಿಂಗ್​ ಸುದ್ದಿ ಮಾಸುವ ಮುನ್ನವೇ ಮತ್ತೋರ್ವ ನಟನಿಗೆ ಅಪಘಾತ ಆಗಿದೆ. ಟಾಲಿವುಡ್​ ಸಿನಿಮಾಗಳಲ್ಲಿ ನಟಿಸಿರುವ ಕತ್ತಿ ಮಹೇಶ್​ ಅವರು ಚಿತ್ತೂರಿನಿಂದ ಹೈದರಾಬಾದ್​ಗೆ ಮರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅವರು ಚಲಿಸುತ್ತಿದ್ದ ಇನೊವಾ ಕಾರು ಟ್ರಕ್​ವೊಂದಕ್ಕೆ ಡಿಕ್ಕಿ ಹೊಡಿದಿದೆ! ಸದ್ಯ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಟನಾಗಿ ಮಾತ್ರವಲ್ಲದೆ, ವಿಮರ್ಶಕನಾಗಿ ಹಾಗೂ ಬಿಗ್​ ಬಾಸ್​ ತೆಲುಗು ಸೀಸನ್​ 1ರ ಸ್ಪರ್ಧಿಯಾಗಿಯೂ ಕತ್ತಿ ಮಹೇಶ್​ ಫೇಮಸ್​. ನೆಲ್ಲೂರಿನ ಹೊರವಲಯದ ಚಂದ್ರಶೇಖರಪುರಂ ಬಳಿ ಮಹೇಶ್​ ಚಲಿಸುತ್ತಿದ್ದ ಕಾರು ಶುಕ್ರವಾರ (ಏ.25) ಅಪಘಾತಕ್ಕೆ ಈಡಾಯಿತು. ಸರಿಯಾದ ಸಮಯಕ್ಕೆ ಕಾರಿನ ಏರ್​​ಬ್ಯಾಗ್​ ತೆರೆದುಕೊಂಡಿದ್ದರಿಂದ ಅವರಿಗೆ ಮಾರಣಾಂತಿಕ ಗಾಯಗಳಾಗುವುದು ತಪ್ಪಿದೆ ಎನ್ನಲಾಗಿದೆ. ಆದರೂ ಅವರಿಗೆ ಸದ್ಯಕ್ಕೆ ಪ್ರಜ್ಞೆ ಬಂದಿಲ್ಲ ಎಂದು ವರದಿ ಆಗಿದೆ.

ಮಹೇಶ್​ ಅವರ ಇನೊವಾ ಕಾರು ಜಖಂ ಆಗಿದೆ. ಸದ್ಯ ಆ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿವೆ. ಕಾರು ಜಖಂ ಆಗಿರುವುದು ನೋಡಿದರೆ ಅಪಘಾತದ ತೀವ್ರತೆ ಹೇಗಿತ್ತು ಎಂಬುದು ಗೊತ್ತಾಗುತ್ತದೆ. ಹಾಗಾಗಿ ಮಹೇಶ್​ ಅವರಿಗೆ ಹೆಚ್ಚು ಗಾಯಗಳಾಗಿರಬಹುದು ಎಂಬ ಅನುಮಾನ ವ್ಯಕ್ತವಾಗುತ್ತಿದೆ.

ಕಿರುಚಿತ್ರಗಳ ಮೂಲಕ ಮಹೇಶ್ ವೃತ್ತಿಜೀವನ ಆರಂಭಿಸಿದ್ದರು. ಸಿನಿಮಾ ವಿಮರ್ಶೆಯಲ್ಲಿ ವಿವಾದಾತ್ಮಕ ಅಭಿಪ್ರಾಯವನ್ನು ವ್ಯಕ್ತಪಡಿಸುವ ಮೂಲಕ ಮಹೇಶ್​ ಹೆಚ್ಚು ಖ್ಯಾತಿ ಪಡೆದುಕೊಂಡರು. ನೇನೆ ರಾಜು ನೇನೆ ಮಂತ್ರಿ, ಕ್ರ್ಯಾಕ್​, ಅಮ್ಮ ರಾಜ್ಯಂ ಲೋ ಕಡಪ ಬಿದ್ದಲು ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಈಗ ಅವರಿಗೆ ಅಪಘಾತ ಆಗಿರುವ ಸುದ್ದಿ ಕೇಳಿ ಅಭಿಮಾನಿಗಳಿಗೆ ಆತಂಕ ಆಗಿದೆ. ಮಹೇಶ್​ ಆರೋಗ್ಯದ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಸಿಗಬೇಕಿದೆ. ಆಸ್ಪತ್ರೆ ಬಿಡುಗಡೆ ಮಾಡಲಿರುವ ಹೆಲ್ತ್​ ಬುಲೆಟಿನ್​ಗಾಗಿ ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ:

ಸಂಚಾರಿ ವಿಜಯ್​ ರೀತಿಯಲ್ಲೇ ಅಪಘಾತದಲ್ಲಿ ಮೃತಪಟ್ಟ ಸ್ಯಾಂಡಲ್​ವುಡ್​ ಕಲಾವಿದರಿವರು

ಭೀಕರ ಅಪಘಾತದಲ್ಲಿ ಸುನೀಲ್​ ನಿಧನರಾದಾಗ ನಿಜವಾಗಿ ನಡೆದಿದ್ದು ಏನು? ಸಂಬಂಧಿ ಸಚಿನ್​ ತೆರೆದಿಟ್ಟ ಸತ್ಯ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು