ಪ್ರಭಾಸ್​ ಜೀವನದಲ್ಲಿ ಬರುವ ವಿಶೇಷ ವ್ಯಕ್ತಿ ಕೀರ್ತಿ ಸುರೇಶ್​? ಆಹಾ.. ಬೆಸ್ಟ್​ ಜೋಡಿ

ಪ್ರಭಾಸ್​ ಮದುವೆ ಯಾವಾಗ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಇದೆ. ‘ತುಂಬ ವಿಶೇಷವಾದ ವ್ಯಕ್ತಿಯೊಬ್ಬರು ಕಡೆಗೂ ನಮ್ಮ ಜೀವನದಲ್ಲಿ ಪ್ರವೇಶ ಪಡೆಯುತ್ತಿದ್ದಾರೆ’ ಎಂದು ಪ್ರಭಾಸ್​ ಅವರು ಅಭಿಮಾನಿಗಳಿಗೆ ತಿಳಿಸಿದ್ದರು. ಅದರ ಬೆನ್ನಲ್ಲೇ ಕೀರ್ತಿ ಸುರೇಶ್​ ಅವರ ಹೆಸರು ಬಲವಾಗಿ ಕೇಳಿಬರುತ್ತಿದೆ. ಅಷ್ಟೇ ಅಲ್ಲ, ಕೀರ್ತಿ ಸುರೇಶ್​ ಅವರ ಧ್ವನಿ ಕೂಡ ಕೇಳಿಸಿದೆ.

ಪ್ರಭಾಸ್​ ಜೀವನದಲ್ಲಿ ಬರುವ ವಿಶೇಷ ವ್ಯಕ್ತಿ ಕೀರ್ತಿ ಸುರೇಶ್​? ಆಹಾ.. ಬೆಸ್ಟ್​ ಜೋಡಿ
ಪ್ರಭಾಸ್​, ಕೀರ್ತಿ ಸುರೇಶ್​

Updated on: May 19, 2024 | 8:34 AM

ಈಗಂತೂ ನಟ ಪ್ರಭಾಸ್​ (Prabhas) ಅವರು ದಿನದಿನವೂ ಸುದ್ದಿ ಆಗುತ್ತಿದ್ದಾರೆ. ಅದಕ್ಕೆ ಕಾರಣ ಆಗಿರುವುದು ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾ. ಹೌದು, ಈ ಸಿನಿಮಾದ ಬಿಡುಗಡೆ ದಿನಾಂಕ ಹತ್ತಿರವಾಗಿದೆ. ಹಾಗಾಗಿ ಬಿರುಸಿನಿಂದ ಪ್ರಚಾರ ಮಾಡಲಾಗುತ್ತಿದೆ. ಹೊಸ ಹೊಸ ತಂತ್ರಗಳ ಮೂಲಕ ಸಿನಿಮಾತಂಡ ಪ್ರಚಾರ ಮಾಡುತ್ತಿದೆ. ಈ ನಡುವೆ ಪ್ರಭಾಸ್​ ಅವರ ಒಂದು ಇನ್​ಸ್ಟಾಗ್ರಾಮ್​ ಸ್ಟೋರಿ ಗಮನ ಸೆಳೆದಿತ್ತು. ತಮ್ಮ ಬದುಕಿನಲ್ಲಿ ಓರ್ವ ಸ್ಪೆಷಲ್​​ ವ್ಯಕ್ತಿ ಬರಲಿದ್ದಾರೆ ಎಂದು ಅವರು ಹೇಳಿದ್ದಾರೆ. ಆ ವ್ಯಕ್ತಿ ಯಾರು ಎಂಬ ಪ್ರಶ್ನೆಗೆ ಉತ್ತರವಾಗಿ ಕೀರ್ತಿ ಸುರೇಶ್​ (Keerthy Suresh) ಹೆಸರು ಕೇಳಿಬರುತ್ತಿದೆ!

ಅಂದಹಾಗೆ, ಇದು ಪ್ರಭಾಸ್​ ಅವರ ವೈಯಕ್ತಿಕ ಜೀವನದ ವಿಷಯ ಅಲ್ಲ. ಪಕ್ಕಾ ಸಿನಿಮಾದ ವಿಚಾರ. ‘ಕಲ್ಕಿ 2898 ಎಡಿ’ ಸಿನಿಮಾದ ಪ್ರಚಾರಕ್ಕಾಗಿಯೇ ಪ್ರಭಾಸ್​ ಅವರು ಆ ರೀತಿ ಪೋಸ್ಟ್​ ಮಾಡಿದ್ದರು. ಈ ಸಿನಿಮಾದಲ್ಲಿ ಒಂದು ವಿಶೇಷ ಕಾರು ಇರಲಿದೆ. ಅದನ್ನು ತುಂಬ ಸ್ಪೆಷಲ್​ ಆಗಿ ವಿನ್ಯಾಸ ಮಾಡಲಾಗಿದೆ. ಅದಕ್ಕೆ ಬುಜ್ಜಿ ಎಂದು ಹೆಸರು ಇಡಲಾಗಿದೆ. ಆ ಕಾರು ಸಿರಿ, ಅಲೆಕ್ಸಾ ರೀತಿ ಮಾತನಾಡಲಿದೆ. ಅದಕ್ಕೆ ನಟಿ ಕೀರ್ತಿ ಸುರೇಶ್​ ಧ್ವನಿ ನೀಡಿದ್ದಾರೆ.

ಇದನ್ನೂ ಓದಿ: ಬಾಲಿವುಡ್​ಗೆ ಹೋಗಿ ಏಕಾಏಕಿ ಗ್ಲಾಮರ್​ ಅವತಾರ ತಾಳಿದ ನಟಿ ಕೀರ್ತಿ ಸುರೇಶ್​

‘ಕಲ್ಕಿ 2898 ಎಡಿ’ ಸಿನಿಮಾ ಸೈನ್ಸ್​ ಫಿಕ್ಷನ್​ ಮಾದರಿಯಲ್ಲಿ ಮೂಡಿಬರುತ್ತಿದೆ. ನಾಗ್​ ಅಶ್ವಿನ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಇದರಲ್ಲಿ ಕಥಾನಾಯಕ ಕಾಲಭೈರವ ಬಳಸುವ ವಿಶೇಷ ಕಾರಿನಲ್ಲಿ ಕೀರ್ತಿ ಸುರೇಶ್​ ಅವರ ಧ್ವನಿ ಇರಲಿದೆ. ಹೀರೋ ಏನು ಮಾಡಬೇಕು? ಎಲ್ಲಿಗೆ ಹೋಗಬೇಕು ಎಂಬುದನ್ನು ಬುಜ್ಜಿ ತಿಳಿಸುತ್ತದೆ. ಇದು ಕಥಾನಾಯಕನ ಬೆಸ್ಟ್​ ಫ್ರೆಂಡ್​ ಆಗಿರಲಿದೆ.

ಜೂನ್​ 27ರಂದು ‘ಕಲ್ಕಿ 2898 ಎಡಿ’ ಸಿನಿಮಾ ಬಿಡುಗಡೆ ಆಗಲಿದೆ. ಮೇ 22ರಂದು ಬುಜ್ಜಿ ಕಾರಿನ ಸಂಪೂರ್ಣ ಪರಿಚಯ ಮಾಡಿಕೊಡಲಾಗುವುದು. ಸಿನಿಮಾದ ಪ್ರಚಾರದಲ್ಲಿ ಕೂಡ ಈ ಕಾರು ಪ್ರಮುಖ ಪಾತ್ರ ವಹಿಸಲಿದೆ. ಈ ಸಿನಿಮಾದಲ್ಲಿ ಕಮಲ್​ ಹಾಸನ್​, ದೀಪಿಕಾ ಪಡುಕೋಣೆ, ಅಮಿತಾಭ್​ ಬಚ್ಚನ್​, ದಿಶಾ ಪಟಾನಿ ಅವರಂತಹ ಸ್ಟಾರ್​ ಕಲಾವಿದರು ನಟಿಸಿದ್ದಾರೆ. ಅಲ್ಲದೇ, ರಾಮ್​ ಗೋಪಾಲ್​ ವರ್ಮಾ, ರಾಜಮೌಳಿ, ನಾನಿ, ದುಲ್ಕರ್​ ಸಲ್ಮಾನ್​, ವಿಜಯ್​ ದೇವರಕೊಂಡ ಮುಂತಾದವರು ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us