AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿಎಫ್​-2, ಆರ್​ಆರ್​ಆರ್​ ರಿಲೀಸ್​ ಬಗ್ಗೆ ಹೀಗೊಂದು ಅನುಮಾನ; ಅಭಿಮಾನಿಗಳಿಗೆ ಖುಷಿಯೋ, ಬೇಸರವೋ?

ಕೊವಿಡ್​ ಎರಡನೇ ಅಲೆ ನಿಧಾನವಾಗಿ ಕಡಿಮೆ ಆಗುತ್ತಿದ್ದಂತೆ ಕರ್ನಾಟಕ ಸೇರಿ ಅನೇಕ ರಾಜ್ಯಗಳಲ್ಲಿ ಚಿತ್ರಮಂದಿರ ತೆರೆಯಲಾಗಿದೆ. ಆದರೆ, ಶೇ.50 ಆಸನ ಭರ್ತಿಗೆ ಮಾತ್ರ ಅವಕಾಶ ನೀಡಿದೆ.

ಕೆಜಿಎಫ್​-2, ಆರ್​ಆರ್​ಆರ್​ ರಿಲೀಸ್​ ಬಗ್ಗೆ ಹೀಗೊಂದು ಅನುಮಾನ; ಅಭಿಮಾನಿಗಳಿಗೆ ಖುಷಿಯೋ, ಬೇಸರವೋ?
ಯಶ್​ ನಟನೆಯ ‘ಕೆಜಿಎಫ್ 2’ ರಿಲೀಸ್​ ಡೇಟ್​ ಘೋಷಣೆ​ಗೂ ಮುನ್ನವೇ ಆರ್​ಆರ್​ಆರ್​ ತಂಡದಿಂದ ಬಿಗ್​ ನ್ಯೂಸ್​?
TV9 Web
| Edited By: |

Updated on: Aug 09, 2021 | 7:03 PM

Share

ಸ್ಟಾರ್​ ನಟರ ಸಿನಿಮಾಗಳು ರಿಲೀಸ್​ ಆಗದೆ ಹಲವು ತಿಂಗಳು ಕಳೆದಿವೆ. ಕೊವಿಡ್​ ಎರಡನೇ ಅಲೆಗೂ ಮೊದಲು ಕೆಲ ಸಿನಿಮಾಗಳು ರಿಲೀಸ್​ ಆಗಿದ್ದು ಬಿಟ್ಟರೆ, ಆ ನಂತರ ಯಾವುದೇ ದೊಡ್ಡ ಬಜೆಟ್​ ಚಿತ್ರಗಳು ಇತ್ತೀಚೆಗೆ ರಿಲೀಸ್​ ಆಗಿಲ್ಲ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಈಗ ಸ್ಟಾರ್​ ನಟರ ಸಿನಿಮಾಗಳಿಗಾಗಿ ಕಾದು ಕೂತ ಸಿನಿಪ್ರಿಯರಿಗೆ ನಿರಾಸೆ ಉಂಟಾಗುವ ಸಾಧ್ಯತೆ ಗೋಚರವಾಗಿದೆ.

ಕೊವಿಡ್​ ಎರಡನೇ ಅಲೆ ನಿಧಾನವಾಗಿ ಕಡಿಮೆ ಆಗುತ್ತಿದ್ದಂತೆಯೇ ಕರ್ನಾಟಕ ಸೇರಿ ಅನೇಕ ರಾಜ್ಯಗಳಲ್ಲಿ ಚಿತ್ರಮಂದಿರ ತೆರೆಯಲಾಗಿದೆ. ಆದರೆ, ಶೇ.50 ಆಸನ ಭರ್ತಿಗೆ ಮಾತ್ರ ಅವಕಾಶ ನೀಡಿದೆ. ಹೀಗಾಗಿ, ದೊಡ್ಡ ಬಜೆಟ್​ ಸಿನಿಮಾಗಳು ಬಿಡುಗಡೆಗೆ ಹಿಂದೇಟು ಹಾಕುತ್ತಿವೆ. ಈಗ, ಯಶ್​ ನಟನೆಯ ಕೆಜಿಎಫ್​ ಚಾಪ್ಟರ್​ 2 ಹಾಗೂ ಆರ್​ಆರ್​ಆರ್​ ಸಿನಿಮಾಗಳ ರಿಲೀಸ್​ ಬಗ್ಗೆ ತಜ್ಞರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಇದನ್ನು ಕೇಳಿದ ಅಭಿಮಾನಿಗಳು ಬೇಸರಗೊಂಡಿದ್ದಾರೆ.

ಯಶ್​ ನಟನೆಯ ಕೆಜಿಎಫ್​ 2 ಸಿನಿಮಾ ಜುಲೈ ತಿಂಗಳಲ್ಲೇ ತೆರೆಗೆ ಬರಬೇಕಿತ್ತು. ಆದರೆ, ಕೊವಿಡ್​ ಎರಡನೇ ಅಲೆ ಕರಿ ನೆರಳು ಈ ಸಿನಿಮಾ ಮೇಲೆ ಬಿದ್ದಿತ್ತು. ಕೆಜಿಎಫ್​ ದೊಡ್ಡಮಟ್ಟದಲ್ಲಿ ಹಿಟ್ ಆಗಿತ್ತು. ಹೀಗಾಗಿ, ಚಾಪ್ಟರ್​ 2 ಮೇಲೆ ನಿರೀಕ್ಷೆ ಹೆಚ್ಚಿದೆ. ಇನ್ನು, ಈ ಸಿನಿಮಾದ ತಾರಾ ಬಳಗ ಕೂಡ ದೊಡ್ಡದಾಗಿದೆ. ಸಂಜಯ್​ ದತ್​ ಸೇರಿ ಅನೇಕ ಪ್ರಮುಖರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಕಾರಣಕ್ಕೆ ಸಿನಿಮಾ ರಿಲೀಸ್​ ಡೇಟ್​ ಬಗ್ಗೆ ಜನರು ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇನ್ನು, ಆರ್​ಆರ್​ಆರ್​ ಸಿನಿಮಾ ಕೂಡ ದೊಡ್ಡ ತಾರಾ ಬಳಗ ಹೊಂದಿರುವ ಸಿನಿಮಾ. ಆರ್​ಆರ್​ಆರ್​ ಸಿನಿಮಾದಲ್ಲಿ ಜ್ಯೂ. ಎನ್​ಟಿಆರ್​, ರಾಮ್​ ಚರಣ್​, ಅಜಯ್​ ದೇವಗನ್​, ಆಲಿಯಾ ಭಟ್​ ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ. ಕೊಮರಾಮ್​ ಭೀಮ್​ ಪಾತ್ರದಲ್ಲಿ ಜ್ಯೂ. ಎನ್​ಟಿಆರ್​ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲುರಿ ಸೀತಾರಾಮ ರಾಜು ಪಾತ್ರಕ್ಕೆ ರಾಮ್​ ಚರಣ್​ ಬಣ್ಣ ಹಚ್ಚುತ್ತಿದ್ದಾರೆ. ಆಲಿಯಾ ಭಟ್​ಗೆ ಸೀತಾ ಎಂಬ ಪಾತ್ರ ನೀಡಲಾಗಿದೆ.  ಈ ಸಿನಿಮಾ ಅಕ್ಟೋಬರ್​ 23ರಂದು ತೆರೆಗೆ ಬರಬೇಕಿದೆ. ಆದರೆ, ಈ ಚಿತ್ರಗಳು ಈ ವರ್ಷ ರಿಲೀಸ್​ ಆಗುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.

ಕೊವಿಡ್​ ಎರಡನೇ ಅಲೆ ಕಡಿಮೆ ಆಗುತ್ತಿದ್ದಂತೆಯೇ ಮೂರನೇ ಅಲೆ ಬಗ್ಗೆ ಜನರು ಹೆಚ್ಚು ಆತಂಕಗೊಂಡಿದ್ದಾರೆ. ನಿತ್ಯ ಕೊವಿಡ್​ ಪ್ರಕರಣಗಳು ಹೆಚ್ಚುತ್ತಿವೆ. ಅಕ್ಟೋಬರ್​ ತಿಂಗಳಲ್ಲಿ ಕೊವಿಡ್​ ಮೂರನೇ ಅಲೆ ಮಿತಿ ಮೀರಬಹುದು ಎನ್ನಲಾಗುತ್ತಿದೆ. ಈ ಎಲ್ಲಾ ಕಾರಣವನ್ನು ಗಮನದಲ್ಲಿಟ್ಟುಕೊಂಡು ಆರ್​ಆರ್​ಆರ್​ ಹಾಗೂ ಕೆಜಿಎಫ್​ 2 ನಿರ್ಮಾಪಕರು ಹೊಸ ರಿಲೀಸ್​ ಡೇಟ್​ ಘೋಷಣೆ ಮಾಡಬೇಕಿದೆ.

ಇದನ್ನೂ ಓದಿ: ಸಡನ್​ ಆಗಿ ‘ಕಿಚ್ಚು’ ಹೊತ್ತಿಸಿದ ಹೊಂಬಾಳೆ ಫಿಲ್ಮ್ಸ್​; 11ನೇ ಸಿನಿಮಾ ಬಗ್ಗೆ ಕೆಜಿಎಫ್​ ನಿರ್ಮಾಪಕರ ಬ್ರೇಕಿಂಗ್​ ನ್ಯೂಸ್

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?