AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಕೀರ್ತಿ ಸುರೇಶ್​ಗೆ ಬಾಡಿ ಶೇಮಿಂಗ್; ಸರ್ಜರಿ ವದಂತಿಗಳಿಗೆ ಖಡಕ್ ತಿರುಗೇಟು

ಖ್ಯಾತ ನಟಿ ಕೀರ್ತಿ ಸುರೇಶ್ ಅವರಿಗೂ ಬಾಡಿ ಶೇಮಿಂಗ್ ಕಾಟ ತಪ್ಪಿಲ್ಲ. ಆ ಬಗ್ಗೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ತೆಳ್ಳಗಿದ್ದರೂ ಕಷ್ಟ, ದಪ್ಪ ಇದ್ದರೂ ಕಷ್ಟ ಎಂಬ ಪರಿಸ್ಥಿತಿ ತಮಗೆ ಎದುರಾಗಿತ್ತು ಎಂದು ಅವರು ಹೇಳಿದ್ದಾರೆ. 2013ರಿಂದ ಈವರೆಗಿನ ತಮ್ಮ ಜರ್ನಿಯನ್ನು ಕೀರ್ತಿ ಸುರೇಶ್ ಮೆಲುಕು ಹಾಕಿದ್ದಾರೆ.

ನಟಿ ಕೀರ್ತಿ ಸುರೇಶ್​ಗೆ ಬಾಡಿ ಶೇಮಿಂಗ್; ಸರ್ಜರಿ ವದಂತಿಗಳಿಗೆ ಖಡಕ್ ತಿರುಗೇಟು
Keerthy Suresh
ಮದನ್​ ಕುಮಾರ್​
|

Updated on: May 18, 2026 | 7:44 PM

Share

ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕೀರ್ತಿ ಸುರೇಶ್ ಅವರು ಚಿತ್ರರಂಗದಲ್ಲಿ ತಾವು ಎದುರಿಸಿದ ಬಾಡಿ ಶೇಮಿಂಗ್ (Body Shaming) ಮತ್ತು ಪ್ಲಾಸ್ಟಿಕ್ ಸರ್ಜರಿ ವದಂತಿಗಳ ಕುರಿತು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಳ್ಳುವ ಮೂಲಕ ಮನದ ಮಾತುಗಳನ್ನು ಹೊರಹಾಕಿದ್ದಾರೆ. ಸದಾ ಸೌಮ್ಯವಾಗಿ ಕಾಣಿಸಿಕೊಳ್ಳುವ ನಟಿ, ಇತ್ತೀಚೆಗೆ ತಮಗಾದ ದೈಹಿಕ ಮತ್ತು ಮಾನಸಿಕ ಹಿನ್ನಡೆಯ ಬಗ್ಗೆಯೂ ಮುಕ್ತವಾಗಿ ಮಾತನಾಡಿದ್ದಾರೆ. ಜಿಮ್‌ನಲ್ಲಿ ತಾವು ಕಷ್ಟಪಟ್ಟು ವರ್ಕೌಟ್ ಮಾಡುತ್ತಿರುವ ಹಳೆಯ ವಿಡಿಯೋವನ್ನು ಹಂಚಿಕೊಂಡಿರುವ ಕೀರ್ತಿ ಸುರೇಶ್ (Keerthy Suresh), ‘ಫಿಟ್‌ನೆಸ್ ಎಂಬುದು ನನ್ನ ಜೀವನದ ಅತಿ ದೊಡ್ಡ ಗುರು’ ಎಂದು ಬರೆದುಕೊಂಡಿದ್ದಾರೆ.

‘2013ರಲ್ಲಿ ನಾನು ನಟಿಯಾಗಿ ಕೆರಿಯರ್ ಆರಂಭಿಸಿದಾಗ ನನಗೇನೂ ತಿಳಿಯದ ಮಗುವಿನಂತಿದ್ದೆ. ಜಿಮ್ ನನಗೆ ಒಗ್ಗುವುದಿಲ್ಲ ಎಂದೇ ನಾನು ಭಾವಿಸಿದ್ದೆ. ಆದರೆ 2018ರ ಮಹಾನಟಿ ಸಿನಿಮಾ ಮುಗಿದ ಬಳಿಕ ಸಿಕ್ಕ ಬಿಡುವಿನಲ್ಲಿ, ನಾನೇಕೆ ಜಿಮ್​ಗೆ ಹೋಗಬಾರದು ಎಂದು ಯೋಚಿಸಿದೆ’ ಎಂದು ಕೀರ್ತಿ ಬರೆದಿದ್ದಾರೆ. ಕಠಿಣ ಶ್ರಮವಹಿಸಿ ಕೀರ್ತಿ ಅವರು ಕೇವಲ 9 ತಿಂಗಳಲ್ಲಿ ಬರೋಬ್ಬರಿ 10 ಕೆಜಿ ತೂಕ ಇಳಿಸಿಕೊಂಡಿದ್ದರು.

ತೂಕ ಇಳಿಸಿಕೊಂಡು ಫಿಟ್ ಆದಾಗ ತಮಗೆ ಎದುರಾದ ಕಹಿ ಅನುಭವವನ್ನು ಹಂಚಿಕೊಂಡ ಕೀರ್ತಿ, ‘ನಾನು ತೂಕ ಇಳಿಸಿಕೊಂಡಾಗ ಜನರು ನನ್ನನ್ನು ವೀಕ್ ಎಂದು ಕರೆದರು. ಅಷ್ಟೇ ಅಲ್ಲದೇ, ನಾನು ಸರ್ಜರಿ ಮಾಡಿಸಿಕೊಂಡಿದ್ದೇನೆ ಎಂಬ ವದಂತಿ ಹಬ್ಬಿಸಿದರು. ನಾನು ನನ್ನ ಮುಖ ಸೇರಿದಂತೆ ಎಲ್ಲವನ್ನೂ ನೈಸರ್ಗಿಕವಾಗಿಯೇ ಇಟ್ಟುಕೊಂಡಿದ್ದೇನೆ. ಹೀಗಿರುವಾಗ ನನ್ನ ಕಠಿಣ ಶ್ರಮಕ್ಕೆ ಸರ್ಜರಿಯ ಪಟ್ಟ ಕಟ್ಟಿದಾಗ ನಿಜಕ್ಕೂ ತುಂಬಾ ಬೇಸರವಾಯಿತು’ ಎಂದು ತಮಗಾದ ನೋವನ್ನು ತೋಡಿಕೊಂಡಿದ್ದಾರೆ. ಜಿಮ್ ಜೊತೆಗೆ 2020ರಲ್ಲಿ ತಾವು ಯೋಗಾಭ್ಯಾಸ ಶುರು ಮಾಡಿದ್ದು, ಅದು ತಮ್ಮ ಜೀವನವನ್ನೇ ಬದಲಾಯಿಸಿತು ಎಂದು ಅವರು ಹೇಳಿದ್ದಾರೆ.

‘ಇಂದು ನಾನು ಫಿಟ್ ಆಗಿರುವುದಕ್ಕೆ ನನಗೆ ಹೆಮ್ಮೆಯಿದೆ. ಆದರೆ ಈಗಲೂ ಕೆಲವರು ಬಂದು, ನೀನು ದಪ್ಪಗಿದ್ದಾಗ ಚೆನ್ನಾಗಿ ಕಾಣುತ್ತಿದ್ದೆ ಎಂದು ಬಿಟ್ಟಿ ಸಲಹೆ ನೀಡುತ್ತಾರೆ. ನಾವು ದಪ್ಪಗಿದ್ದರೆ ಫಿಟ್ ಆಗಿ ಎಂದೂ, ತೆಳ್ಳಗಾದರೆ ದಪ್ಪಗಾಗಿ ಎಂದೂ ಜನರು ಹೇಳುತ್ತಾರೆ. ಈ ಜಗತ್ತು ಹೇಗೆ ವರ್ತಿಸುತ್ತದೆ ಎಂಬುದೇ ನನಗೆ ಅರ್ಥವಾಗುವುದಿಲ್ಲ’ ಎಂದು ಕೀರ್ತಿ ಸುರೇಶ್ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ರೌಡಿ ಜನಾರ್ದನ’ ವಿಜಯ್ ದೇವರಕೊಂಡ ಎದೆ ಮೇಲೆ ಕಾಲಿಟ್ಟ ನಟಿ ಕೀರ್ತಿ ಸುರೇಶ್

ಇದೇ ಪೋಸ್ಟ್‌ನಲ್ಲಿ ಇತ್ತೀಚಿನ ತಮ್ಮ ಆರೋಗ್ಯದ ಏರುಪೇರಿನ ಬಗ್ಗೆಯೂ ಕೀರ್ತಿ ಸುಳಿವು ನೀಡಿದ್ದಾರೆ. ‘ಕಳೆದ ಕೆಲವು ತಿಂಗಳುಗಳಿಂದ ನಾನು ಸಾಮಾಜಿಕ ಜಾಲತಾಣಗಳಿಂದ ದೂರವಿದ್ದೆ. ಇತ್ತೀಚೆಗೆ ನಾನು ದೈಹಿಕ ಮತ್ತು ಮಾನಸಿಕವಾಗಿ ದೊಡ್ಡ ಹಿನ್ನಡೆ ಅನುಭವಿಸಿದ್ದೇನೆ. ಆದರೆ ಈ ಪ್ರಯಾಣ ನನಗೆ ನೆನಪಿಸುವುದೇನೆಂದರೆ, ಒಂದು ವೇಳೆ ನಾನು ಎಲ್ಲಾದರೂ ಬಿದ್ದರೆ, ಕೊಂಚ ವಿರಾಮ ತೆಗೆದುಕೊಳ್ಳಬಹುದೇ ಹೊರತು, ಯಾವುದೇ ಕಾರಣಕ್ಕೂ ನಾನು ಸೋಲೊಪ್ಪಿಕೊಳ್ಳುವುದಿಲ್ಲ ’ ಎಂದು ಸವಾಲೊಡ್ಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!