AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್ ಜತೆ ರೊಮ್ಯಾನ್ಸ್ ಮಾಡಲಿದ್ದಾರೆ ಕತ್ರಿನಾ ಕೈಫ್; ಕೌತುಕ ಮೂಡಿಸಿದ ಬಿಗ್ ಬಜೆಟ್ ಚಿತ್ರ

ಈಗ ಸಿದ್ಧಾರ್ಥ್​ ಮತ್ತೊಂದು ಆ್ಯಕ್ಷನ್​ ಸಿನಿಮಾಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ವಿಶೇಷ ಕಥೆಯನ್ನು ಹೆಣೆದಿರುವ ಅವರು, ಪ್ರಭಾಸ್​ಗೆ ಆ್ಯಕ್ಷನ್​-ಕಟ್ ಹೇಳಲು ಮುಂದಾಗಿದ್ದಾರೆ.

ಪ್ರಭಾಸ್ ಜತೆ ರೊಮ್ಯಾನ್ಸ್ ಮಾಡಲಿದ್ದಾರೆ ಕತ್ರಿನಾ ಕೈಫ್; ಕೌತುಕ ಮೂಡಿಸಿದ ಬಿಗ್ ಬಜೆಟ್ ಚಿತ್ರ
ಪ್ರಭಾಸ್​-ಕತ್ರಿನಾ ಕೈಫ್​
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: May 02, 2021 | 4:21 PM

ಬಾಹುಬಲಿ ಸಿನಿಮಾ ತೆರೆಕಂಡ ನಂತರದಲ್ಲಿ ಪ್ರಭಾಸ್​ ಸ್ಟಾರ್​​ಗಿರಿ ದೊಡ್ಡದಾಗಿದೆ. ಅವರಿಗೆ ಬಾಲಿವುಡ್​ನಿಂದಲೂ ಆಫರ್​ ಬರುತ್ತಿವೆ. ಸದ್ಯ, ಪ್ರಭಾಸ್​ ಮೂರು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜತೆಗೆ ಮತ್ತೊಂದು ಸಿನಿಮಾವನ್ನು ಅವರು ಸೈಲೆಂಟ್​ ಆಗಿ ಒಪ್ಪಿಕೊಂಡಿದ್ದಾರೆ. ಈ ಚಿತ್ರಕ್ಕೆ ಕತ್ರಿನಾ ಕೈಫ್​ ನಾಯಕಿ ಎನ್ನಲಾಗುತ್ತಿದೆ. ಸದ್ಯ ಈ ವಿಚಾರ ಕೇಳಿ ಪ್ರಭಾಸ್​ ಅಭಿಮಾನಿಗಳು ಸಖತ್​ ಥ್ರಿಲ್​ ಆಗಿದ್ದಾರೆ.

​ರಾಧೆ ಶ್ಯಾಮ್​, ಆದಿಪುರುಷ್​ ಹಾಗೂ ಸಲಾರ್​ ಸಿನಿಮಾಗಳಲ್ಲಿ ಪ್ರಭಾಸ್ ಬ್ಯುಸಿ ಆಗಿದ್ದಾರೆ. ಈ ಎಲ್ಲಾ ಚಿತ್ರಗಳ ಕೆಲಸವನ್ನು ಸರಿದೂಗಿಸಿಕೊಂಡು ಸಾಗುತ್ತಿದ್ದಾರೆ ಪ್ರಭಾಸ್​. ಹೀಗಿರುವಾಗಲೇ ಅವರಿಗೆ ಬಾಲಿವುಡ್ ನಿರ್ದೇಶಕ ಸಿದ್ಧಾರ್ಥ್​ ಆನಂದ್​ ಕಥೆ ಒಂದನ್ನು ಹೇಳಿದ್ದಾರೆ. ಈ ಕಥೆ ಪ್ರಭಾಸ್​ಗೆ ಇಷ್ಟವಾಗಿದ್ದು, ಅವರ ಜತೆ ಕೆಲಸ ಮಾಡೋಕೆ ಉತ್ಸಾಹ ತೋರಿದ್ದಾರೆ.

ಸಿದ್ಧಾರ್ಥ್​ ಆನಂದ್​ ಕಾರ್ಯವೈಖರಿ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರ ನಿರ್ದೇಶನದ ‘ವಾರ್​’ ಸಿನಿಮಾ ದೊಡ್ಡ ಮೊಟ್ಟದಲ್ಲಿ ಹಿಟ್​ ಆಗಿತ್ತು. ಈ ಸಿನಿಮಾದಲ್ಲಿ ಆ್ಯಕ್ಷನ್​ ದೃಶ್ಯಗಳು ಹೇರಳವಾಗಿದ್ದವು. ಸದ್ಯ ‘ಪಠಾಣ್​’ ಚಿತ್ರದ ಕೆಲಸದಲ್ಲಿ ಸಿದ್ಧಾರ್ಥ್​ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಮೂಲಕ ಶಾರುಖ್​ ಖಾನ್​ ಕಂಬ್ಯಾಕ್​ ಮಾಡುತ್ತಿರುವುದು ವಿಶೇಷ.

ಈಗ ಸಿದ್ಧಾರ್ಥ್​ ಮತ್ತೊಂದು ಆ್ಯಕ್ಷನ್​ ಸಿನಿಮಾಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ವಿಶೇಷ ಕಥೆಯನ್ನು ಹೆಣೆದಿರುವ ಅವರು, ಪ್ರಭಾಸ್​ಗೆ ಆ್ಯಕ್ಷನ್​ ಕಟ್ ಹೇಳಲು ಮುಂದಾಗಿದ್ದಾರೆ.  ಬಹುದೊಡ್ಡ ಬಜೆಟ್​ನಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. ಈ ಚಿತ್ರಕ್ಕೆ ಕತ್ರಿನಾ ನಾಯಕಿ ಎನ್ನಲಾಗುತ್ತಿದೆ.

2014ರಲ್ಲಿ ತೆರೆಗೆ ಬಂದ ಬ್ಯಾಂಗ್​ ಬ್ಯಾಂಗ್​ ಸಿನಿಮಾದಲ್ಲಿ ಸಿದ್ಧಾರ್ಥ್​ ಹಾಗೂ ಕತ್ರಿನಾ ಒಟ್ಟಾಗಿ ಕೆಲಸ ಮಾಡಿದ್ದರು. ಕತ್ರಿನಾ ನಟನೆಯನ್ನು ಸಿದ್ಧಾರ್ಥ್​ ತುಂಬಾನೇ ಮೆಚ್ಚಿದ್ದರು. ಹೀಗಾಗಿ ಮತ್ತೊಮ್ಮೆ ಅವರ ಜತೆ ಕೆಲಸ ಮಾಡುವ ಆಲೋಚನೆಯಲ್ಲಿ ಸಿದ್ಧಾರ್ಥ್​ ಇದ್ದಾರೆ.

ಪ್ರಭಾಸ್​ ಸಿನಿಮಾ ಕೆಲಸಗಳು ಪೂರ್ಣಗೊಳ್ಳಲು ಇನ್ನೂ ಸಾಕಷ್ಟು ಸಮಯಬೇಕು. ಸಿದ್ಧಾರ್ಥ್​ ನಿರ್ದೇಶನದ ಪಠಾಣ್​ ಚಿತ್ರದ ಕೆಲಸಗಳು ಸಾಕಷ್ಟು ಬಾಕಿ ಉಳಿದಿವೆ. ಹೀಗಾಗಿ, ಸದ್ಯಕ್ಕಂತೂ ಸಿನಿಮಾ ಸೆಟ್ಟೇರುವುದು ಅನುಮಾನವೇ. ಆದರೆ, ಸಿನಿಮಾ ಸೆಟ್ಟೇರುವ ಮೊದಲೇ ಸಾಕಷ್ಟು ಕುತೂಹಲ ಸೃಷ್ಟಿಸಿದ್ದಂತೂ ಸುಳ್ಳಲ್ಲ.

ಇದನ್ನೂ ಓದಿ: ಪ್ರಭಾಸ್, ರಾಮ್​ ಚರಣ್​, ಮಹೇಶ್​ ಬಾಬು​ ಕ್ವಾರಂಟೈನ್​; ಟಾಲಿವುಡ್​ನಲ್ಲಿ ಹೆಚ್ಚಾಯ್ತು ಕೊರೊನಾ ಕಾಟ

ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO