AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ‘ಪುಷ್ಪ’ ಚಿತ್ರ? ಆನೆ ದಂತದ ಕಳ್ಳಸಾಗಣೆಯ ಕಥೆ ‘ಕಾಟಾಳನ್’

ಮಲಯಾಳಂನ 'ಕಾಟಾಳನ್' ಸಿನಿಮಾ ಆನೆ ದಂತ ಕಳ್ಳಸಾಗಣೆಯ ಕರಾಳ ಜಗತ್ತನ್ನು ತೆರೆದಿಡಲಿದೆ. ಭರ್ಜರಿ ಆಕ್ಷನ್ ದೃಶ್ಯಗಳು, ನೈಜ ಆನೆಗಳ ಸೆಣೆಸಾಟ ಇದರ ಹೈಲೈಟ್. ಮೇ 14ಕ್ಕೆ ಮಲಯಾಳಂ, ಕನ್ನಡ ಸೇರಿ ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿರುವ ಈ ಚಿತ್ರದಲ್ಲಿ ಸುನೀಲ್, ಆ್ಯಂಟನಿ ವರ್ಗೀಸ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಕನ್ನಡದ ಅಜನೀಶ್ ಸಂಗೀತ ಸಂಯೋಜಿಸಿದ್ದು, ಈಗಾಗಲೇ ಟೀಸರ್ ನಿರೀಕ್ಷೆ ಹೆಚ್ಚಿಸಿದೆ.

ಮತ್ತೊಂದು ‘ಪುಷ್ಪ’ ಚಿತ್ರ? ಆನೆ ದಂತದ ಕಳ್ಳಸಾಗಣೆಯ ಕಥೆ ‘ಕಾಟಾಳನ್’
ಕಾಟಾಳನ್ ಟೀಸರ್
ರಾಜೇಶ್ ದುಗ್ಗುಮನೆ
|

Updated on: Jan 17, 2026 | 3:05 PM

Share

ಅಲ್ಲು ಅರ್ಜುನ್ ನಟನೆಯ ‘ಪುಷ್ಪ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಲ್ಲಿ ರಕ್ತ ಚಂದನದ ಕಳ್ಳ ಸಾಗಣೆಯ ಕಥೆಯನ್ನು ಹೇಳಲಾಗಿತ್ತು. ಈಗ ‘ಕಾಟಾಳನ್’ ಹೆಸರಿನ ಮಲಯಾಳಂ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ಈ ಚಿತ್ರದ ಆನೆ ದಂತದ ಕಳ್ಳ ಸಾಗಣೆಯ ಕರಾಳ ಜಗತ್ತನ್ನು ತೆರೆದಿಡಲು ನಿರ್ದೇಶಕರು ಪ್ರಯತ್ನಿಸಿದಂತಿದೆ. ಇದರ ಜೊತೆಗೆ ಭರ್ಜರಿ ಆ್ಯಕ್ಷನ್ ಕೂಡ ಸಿನಿಮಾದಲ್ಲಿ ಇರಲಿದೆ.

‘ಕಾಟಾಳನ್’ ಸಿನಿಮಾದ ಟೀಸರ್ ರಿಲೀಸ್ ಬಿಡುಗಡೆ ಕಂಡಿದೆ. ಇದು ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚುವಂತೆ ಮಾಡಿದೆ. ಈ ಸಿನಿಮಾ ಮೇ 14ರಂದು ರಿಲೀಸ್ ಆಗಲಿದೆ. ‘ಕಾಟಾಳನ್’ ಮಲಯಾಳಂ ಚಿತ್ರ. ಈ ಸಿನಿಮಾ ಮಲಯಾಳಂ ಜೊತೆಗೆ ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿ ಭಾಷೆಯಲ್ಲಿ ಬಿಡುಗಡೆ ಕಾಣಲಿದೆ ಎಂಬುದು ವಿಶೇಷ.

ಈ ಚಿತ್ರದಲ್ಲಿ ಪಾತ್ರಗಳ ಜೊತೆಗೆ ಆನೆಗಳು ಕೂಡ ಹೈಲೈಟ್ ಆಗಿವೆ. ಆನೆಗಳ ಜೊತೆಗಿನ ಸಾಹಸ ದೃಶ್ಯ ಟೀಸರ್​​​ನಲ್ಲಿ ಗಮನ ಸೆಳೆದಿವೆ. ದಂತದ ಕಳ್ಳಸಾಗಣೆ ವಿಷಯ ಕೂಡ ಹೈಲೈಟ್ ಆಗಿದೆ. ಸಾಮಾನ್ಯವಾಗಿ ಆನೆಗಳ ಜೊತೆಗಿನ ಸೆಣೆಸಾಟ ಎಂದಾಗ ಗ್ರಾಫಿಕ್ಸ್ ಬಳಸುತ್ತಾರೆ. ಆದರೆ, ನೈಜವಾಗಿ ಇದನ್ನು ಚಿತ್ರೀಕರಿಸಲಾಗಿದೆ. ಅಂತರಾಷ್ಟ್ರೀಯ ಸ್ಟಂಟ್ ಕೋ-ಆರ್ಡಿನೇಟರ್ ಕೇಚಾ ಖಾನ್ಫಕ್ಡಿ ನೇತೃತ್ವದಲ್ಲಿ ಥೈಲ್ಯಾಂಡ್‌ನಲ್ಲಿ ಸಾಹಸ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ.

‘ಕಾಟಾಳನ್’ ಸಿನಿಮಾನ ಪೌಲ್ ಜಾರ್ಜ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಆ್ಯಂಟನಿ ವರ್ಗೀಸ್, ‘ಪುಷ್ಪ’ ಖ್ಯಾತಿಯ ತೆಲುಗು ನಟ ಸುನೀಲ್, ಕಬೀರ್ ಸಿಂಗ್, ದುಶಾರಾ ವಿಜಯನ್ ಮೊದಲಾದವರು ನಟಿಸಿದ್ದಾರೆ. ಯಾವುದೇ ಸಿನಿಮಾ ಯಶಸ್ಸು ಕಾಣಬೇಕು ಎಂದರೆ ಸಂಗೀತದ ಪಾತ್ರ ದೊಡ್ಡದಿರುತ್ತದೆ. ಈ ಚಿತ್ರಕ್ಕೆ ಕನ್ನಡದ ಬಿ. ಅಜನೀಶ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಟೀಸರ್​​ನ ಹಿನ್ನೆಲೆ ಸಂಗೀತ ಗಮನ ಸೆಳೆಯುವ ರೀತಿಯಲ್ಲಿದೆ.

ಇದನ್ನೂ ಓದಿ: Eko: ಮಲಯಾಳಂ ಸಿನಿಮಾ ಮೂಲಕ ಮತ್ತೊಮ್ಮೆ ಯಶಸ್ಸು ಕಂಡ ರಾಜ್ ಬಿ. ಶೆಟ್ಟಿ

ಕ್ಯೂಬ್ ಎಂಟರ್​​​ಟೇನ್​​​ಮೆಂಟ್ ಬ್ಯಾನರ್ ಅಡಿಯಲ್ಲಿ ಶರೀಫ್‌ ಮೊಹಮ್ಮದ್ ಚಿತ್ರ ನಿರ್ಮಿಸಿದ್ದಾರೆ. ಸಿನಿಮಾ ರಿಲೀಸ್​​ಗೂ ಮೊದಲೇ ಸದ್ದು ಮಾಡುತ್ತಿದ್ದು, ಒಟಿಟಿ ಹಾಗೂ ಟಿವಿ ಹಕ್ಕಿಗೆ ಬೇಡಿಕೆ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ