AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

18ನೇ ವಯಸ್ಸಿಗೆ ಮದುವೆ, ನಿರಂತರ ಕಿರುಕುಳ; ಕಿಟಕಿ ಸರಳಿಗೆ ನೇಣು ಬಿಗಿದುಕೊಂಡು ಯುವನಟಿಯ ಆತ್ಮಹತ್ಯೆ

ಕೋಯಿಕ್ಕೋಡ್ ಪರಂಬಿಲ್ ಬಜಾರ್​ನಲ್ಲಿ ಫ್ಲಾಟ್ ಒಂದನ್ನು ಶಹಾನಾ ಬಾಡಿಗೆಗೆ ತೆಗೆದುಕೊಂಡಿದ್ದರು. ಅವರು ಅಲ್ಲಿಯೇ ವಾಸವಾಗಿದ್ದರು. ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಅವರು ಕಿಟಕಿ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

18ನೇ ವಯಸ್ಸಿಗೆ ಮದುವೆ, ನಿರಂತರ ಕಿರುಕುಳ; ಕಿಟಕಿ ಸರಳಿಗೆ ನೇಣು ಬಿಗಿದುಕೊಂಡು ಯುವನಟಿಯ ಆತ್ಮಹತ್ಯೆ
ಶಹಾನಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:May 13, 2022 | 4:53 PM

Share

ಕೇರಳ ಮೂಲದ ಮಾಡೆಲ್ ಹಾಗೂ ನಟಿ ಶಹಾನಾ ಅವರ (Shahana) ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇನ್ನೂ ಬದುಕಿ ಬಾಳಬೇಕಿದ್ದ ನಟಿ 20ನೇ ವಯಸ್ಸಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾಸರಗೋಡಿನ (Kasaragod) ಚೆರುವತ್ತೂರ್​ನಲ್ಲಿ ಶಹಾನಾ ತಂದೆ-ತಾಯಿ ವಾಸವಾಗಿದ್ದಾರೆ. ಈ ಪ್ರಕರಣದಲ್ಲಿ ಶಹಾನಾ ಅವರ ಪತಿಯ ಬಗ್ಗೆ ಅನುಮಾನ ಮೂಡಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶಹಾನಾ ಅವರದ್ದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಕುಟುಂಬದವರು ಆರೋಪಿಸಿದ್ದಾರೆ.

ಕೋಯಿಕ್ಕೋಡ್ ಪರಂಬಿಲ್ ಬಜಾರ್​ನಲ್ಲಿ ಫ್ಲಾಟ್ ಒಂದನ್ನು ಶಹಾನಾ ಬಾಡಿಗೆಗೆ ತೆಗೆದುಕೊಂಡಿದ್ದರು. ಅವರು ಅಲ್ಲಿಯೇ ವಾಸವಾಗಿದ್ದರು. ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಅವರು ಕಿಟಕಿ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣವನ್ನು ಪೊಲೀಸರು ಅಸಹಜಸಾವು ಎಂದು ಪರಿಗಣಿಸಿದ್ದಾರೆ. ಶಹಾನಾ ಪತಿ ಸಾಜದ್ ಬಗ್ಗೆ ಈಗ ಅನುಮಾನ ಮೂಡಿಸಿದೆ. ಅವರನ್ನು ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಸಾಜದ್ ಹಾಗೂ ಶಹಾನಾ ಸುಮಾರು ಒಂದೂವರೆ ವರ್ಷಗಳ ಹಿಂದೆ ಮದುವೆ ಆಗಿದ್ದರು. ಆಗ ಶಹಾನಾಗೆ 18 ವರ್ಷ ವಯಸ್ಸು. ಈ ಸಾವಿಗೆ ಕಾರಣ ಏನು ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇವರಿಬ್ಬರು ಮದುವೆ ಆದ ನಂತರದಲ್ಲಿ ಸುಖವಾಗಿ ಇರಲಿಲ್ಲ. ಹಣ ನೀಡುವಂತೆ ಶಹಾನಾಗೆ ಸಾಜದ್ ಸದಾ ಪೀಡಿಸುತ್ತಿದ್ದ. ಇದು ನೆರೆಯವರ ಗಮನಕ್ಕೂ ಬಂದಿತ್ತು ಎನ್ನಲಾಗಿದೆ. ಈಗ ಶಹಾನಾ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಇದನ್ನೂ ಓದಿ
Image
ಹೇಗಿದೆ ಮಹೇಶ್ ಬಾಬು ನಟನೆಯ ‘ಸರ್ಕಾರು ವಾರಿ ಪಾಟ’ ಸಿನಿಮಾದ ಮೊದಲಾರ್ಧ? ಇಲ್ಲಿದೆ ಮಾಹಿತಿ
Image
ಬಾಲಿವುಡ್ ಬಗ್ಗೆ ಮಹೇಶ್ ಬಾಬು ಹೇಳಿಕೆ; ಹಿಂದಿಯ ಖ್ಯಾತ ನಿರ್ಮಾಪಕ ಕೊಟ್ರು ಉತ್ತರ
Image
ಹೊಸ ಸಿನಿಮಾ ಬಗ್ಗೆ ಅಪ್​ಡೇಟ್ ನೀಡಿದ ಮಹೇಶ್ ಬಾಬು; ಶೂಟಿಂಗ್ ಯಾವಾಗ?
Image
ಮಸ್ತ್​ ಮನರಂಜನೆ ನೀಡಲಿದ್ದಾರೆ ಮಹೇಶ್​ ಬಾಬು-ಕೀರ್ತಿ ಸುರೇಶ್​; ಈ ಫೋಟೋದಲ್ಲಿದೆ ಝಲಕ್​

ಶಹಾನಾಗೆ ಸಾಜದ್ ತುಂಬಾನೇ ನಿರ್ಬಂಧ ಹೇರುತ್ತಿದ್ದ. ನಟಿಯ ಕುಟುಂಬದ ಯಾರೊಬ್ಬರೂ ಮನೆಗೆ ಬರಲು ಅವಕಾಶ ನೀಡುತ್ತಿರಲಿಲ್ಲ. ದೂರವಾಣಿ ಕರೆ ಮಾಡಲು ಕೂಡ ಶಹಾನಾಗೆ ಅವಕಾಶ ಇರಲಿಲ್ಲ. ಇದರ ಜತೆಗೆ ಆತ ಕಿರುಕುಳ ಕೂಡ ನೀಡುತ್ತಿದ್ದ ಎನ್ನಲಾಗಿದೆ. ಈ ಕಾರಣಕ್ಕೆ ಶಹಾನಾ ಆತ್ಮಹತ್ಯೆ ಮಾಡಿಕೊಂಡಿರಬಹುದೇ ಎನ್ನುವ ಅನುಮಾನ ಹುಟ್ಟಿದೆ.

ಶಹಾನಾ ಮಾಡೆಲ್ ಆಗಿದ್ದರು. ನಂತರ ಬಣ್ಣದ ಲೋಕದಲ್ಲಿ ಚಿಕ್ಕಪುಟ್ಟ ಪಾತ್ರಗಳನ್ನು ಮಾಡಿ ಗುರುತಿಸಿಕೊಂಡಿದ್ದರು. ಅವರ ಸಾವಿಗೆ ಸೋಶಿಯಲ್ ಮೀಡಿಯಾದಲ್ಲಿ ಸಂತಾಪ ವ್ಯಕ್ತಪಡಿಸಲಾಗುತ್ತಿದೆ. ಅವರ ಸಾವಿಗೆ ನ್ಯಾಯ ಸಿಗಬೇಕು ಎಂದು ಜನಸಾಮಾನ್ಯರು ಒತ್ತಾಯ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:52 pm, Fri, 13 May 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ