AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿಎಫ್​-2, ಆರ್​ಆರ್​ಆರ್​ ರಿಲೀಸ್​ ಬಗ್ಗೆ ಹೀಗೊಂದು ಅನುಮಾನ; ಅಭಿಮಾನಿಗಳಿಗೆ ಖುಷಿಯೋ, ಬೇಸರವೋ?

ಕೊವಿಡ್​ ಎರಡನೇ ಅಲೆ ನಿಧಾನವಾಗಿ ಕಡಿಮೆ ಆಗುತ್ತಿದ್ದಂತೆ ಕರ್ನಾಟಕ ಸೇರಿ ಅನೇಕ ರಾಜ್ಯಗಳಲ್ಲಿ ಚಿತ್ರಮಂದಿರ ತೆರೆಯಲಾಗಿದೆ. ಆದರೆ, ಶೇ.50 ಆಸನ ಭರ್ತಿಗೆ ಮಾತ್ರ ಅವಕಾಶ ನೀಡಿದೆ.

ಕೆಜಿಎಫ್​-2, ಆರ್​ಆರ್​ಆರ್​ ರಿಲೀಸ್​ ಬಗ್ಗೆ ಹೀಗೊಂದು ಅನುಮಾನ; ಅಭಿಮಾನಿಗಳಿಗೆ ಖುಷಿಯೋ, ಬೇಸರವೋ?
ಯಶ್​ ನಟನೆಯ ‘ಕೆಜಿಎಫ್ 2’ ರಿಲೀಸ್​ ಡೇಟ್​ ಘೋಷಣೆ​ಗೂ ಮುನ್ನವೇ ಆರ್​ಆರ್​ಆರ್​ ತಂಡದಿಂದ ಬಿಗ್​ ನ್ಯೂಸ್​?
TV9 Web
| Edited By: |

Updated on: Aug 09, 2021 | 7:03 PM

Share

ಸ್ಟಾರ್​ ನಟರ ಸಿನಿಮಾಗಳು ರಿಲೀಸ್​ ಆಗದೆ ಹಲವು ತಿಂಗಳು ಕಳೆದಿವೆ. ಕೊವಿಡ್​ ಎರಡನೇ ಅಲೆಗೂ ಮೊದಲು ಕೆಲ ಸಿನಿಮಾಗಳು ರಿಲೀಸ್​ ಆಗಿದ್ದು ಬಿಟ್ಟರೆ, ಆ ನಂತರ ಯಾವುದೇ ದೊಡ್ಡ ಬಜೆಟ್​ ಚಿತ್ರಗಳು ಇತ್ತೀಚೆಗೆ ರಿಲೀಸ್​ ಆಗಿಲ್ಲ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಈಗ ಸ್ಟಾರ್​ ನಟರ ಸಿನಿಮಾಗಳಿಗಾಗಿ ಕಾದು ಕೂತ ಸಿನಿಪ್ರಿಯರಿಗೆ ನಿರಾಸೆ ಉಂಟಾಗುವ ಸಾಧ್ಯತೆ ಗೋಚರವಾಗಿದೆ.

ಕೊವಿಡ್​ ಎರಡನೇ ಅಲೆ ನಿಧಾನವಾಗಿ ಕಡಿಮೆ ಆಗುತ್ತಿದ್ದಂತೆಯೇ ಕರ್ನಾಟಕ ಸೇರಿ ಅನೇಕ ರಾಜ್ಯಗಳಲ್ಲಿ ಚಿತ್ರಮಂದಿರ ತೆರೆಯಲಾಗಿದೆ. ಆದರೆ, ಶೇ.50 ಆಸನ ಭರ್ತಿಗೆ ಮಾತ್ರ ಅವಕಾಶ ನೀಡಿದೆ. ಹೀಗಾಗಿ, ದೊಡ್ಡ ಬಜೆಟ್​ ಸಿನಿಮಾಗಳು ಬಿಡುಗಡೆಗೆ ಹಿಂದೇಟು ಹಾಕುತ್ತಿವೆ. ಈಗ, ಯಶ್​ ನಟನೆಯ ಕೆಜಿಎಫ್​ ಚಾಪ್ಟರ್​ 2 ಹಾಗೂ ಆರ್​ಆರ್​ಆರ್​ ಸಿನಿಮಾಗಳ ರಿಲೀಸ್​ ಬಗ್ಗೆ ತಜ್ಞರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಇದನ್ನು ಕೇಳಿದ ಅಭಿಮಾನಿಗಳು ಬೇಸರಗೊಂಡಿದ್ದಾರೆ.

ಯಶ್​ ನಟನೆಯ ಕೆಜಿಎಫ್​ 2 ಸಿನಿಮಾ ಜುಲೈ ತಿಂಗಳಲ್ಲೇ ತೆರೆಗೆ ಬರಬೇಕಿತ್ತು. ಆದರೆ, ಕೊವಿಡ್​ ಎರಡನೇ ಅಲೆ ಕರಿ ನೆರಳು ಈ ಸಿನಿಮಾ ಮೇಲೆ ಬಿದ್ದಿತ್ತು. ಕೆಜಿಎಫ್​ ದೊಡ್ಡಮಟ್ಟದಲ್ಲಿ ಹಿಟ್ ಆಗಿತ್ತು. ಹೀಗಾಗಿ, ಚಾಪ್ಟರ್​ 2 ಮೇಲೆ ನಿರೀಕ್ಷೆ ಹೆಚ್ಚಿದೆ. ಇನ್ನು, ಈ ಸಿನಿಮಾದ ತಾರಾ ಬಳಗ ಕೂಡ ದೊಡ್ಡದಾಗಿದೆ. ಸಂಜಯ್​ ದತ್​ ಸೇರಿ ಅನೇಕ ಪ್ರಮುಖರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಕಾರಣಕ್ಕೆ ಸಿನಿಮಾ ರಿಲೀಸ್​ ಡೇಟ್​ ಬಗ್ಗೆ ಜನರು ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇನ್ನು, ಆರ್​ಆರ್​ಆರ್​ ಸಿನಿಮಾ ಕೂಡ ದೊಡ್ಡ ತಾರಾ ಬಳಗ ಹೊಂದಿರುವ ಸಿನಿಮಾ. ಆರ್​ಆರ್​ಆರ್​ ಸಿನಿಮಾದಲ್ಲಿ ಜ್ಯೂ. ಎನ್​ಟಿಆರ್​, ರಾಮ್​ ಚರಣ್​, ಅಜಯ್​ ದೇವಗನ್​, ಆಲಿಯಾ ಭಟ್​ ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ. ಕೊಮರಾಮ್​ ಭೀಮ್​ ಪಾತ್ರದಲ್ಲಿ ಜ್ಯೂ. ಎನ್​ಟಿಆರ್​ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲುರಿ ಸೀತಾರಾಮ ರಾಜು ಪಾತ್ರಕ್ಕೆ ರಾಮ್​ ಚರಣ್​ ಬಣ್ಣ ಹಚ್ಚುತ್ತಿದ್ದಾರೆ. ಆಲಿಯಾ ಭಟ್​ಗೆ ಸೀತಾ ಎಂಬ ಪಾತ್ರ ನೀಡಲಾಗಿದೆ.  ಈ ಸಿನಿಮಾ ಅಕ್ಟೋಬರ್​ 23ರಂದು ತೆರೆಗೆ ಬರಬೇಕಿದೆ. ಆದರೆ, ಈ ಚಿತ್ರಗಳು ಈ ವರ್ಷ ರಿಲೀಸ್​ ಆಗುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.

ಕೊವಿಡ್​ ಎರಡನೇ ಅಲೆ ಕಡಿಮೆ ಆಗುತ್ತಿದ್ದಂತೆಯೇ ಮೂರನೇ ಅಲೆ ಬಗ್ಗೆ ಜನರು ಹೆಚ್ಚು ಆತಂಕಗೊಂಡಿದ್ದಾರೆ. ನಿತ್ಯ ಕೊವಿಡ್​ ಪ್ರಕರಣಗಳು ಹೆಚ್ಚುತ್ತಿವೆ. ಅಕ್ಟೋಬರ್​ ತಿಂಗಳಲ್ಲಿ ಕೊವಿಡ್​ ಮೂರನೇ ಅಲೆ ಮಿತಿ ಮೀರಬಹುದು ಎನ್ನಲಾಗುತ್ತಿದೆ. ಈ ಎಲ್ಲಾ ಕಾರಣವನ್ನು ಗಮನದಲ್ಲಿಟ್ಟುಕೊಂಡು ಆರ್​ಆರ್​ಆರ್​ ಹಾಗೂ ಕೆಜಿಎಫ್​ 2 ನಿರ್ಮಾಪಕರು ಹೊಸ ರಿಲೀಸ್​ ಡೇಟ್​ ಘೋಷಣೆ ಮಾಡಬೇಕಿದೆ.

ಇದನ್ನೂ ಓದಿ: ಸಡನ್​ ಆಗಿ ‘ಕಿಚ್ಚು’ ಹೊತ್ತಿಸಿದ ಹೊಂಬಾಳೆ ಫಿಲ್ಮ್ಸ್​; 11ನೇ ಸಿನಿಮಾ ಬಗ್ಗೆ ಕೆಜಿಎಫ್​ ನಿರ್ಮಾಪಕರ ಬ್ರೇಕಿಂಗ್​ ನ್ಯೂಸ್

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್