AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಭಾರತಕ್ಕೆ ಕಾಲಿಡಲಿದ್ದಾರೆ ಬಾಲಿವುಡ್​ ಬೆಡಗಿ ಕತ್ರಿನಾ ಕೈಫ್​!

ವಿಜಯ್​-ಕತ್ರಿನಾ ನಟಿಸುತ್ತಿರುವ ಸಿನಿಮಾ ಒಂದೇ ಬಾರಿಗೆ ಹಿಂದಿ, ತೆಲುಗು ಹಾಗೂ ತಮಿಳು ಭಾಷೆಯಲ್ಲಿ ತೆರೆಗೆ ಬರುತ್ತಿದೆ. ಈ ಮೂಲಕ ಕತ್ರಿನಾ ದಕ್ಷಿಣ ಭಾರತಕ್ಕೆ ಕಾಲಿಡುತ್ತಿದ್ದಾರೆ.

ದಕ್ಷಿಣ ಭಾರತಕ್ಕೆ ಕಾಲಿಡಲಿದ್ದಾರೆ ಬಾಲಿವುಡ್​ ಬೆಡಗಿ ಕತ್ರಿನಾ ಕೈಫ್​!
ಕತ್ರಿನಾ ಕೈಫ್​
ರಾಜೇಶ್ ದುಗ್ಗುಮನೆ
| Edited By: |

Updated on: May 10, 2021 | 5:16 PM

Share

ಹಿಂದಿ ಚಿತ್ರರಂಗದ ಸಾಕಷ್ಟು ಸ್ಟಾರ್​ ನಟಿಯರು ದಕ್ಷಿಣದತ್ತ ಮುಖ ಮಾಡುತ್ತಿದ್ದಾರೆ. ದಕ್ಷಿಣ ಭಾರತದ ಚಿತ್ರಗಳು ಪ್ಯಾನ್​ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರುತ್ತಿರುವುದರಿಂದ ಸಹಜವಾಗಿಯೇ ಬಾಲಿವುಡ್​ ನಟಿಯರು ಇತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ನಟಿ ಶ್ರದ್ಧಾ ಕಪೂರ್​ ಈಗಾಗಲೇ ತೆಲುಗು ಚಿತ್ರರಂಗಕ್ಕೆ ಕಾಲಿಟ್ಟಾಗಿದೆ. ಆರ್​ಆರ್​ಆರ್​ ಚಿತ್ರದ ಮೂಲಕ ಆಲಿಯಾ ಭಟ್​ ಕೂಡ ದಕ್ಷಿಣ ಭಾರತದತ್ತ ಹೆಜ್ಜೆ ಹಾಕಿದ್ದಾರೆ. ಈಗಿನದು ನಟಿ ಕತ್ರಿನಾ ಕೈಫ್​ ಸರದಿ. ವಿಜಯ್​ ದೇವರಕೊಂಡ ಮುಂದಿನ ಚಿತ್ರಕ್ಕೆ ಕತ್ರಿನಾ ಕೈಫ್​ ನಾಯಕಿ ಎನ್ನುವ ಮಾತು ಕೇಳಿ ಬಂದಿದೆ.

ವಿಜಯ್​ ದೇವರಕೊಂಡ ನಟನೆಯ ಲೈಗರ್​ ಚಿತ್ರದ ಶೂಟಿಂಗ್​ ಕೊರೊನಾ ಕಾರಣದಿಂದ ಮುಂದೂಡಲ್ಪಟ್ಟಿದೆ. ಈ ಚಿತ್ರದ ಮೂಲಕ ಅವರು ಬಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಈ ಚಿತ್ರಕ್ಕೆ ಅನನ್ಯಾ ಪಾಂಡೆ ನಾಯಕಿ. ಹಿಂದಿ ಮಾತ್ರವಲ್ಲದೆ, ತೆಲುಗಿನಲ್ಲೂ ಸಿನಿಮಾ ತೆರೆಗೆ ಬರುತ್ತಿದೆ. ಇದರ ಜತೆಗೆ ನಿರ್ದೇಶಕರಾದ ಶಿವ ನಿರ್ವಣಾ ಮತ್ತು ಕೊರಟಾಲ ಶಿವ ಜತೆಗೆ ವಿಜಯ್​ ಒಂದೊಂದು ಸಿನಿಮಾ ಮಾಡುತ್ತಿದ್ದಾರೆ. ಈ ಪೈಕಿ ಒಂದು ಸಿನಿಮಾಗೆ ಕತ್ರಿನಾ ನಾಯಕಿಯಾಗಿ ನಟಿಸುತ್ತಿದ್ದಾರಂತೆ.

ವಿಜಯ್​-ಕತ್ರಿನಾ ನಟಿಸುತ್ತಿರುವ ಸಿನಿಮಾ ಒಂದೇ ಬಾರಿಗೆ ಹಿಂದಿ, ತೆಲುಗು ಹಾಗೂ ತಮಿಳು ಭಾಷೆಯಲ್ಲಿ ತೆರೆಗೆ ಬರುತ್ತಿದೆ. ಈ ಮೂಲಕ ಕತ್ರಿನಾ ದಕ್ಷಿಣ ಭಾರತಕ್ಕೆ ಕಾಲಿಡುತ್ತಿದ್ದಾರೆ. ಸದ್ಯ ಈ ವಿಚಾರ ಅಭಿಮಾನಿಗಳಿಗೆ ಸಖತ್ ಥ್ರಿಲ್​ ನೀಡಿದೆ. ಆದರೆ, ಚಿತ್ರ ಯಾವುದು? ಯಾವಾಗ ಸೆಟ್ಟೇರಲಿದೆ ಎಂಬ ಬಗ್ಗೆ ಯಾವುದೇ ಅಪ್​ಡೇಟ್​ ಸಿಕ್ಕಿಲ್ಲ.   ಇತ್ತೀಚೆಗೆ ಪ್ರಭಾಸ್​ ಜತೆ ಕತ್ರಿನಾ ನಟಿಸಲಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು.

ಸದ್ಯ, ಕತ್ರಿನಾ ಕೈಫ್​ ಫೋನ್​ ಭೂತ್ ಹಾಗೂ ‘ಟೈಗರ್​ 3’ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಕೊರೊನಾ ಕಾರಣದಿಂದ ಸಿನಿಮಾ ಕೆಲಸಗಳು ನಿಂತಿವೆ. ಹೀಗಾಗಿ, ಕತ್ರಿನಾ ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟಿವ್​ ಆಗಿದ್ದಾರೆ. ಮನೆಯಲ್ಲೇ ವರ್ಕೌಟ್​ ಮಾಡುತ್ತಿರುವ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಪ್ರಭಾಸ್ ಜತೆ ರೊಮ್ಯಾನ್ಸ್ ಮಾಡಲಿದ್ದಾರೆ ಕತ್ರಿನಾ ಕೈಫ್; ಕೌತುಕ ಮೂಡಿಸಿದ ಬಿಗ್ ಬಜೆಟ್ ಚಿತ್ರ

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ