AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್​-ಸಾರಾ ಡ್ರಗ್ಸ್​ ತೆಗೆದುಕೊಳ್ಳುತ್ತಿದ್ದರಾ? ಕೊನೆಗೂ ಕಳಚಿತು ಕಳಂಕ

ಸುಶಾಂತ್​ ಸಿಂಗ್​ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ಅವರನ್ನು ವಿಚಾರಣೆಗೆ ಒಳಪಡಿಸಿದಾಗ ಅವರು ಕೆಲವು ಶಾಕಿಂಗ್​ ವಿಚಾರಗಳನ್ನು ಬಾಯ್ಬಿಟ್ಟಿದ್ದರು.

ಸುಶಾಂತ್​-ಸಾರಾ ಡ್ರಗ್ಸ್​ ತೆಗೆದುಕೊಳ್ಳುತ್ತಿದ್ದರಾ? ಕೊನೆಗೂ ಕಳಚಿತು ಕಳಂಕ
ಸುಶಾಂತ್​-ಸಾರಾ
ರಾಜೇಶ್ ದುಗ್ಗುಮನೆ
| Edited By: |

Updated on:Jun 09, 2021 | 3:20 PM

Share

ಬಾಲಿವುಡ್​ ನಟ ಸುಶಾಂತ್​ ಸಿಂಗ್​ ಸಾವಿನ ಪ್ರಕರಣ ನಾನಾ ಕವಲುಗಳನ್ನು ಪಡೆದುಕೊಂಡಿದೆ. ಸುಶಾಂತ್​ ಸಿಂಗ್ ಅವರದ್ದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಒಂದು ಕಡೆಯಲ್ಲಿ ಚರ್ಚೆಯಾದರೆ, ಮತ್ತೊಂದು ಕಡೆಯಲ್ಲಿ ಅವರು ಡ್ರಗ್ಸ್​ ತೆಗೆದುಕೊಳ್ಳುತ್ತಿದ್ದರೋ ಅಥವಾ ಇಲ್ಲವೋ ಎನ್ನುವ ಬಗ್ಗೆ ಚರ್ಚೆ ಆಗುತ್ತಿದೆ. ಹೀಗಿರುವಾಗಲೇ ಸುಶಾಂತ್​ ಬಗ್ಗೆ ಬಾಲಿವುಡ್​ ನಟನೋರ್ವ ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ.

ಸುಶಾಂತ್​ ಸಿಂಗ್​ ಆತ್ಮಹತ್ಯೆ ನಂತರದಲ್ಲಿ ಡ್ರಗ್ ವಿಚಾರ ಬೆಳಕಿಗೆ ಬಂದಿತ್ತು. ಹೀಗಾಗಿ ಮಾದಕವಸ್ತು ನಿಯಂತ್ರಣ ಮಂಡಳಿ ಈ ಪ್ರಕರಣದಲ್ಲಿ ತನಿಖೆ ಆರಂಭಿಸಿತ್ತು. ಸುಶಾಂತ್​ ಸಿಂಗ್​ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ಅವರನ್ನು ವಿಚಾರಣೆಗೆ ಒಳಪಡಿಸಿದಾಗ ಅವರು ಕೆಲವು ಶಾಕಿಂಗ್​ ವಿಚಾರಗಳನ್ನು ಬಾಯ್ಬಿಟ್ಟಿದ್ದರು.

ಸುಶಾಂತ್​ ಸಿಂಗ್​ ಹಾಗೂ ಸೈಫ್​ ಅಲಿ ಖಾನ್​ ಮಗಳು ಸಾರಾ ಅಲಿ ಖಾನ್​, ಕೇದಾರ್​ನಾಥ್​ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾ ಶೂಟಿಂಗ್​ ವೇಳೆ ಸಾರಾ ಹಾಗೂ ಸುಶಾಂತ್​ ಡ್ರಗ್​ ತೆಗೆದುಕೊಳ್ಳುತ್ತಿದ್ದರು ಎಂದು ರಿಯಾ ಎನ್​ಸಿಬಿ ಎದುರು ಹೇಳಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರದ ಬಗ್ಗೆ ಕೇದಾರ್​​ನಾಥ್​​​ ಸಿನಿಮಾದಲ್ಲಿ ನಟಿಸಿದ್ದ ನಿತೀಶ್​ ಭಾರದ್ವಾಜ್​ ಮಾತನಾಡಿದ್ದಾರೆ. ಅಲ್ಲದೆ, ಈ ವಿಚಾರದ ಬಗ್ಗೆ ಸ್ಪಷ್ಟನೆ ಕೂಡ ನೀಡಿದ್ದಾರೆ.

‘ಸಾರಾ ಮತ್ತು ನಾನು ಒಮ್ಮೆ ಡ್ರಗ್​ ವಿಚಾರದ ಬಗ್ಗೆ ಮಾತನಾಡಿದ್ದೆವು. ‘ಬಾಲಿವುಡ್​ನಲ್ಲಿ ಡ್ರಗ್​ ಸಮಸ್ಯೆ ಇದೆ’ ಎಂದು ಸಾರಾ ಹೇಳಿಕೊಂಡಿದ್ದರು. ಈ ವೇಳೆ ನಾನು ಸಾರಾ ಬಳಿ ಡ್ರಗ್​​ನಿಂದ ದೂರವೇ ಉಳಿಯುವಂತೆ ಹೇಳಿದ್ದೆ. ಆಗ ಅವರು ಡ್ರಗ್​ ಸುದ್ದಿಗೆ ಹೋಗಿಲ್ಲ, ಹೋಗುವುದೂ ಇಲ್ಲ ಎಂಬುದಾಗಿ ಭಾಷೆ ನೀಡಿದ್ದರು’ ಎಂದಿದ್ದಾರೆ ನಿತೀಶ್​.

‘ಸುಶಾಂತ್​ ಸೆಟ್​ನಲ್ಲಿ ಎಲ್ಲಾದರೂ ಒಮ್ಮೆ ಸಿಗರೇಟ್​ ಸೇದುತ್ತಿದ್ದರು. ಆದರೆ, ಅವರು ಎಂದಿಗೂ ಡ್ರಗ್​ ತೆಗೆದುಕೊಂಡಿದ್ದನ್ನು ನಾನಂತೂ ನೋಡಿಲ್ಲ. ಡ್ರಗ್​ ಸೇವಿಸಿದಾಗ ಕಣ್ಣು ಊದಿಕೊಳ್ಳುತ್ತದೆಯಂತೆ. ಆದರೆ, ನಾನು ಸುಶಾಂತ್​-ಸಾರಾ ಕಣ್ಣನ್ನು ಎಂದಿಗೂ ಆ ರೀತಿ ನೋಡಲೇ ಇಲ್ಲ’ ಎಂದು ಹೇಳುವ ಮೂಲಕ ನಿತೀಶ್​ ಸ್ಪಷ್ಟನೆ ನೀಡಿದ್ದಾರೆ.

ಸುಶಾಂತ್​ ಸಿಂಗ್​ ಬಗ್ಗೆ ನಿತೀಶ್​ ಭಾರದ್ವಾಜ್ ನೀಡಿದ ಹೇಳಿಕೆ ಪ್ರಮುಖವಾಗಲಿದೆ. ರಿಯಾ ಹೇಳಿದ ಹೇಳಿಕೆ ಆಧರಿಸಿ ನಿತೀಶ್​ ಅವರನ್ನು ಕರೆಸಿ ವಿಚಾರಣೆ ನಡೆಸಿದರೆ, ಅವರು ನೀಡುವ ಹೇಳಿಕೆ ಮಹತ್ವದ್ದಾಗಲಿದೆ. ಸದ್ಯ, ನಿತೀಶ್​ ನೀಡಿರುವ ಹೇಳಿಕೆ ಕೇಳಿ ಅನೇಕರು ಸುಶಾಂತ್​-ಸಾರಾ ಮೇಲಿದ್ದ ಕಳಂಕ ಕಳೆಯಿತು ಎಂದಿದ್ದಾರೆ.

ಇದನ್ನೂ ಓದಿ: ಸೈಫ್​ ಪುತ್ರಿಯ ಗಾಂಜಾ ಪುರಾಣ ಬಯಲು ಮಾಡಿದ ರಿಯಾ ಚಕ್ರವರ್ತಿ; ಎನ್​ಸಿಬಿ ಮುಂದೆ ಶಾಕಿಂಗ್​ ಹೇಳಿಕೆ

ಸುಶಾಂತ್ ಜತೆ ಅವರ ಅಕ್ಕ-ಭಾವನೂ ಡ್ರಗ್ಸ್​ ಸೇವಿಸಿದ್ದಾರೆ; ಪ್ರಕರಣಕ್ಕೆ ಟ್ವಿಸ್ಟ್​ ಕೊಟ್ಟ ರಿಯಾ ಚಕ್ರವರ್ತಿ

Published On - 2:47 pm, Wed, 9 June 21

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ