AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್​ ಜೀವನದಲ್ಲಿ ಬರುವ ವಿಶೇಷ ವ್ಯಕ್ತಿ ಕೀರ್ತಿ ಸುರೇಶ್​? ಆಹಾ.. ಬೆಸ್ಟ್​ ಜೋಡಿ

ಪ್ರಭಾಸ್​ ಮದುವೆ ಯಾವಾಗ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಇದೆ. ‘ತುಂಬ ವಿಶೇಷವಾದ ವ್ಯಕ್ತಿಯೊಬ್ಬರು ಕಡೆಗೂ ನಮ್ಮ ಜೀವನದಲ್ಲಿ ಪ್ರವೇಶ ಪಡೆಯುತ್ತಿದ್ದಾರೆ’ ಎಂದು ಪ್ರಭಾಸ್​ ಅವರು ಅಭಿಮಾನಿಗಳಿಗೆ ತಿಳಿಸಿದ್ದರು. ಅದರ ಬೆನ್ನಲ್ಲೇ ಕೀರ್ತಿ ಸುರೇಶ್​ ಅವರ ಹೆಸರು ಬಲವಾಗಿ ಕೇಳಿಬರುತ್ತಿದೆ. ಅಷ್ಟೇ ಅಲ್ಲ, ಕೀರ್ತಿ ಸುರೇಶ್​ ಅವರ ಧ್ವನಿ ಕೂಡ ಕೇಳಿಸಿದೆ.

ಪ್ರಭಾಸ್​ ಜೀವನದಲ್ಲಿ ಬರುವ ವಿಶೇಷ ವ್ಯಕ್ತಿ ಕೀರ್ತಿ ಸುರೇಶ್​? ಆಹಾ.. ಬೆಸ್ಟ್​ ಜೋಡಿ
ಪ್ರಭಾಸ್​, ಕೀರ್ತಿ ಸುರೇಶ್​
ಮದನ್​ ಕುಮಾರ್​
|

Updated on: May 19, 2024 | 8:34 AM

Share

ಈಗಂತೂ ನಟ ಪ್ರಭಾಸ್​ (Prabhas) ಅವರು ದಿನದಿನವೂ ಸುದ್ದಿ ಆಗುತ್ತಿದ್ದಾರೆ. ಅದಕ್ಕೆ ಕಾರಣ ಆಗಿರುವುದು ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾ. ಹೌದು, ಈ ಸಿನಿಮಾದ ಬಿಡುಗಡೆ ದಿನಾಂಕ ಹತ್ತಿರವಾಗಿದೆ. ಹಾಗಾಗಿ ಬಿರುಸಿನಿಂದ ಪ್ರಚಾರ ಮಾಡಲಾಗುತ್ತಿದೆ. ಹೊಸ ಹೊಸ ತಂತ್ರಗಳ ಮೂಲಕ ಸಿನಿಮಾತಂಡ ಪ್ರಚಾರ ಮಾಡುತ್ತಿದೆ. ಈ ನಡುವೆ ಪ್ರಭಾಸ್​ ಅವರ ಒಂದು ಇನ್​ಸ್ಟಾಗ್ರಾಮ್​ ಸ್ಟೋರಿ ಗಮನ ಸೆಳೆದಿತ್ತು. ತಮ್ಮ ಬದುಕಿನಲ್ಲಿ ಓರ್ವ ಸ್ಪೆಷಲ್​​ ವ್ಯಕ್ತಿ ಬರಲಿದ್ದಾರೆ ಎಂದು ಅವರು ಹೇಳಿದ್ದಾರೆ. ಆ ವ್ಯಕ್ತಿ ಯಾರು ಎಂಬ ಪ್ರಶ್ನೆಗೆ ಉತ್ತರವಾಗಿ ಕೀರ್ತಿ ಸುರೇಶ್​ (Keerthy Suresh) ಹೆಸರು ಕೇಳಿಬರುತ್ತಿದೆ!

ಅಂದಹಾಗೆ, ಇದು ಪ್ರಭಾಸ್​ ಅವರ ವೈಯಕ್ತಿಕ ಜೀವನದ ವಿಷಯ ಅಲ್ಲ. ಪಕ್ಕಾ ಸಿನಿಮಾದ ವಿಚಾರ. ‘ಕಲ್ಕಿ 2898 ಎಡಿ’ ಸಿನಿಮಾದ ಪ್ರಚಾರಕ್ಕಾಗಿಯೇ ಪ್ರಭಾಸ್​ ಅವರು ಆ ರೀತಿ ಪೋಸ್ಟ್​ ಮಾಡಿದ್ದರು. ಈ ಸಿನಿಮಾದಲ್ಲಿ ಒಂದು ವಿಶೇಷ ಕಾರು ಇರಲಿದೆ. ಅದನ್ನು ತುಂಬ ಸ್ಪೆಷಲ್​ ಆಗಿ ವಿನ್ಯಾಸ ಮಾಡಲಾಗಿದೆ. ಅದಕ್ಕೆ ಬುಜ್ಜಿ ಎಂದು ಹೆಸರು ಇಡಲಾಗಿದೆ. ಆ ಕಾರು ಸಿರಿ, ಅಲೆಕ್ಸಾ ರೀತಿ ಮಾತನಾಡಲಿದೆ. ಅದಕ್ಕೆ ನಟಿ ಕೀರ್ತಿ ಸುರೇಶ್​ ಧ್ವನಿ ನೀಡಿದ್ದಾರೆ.

ಇದನ್ನೂ ಓದಿ: ಬಾಲಿವುಡ್​ಗೆ ಹೋಗಿ ಏಕಾಏಕಿ ಗ್ಲಾಮರ್​ ಅವತಾರ ತಾಳಿದ ನಟಿ ಕೀರ್ತಿ ಸುರೇಶ್​

‘ಕಲ್ಕಿ 2898 ಎಡಿ’ ಸಿನಿಮಾ ಸೈನ್ಸ್​ ಫಿಕ್ಷನ್​ ಮಾದರಿಯಲ್ಲಿ ಮೂಡಿಬರುತ್ತಿದೆ. ನಾಗ್​ ಅಶ್ವಿನ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಇದರಲ್ಲಿ ಕಥಾನಾಯಕ ಕಾಲಭೈರವ ಬಳಸುವ ವಿಶೇಷ ಕಾರಿನಲ್ಲಿ ಕೀರ್ತಿ ಸುರೇಶ್​ ಅವರ ಧ್ವನಿ ಇರಲಿದೆ. ಹೀರೋ ಏನು ಮಾಡಬೇಕು? ಎಲ್ಲಿಗೆ ಹೋಗಬೇಕು ಎಂಬುದನ್ನು ಬುಜ್ಜಿ ತಿಳಿಸುತ್ತದೆ. ಇದು ಕಥಾನಾಯಕನ ಬೆಸ್ಟ್​ ಫ್ರೆಂಡ್​ ಆಗಿರಲಿದೆ.

ಜೂನ್​ 27ರಂದು ‘ಕಲ್ಕಿ 2898 ಎಡಿ’ ಸಿನಿಮಾ ಬಿಡುಗಡೆ ಆಗಲಿದೆ. ಮೇ 22ರಂದು ಬುಜ್ಜಿ ಕಾರಿನ ಸಂಪೂರ್ಣ ಪರಿಚಯ ಮಾಡಿಕೊಡಲಾಗುವುದು. ಸಿನಿಮಾದ ಪ್ರಚಾರದಲ್ಲಿ ಕೂಡ ಈ ಕಾರು ಪ್ರಮುಖ ಪಾತ್ರ ವಹಿಸಲಿದೆ. ಈ ಸಿನಿಮಾದಲ್ಲಿ ಕಮಲ್​ ಹಾಸನ್​, ದೀಪಿಕಾ ಪಡುಕೋಣೆ, ಅಮಿತಾಭ್​ ಬಚ್ಚನ್​, ದಿಶಾ ಪಟಾನಿ ಅವರಂತಹ ಸ್ಟಾರ್​ ಕಲಾವಿದರು ನಟಿಸಿದ್ದಾರೆ. ಅಲ್ಲದೇ, ರಾಮ್​ ಗೋಪಾಲ್​ ವರ್ಮಾ, ರಾಜಮೌಳಿ, ನಾನಿ, ದುಲ್ಕರ್​ ಸಲ್ಮಾನ್​, ವಿಜಯ್​ ದೇವರಕೊಂಡ ಮುಂತಾದವರು ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ