AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ವಾರಕ್ಕೆ ‘ಕೆಡಿ’ ಸಿನಿಮಾ ಗಳಿಕೆ ಮಾಡಿದ್ದೆಷ್ಟು? ಇಲ್ಲಿದೆ ಲೆಕ್ಕಾಚಾರ

ಕೆಡಿ ಸಿನಿಮಾ 'ಸರ್ಸೆ ಸರ್ಸೆ' ಹಾಡು ಹಾಗೂ ಟ್ರೇಲರ್ ವಿವಾದಗಳ ನಂತರವೂ ಏಪ್ರಿಲ್ 30ರಂದು ಯಶಸ್ವಿಯಾಗಿ ತೆರೆ ಕಂಡಿತು. ಧ್ರುವ ಸರ್ಜಾ ನಟನೆಯ ಈ ರೆಟ್ರೋ ಶೈಲಿಯ ಚಿತ್ರ ಒಂದು ವಾರದಲ್ಲಿ ಉತ್ತಮ ಕಲೆಕ್ಷನ್ ಮಾಡಿದೆ. ಅನೇಕ ಅಡೆತಡೆಗಳನ್ನು ಮೆಟ್ಟಿನಿಂತು ಸಕಾರಾತ್ಮಕ ಪ್ರತಿಕ್ರಿಯೆ ಪಡೆದಿರುವ 'ಕೆಡಿ' ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ಮುಂದುವರಿಸಿದೆ.

ಒಂದು ವಾರಕ್ಕೆ ‘ಕೆಡಿ’ ಸಿನಿಮಾ ಗಳಿಕೆ ಮಾಡಿದ್ದೆಷ್ಟು? ಇಲ್ಲಿದೆ ಲೆಕ್ಕಾಚಾರ
ಕೆಡಿ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: May 07, 2026 | 7:45 AM

Share

‘ಕೆಡಿ’ ಸಿನಿಮಾ (KD Movie) ವಿವಾದಗಳ ಮೇಲೆ ವಿವಾದ ಮಾಡಿಕೊಂಡಿತು. ಮೊದಲು ‘ಸರ್ಸೆ ಸರ್ಸೆ’ ಹಾಡಿನ ಕಾರಣಕ್ಕೆ ವಿವಾದ ಸೃಷ್ಟಿ ಆದರೆ, ನಂತರ ಟ್ರೇಲರ್ ವಿಷಯದಲ್ಲಿ ತೊಂದರೆ ಆಯಿತು. ‘ಸರ್ಸೆ ಸರ್ಸೆ’ ಹಾಡನ್ನು ಯೂಟ್ಯೂಬ್ ಹಾಗೂ ಸಿನಿಮಾದಿಂದ ತೆಗೆಯಲಾಗಿದೆ. ಟ್ರೇಲರ್ ಕೂಡ ಯೂಟ್ಯೂಬ್​​ನಿಂದ ತೆಗೆದು ಮತ್ತೆ ಹಾಕಲಾಗಿದೆ. ಇಷ್ಟೆಲ್ಲ ಅಡೆತಡೆಗಳ ಬಳಿಕ ಸಿನಿಮಾ ರಿಲೀಸ್ ಆದರೂ ಮೆಚ್ಚುಗೆ ಪಡೆಯಿತು. ಈ ಚಿತ್ರ ಬಾಕ್ಸ್ ಆಫೀಸ್​​ನಲ್ಲಿಯೂ ಉತ್ತಮ ಕಲೆಕ್ಷನ್ ಮಾಡುತ್ತಿದೆ. ಹಾಗಾದರೆ, ಸಿನಿಮಾ ಒಂದು ವಾರದಲ್ಲಿ ಮಾಡಿದ ಗಳಿಕೆ ಎಷ್ಟು? ಆ ಬಗ್ಗೆ ಇಲ್ಲಿದೆ ವಿವರ.

‘ಕೆಡಿ’ ಸಿನಿಮಾ ಏಪ್ರಿಲ್ 30ರಂದು ರಿಲೀಸ್ ಆಯಿತು. ಈಗ ಚಿತ್ರ ರಿಲೀಸ್ ಆಗಿ ಏಳು ದಿನ ಕಳೆದಿದೆ. ಮೇ 4ರಂದು ಸಿನಿಮಾದ ಗಳಿಕೆ ಕೊಂಚ ಕಡಿಮೆ ಆಗಿದೆ. ಸಿನಿಮಾ ಕೇವಲ 84 ಲಕ್ಷ ರೂಪಾಯಿ ಗಳಿಕೆ ಮಾಡಿದೆ. ಹಾಗಾದರೆ, ಸಿನಿಮಾದ ಒಟ್ಟಾರೆ ಗಳಿಕೆ ಎಷ್ಟು? ಅದಕ್ಕೂ ಉತ್ತರ ಇದೆ.

‘ಕೆಡಿ’ ಸಿನಿಮಾ ಈವರೆಗೆ 16.83 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ಈ ವಾರ ಯಾವುದೇ ದೊಡ್ಡ ಸಿನಿಮಾಗಳು ತೆರೆಗೆ ಬರುತ್ತಿಲ್ಲ. ಹೀಗಾಗಿ, ಈ ವಾರವೂ ಸಿನಿಮಾ ಉತ್ತಮವಾಗಿ ಗಳಿಕೆ ಮಾಡಬಹುದು. ಈ ಚಿತ್ರದ ನೆಟ್ ಕಲೆಕ್ಷನ್ 14.47 ಕೋಟಿ ರೂಪಾಯಿ ಇದೆ.

ಇದನ್ನೂ ಓದಿ: ಸೋಮವಾರವೂ ‘ಕೆಡಿ’ ಭರ್ಜರಿ ಕಲೆಕ್ಷನ್; ಕೆವಿಎನ್​​ಗೆ ಒಂದೇ ದಿನ ಡಬಲ್ ಧಮಾಕ

‘ಕೆಡಿ’ ಸಿನಿಮಾ ಬಗ್ಗೆ ಕೆಲವರು ಪಾಸಿಟಿವ್ ಆಗಿ ಮಾತನಾಡಿದ್ದಾರೆ. ಈ ಚಿತ್ರದಲ್ಲಿ ಧ್ರುವ ಸರ್ಜಾ ಜೊತೆ ರೀಷ್ಮಾ ನಾಣಯ್ಯ, ರವಿಚಂದ್ರನ್, ಸಂಜಯ್ ದತ್, ಶಿಲ್ಪಾ ಶೆಟ್ಟಿ, ರಮೇಶ್ ಅರವಿಂದ್, ನೋರಾ ಫತೇಹಿ, ಕಿಚ್ಚ ಸುದೀಪ್ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾ ರೆಟ್ರೋ ಶೈಲಿಯಲ್ಲಿ ಮೂಡಿ ಬಂದಿದೆ. ಈ ಚಿತ್ರದ ಒಟ್ಟಾರೆ ಎಷ್ಟು ಗಳಿಕೆ ಮಾಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಟಿವಿ ಹಕ್ಕು, ಒಟಿಟಿ ಹಕ್ಕು ಒಳ್ಳೆಯ ಬೆಲೆಗೆ ಮಾರಾಟ ಆಗಿದೆ ಎಂದು ಹೇಳಲಾಗುತ್ತಾ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್