AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೊಂಬಾಳೆ ಫಿಲ್ಮ್ಸ್​’ ಹೊಸ ಚಿತ್ರ ಅನೌನ್ಸ್​; ಈ ಬಾರಿ ಚಾನ್ಸ್​ ಪಡೆದಿದ್ದು ಲೇಡಿ ಡೈರೆಕ್ಟರ್​ ಸುಧಾ ಕೊಂಗರ

Hombale Films | Sudha Kongara: ನಿರ್ದೇಶಕಿ ಸುಧಾ ಕೊಂಗರ ಅವರಿಗೆ ‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ನಲ್ಲಿ ಸಿನಿಮಾ ಮಾಡುವ ಅವಕಾಶ ಸಿಕ್ಕಿದೆ. ಈ ಬಗ್ಗೆ ಬ್ರೇಕಿಂಗ್​ ನ್ಯೂಸ್​ ಹೊರಬಿದ್ದಿದೆ.

‘ಹೊಂಬಾಳೆ ಫಿಲ್ಮ್ಸ್​’ ಹೊಸ ಚಿತ್ರ ಅನೌನ್ಸ್​; ಈ ಬಾರಿ ಚಾನ್ಸ್​ ಪಡೆದಿದ್ದು ಲೇಡಿ ಡೈರೆಕ್ಟರ್​ ಸುಧಾ ಕೊಂಗರ
ಹೊಂಬಾಳೆ ಫಿಲ್ಮ್ಸ್​, ಸುಧಾ ಕೊಂಗರ
TV9 Web
| Edited By: |

Updated on:Apr 21, 2022 | 12:19 PM

Share

ದೇಶಾದ್ಯಂತ ಈಗ ‘ಹೊಂಬಾಳೆ ಫಿಲ್ಮ್ಸ್​’ (Hombale Films) ನಿರ್ಮಾಣ ಸಂಸ್ಥೆ ಬಗ್ಗೆ ಸಿನಿಪ್ರಿಯರು ಮಾತನಾಡುತ್ತಿದ್ದಾರೆ. ‘ಕೆಜಿಎಫ್​: ಚಾಪ್ಟರ್ 2’ ಸಿನಿಮಾ ಮೂಲಕ ಈ ಸಂಸ್ಥೆಯ ಕೀರ್ತಿ ಉತ್ತುಂಗಕ್ಕೆ ಏರಿದೆ. ನಿರ್ಮಾಪಕ ವಿಜಯ್​ ಕಿರಗಂದೂರು (Vijay Kiragandur) ಅವರ ಸಿನಿಮಾ ಸಾಹಸಕ್ಕೆ ಜನರು ಉಘೇ ಉಘೇ ಎಂದಿದ್ದಾರೆ. ಚಿತ್ರರಂಗದಲ್ಲಿ ಒಂದು ಮೈಲಿಗಲ್ಲು ನಿರ್ಮಾಣ ಮಾಡಿರುವ ಈ ಸಂಸ್ಥೆಯಿಂದ ಅನೇಕ ಸಿನಿಮಾಗಳು ನಿರ್ಮಾಣ ಆಗುತ್ತಿವೆ. ಈಗ ಹೊಸ ಚಿತ್ರ ಅನೌನ್ಸ್​ ಮಾಡಲಾಗಿದೆ. ವಿಶೇಷ ಏನೆಂದರೆ, ಈ ಬಾರಿ ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ನಲ್ಲಿ ಸಿನಿಮಾ ಮಾಡುವ ಅವಕಾಶ ಪಡೆದಿರುವುದು ಲೇಡಿ ಡೈರೆಕ್ಟರ್​ ಸುಧಾ ಕೊಂಗರ!  ಮೂಲತಃ ಆಂಧ್ರ ಪ್ರದೇಶದವರಾದ ಸುಧಾ ಕೊಂಗರ (Sudha Kongara) ಅವರು ತಮಿಳು ಚಿತ್ರರಂಗದಲ್ಲಿ ಸಾಧನೆ ಮಾಡಿದ್ದಾರೆ. ಒಂದಕ್ಕಿಂತ ಒಂದು ಡಿಫರೆಂಟ್​ ಸಿನಿಮಾ ಮಾಡಿ ಸೈ ಎನಿಸಿಕೊಂಡಿದ್ದಾರೆ. ಸೂರ್ಯ ನಟನೆಯ ‘ಸೂರರೈ ಪೋಟ್ರು’ ಚಿತ್ರಕ್ಕೆ ನಿರ್ದೇಶನ ಮಾಡಿದ್ದ ಅವರು ಎಲ್ಲರ ಗಮನ ಸೆಳೆದಿದ್ದರು. ಈಗ ಸುಧಾ ಕೊಂಗರ ಮತ್ತು ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ಕೈ ಜೋಡಿಸಿರುವುದು ಸಿನಿಪ್ರಿಯರಲ್ಲಿ ನಿರೀಕ್ಷೆ ಮೂಡಿಸಿದೆ.

ಸದ್ದು ಗದ್ದಲ ಇಲ್ಲದೇ ಈ ಬ್ರೇಕಿಂಗ್​ ನ್ಯೂಸ್​ ಹೊರಬಿದ್ದಿದೆ. ಅಚ್ಚರಿ ಎಂದರೆ, ಈ ಬಾರಿ ಸತ್ಯ ಘಟನೆಗಳನ್ನು ಆಧರಿಸಿ ಸಿನಿಮಾ ಮಾಡಲು ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ಮುಂದಾಗಿದೆ. ಆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ‘ಕೆಲವು ನೈಜ ಕಥೆಗಳನ್ನು ಹೇಳಲೇ ಬೇಕು. ಸುಧಾ ಕೊಂಗರ ಅವರ ಜೊತೆ ನಮ್ಮ ಹೊಸ ಸಿನಿಮಾ ಅನೌನ್ಸ್​ ಮಾಡಲು ಹೆಮ್ಮೆ ಆಗುತ್ತಿದೆ’ ಎಂದು ಪೋಸ್ಟ್​ ಮಾಡಲಾಗಿದೆ.

ಸುಧಾ ಕೊಂಗರ ಅವರು ನಿರ್ದೇಶನ ಮಾಡಿದ್ದ ‘ಸೂರರೈ ಪೋಟ್ರು’ ಚಿತ್ರ ಕೂಡ ಸತ್ಯ ಘಟನೆ ಆಧರಿಸಿತ್ತು. ಕಡಿಮೆ ದರದಲ್ಲಿ ವಿಮಾನಯಾನದ ಕನಸು ನನಸಾಗಿಸಿದ ಕನ್ನಡಿಗ ಕ್ಯಾಪ್ಟನ್​ ಗೋಪಿನಾಥನ್​ ಅವರ ಜೀವನದ ಕಥೆಯನ್ನು ಇಟ್ಟುಕೊಂಡು ಸುಧಾ ಅವರು ಸಿನಿಮಾ ಮಾಡಿದ್ದರು. ಆ ಸಿನಿಮಾದಲ್ಲಿ ಸೂರ್ಯ ಹೀರೋ ಆಗಿ ನಟಿಸಿದ್ದರು. ಅಮೇಜಾನ್​ ಪ್ರೈಂ ವಿಡಿಯೋ ಮೂಲಕ ಬಿಡುಗಡೆ ಆದ ಆ ಚಿತ್ರ ಕನ್ನಡಕ್ಕೂ ಡಬ್​ ಆಗಿ ಗಮನ ಸೆಳೆದಿತ್ತು. ಈಗ ಸುಧಾ ಕೊಂಗರ ಅವರು ‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ನಲ್ಲಿ ಮಾಡಲಿರುವ ಸಿನಿಮಾದಲ್ಲಿ ಯಾವ ಕಥೆ ಇರಲಿದೆ ಎಂಬುದನ್ನು ತಿಳಿಯಲು ಕಾತರ ಹೆಚ್ಚಿದೆ.

‘ಹೊಂಬಾಳೆ ಫಿಲ್ಮ್ಸ್​’ ಮೂಲಕ ಪ್ರಸ್ತುತ ಅನೇಕ ಸಿನಿಮಾಗಳ ಸಿದ್ಧವಾಗುತ್ತಿವೆ. ಪ್ರಭಾಸ್​ ನಟನೆಯ ‘ಸಲಾರ್​’, ಶ್ರೀಮುರಳಿ ಅಭಿನಯದ ‘ಬಘೀರ’, ರಿಷಬ್​​ ಶೆಟ್ಟಿ ನಿರ್ದೇಶನದ ‘ಕಾಂತಾರಾ’, ಜಗ್ಗೇಶ್​ ನಟನೆಯ ‘ರಾಘವೇಂದ್ರ ಸ್ಟೋರ್ಸ್​’ ಮುಂತಾದ ಸಿನಿಮಾಗಳು ತಯಾರಾಗುತ್ತಿವೆ. ಅವುಗಳ ಸಾಲಿಗೆ ಸುಧಾ ಕೊಂಗರ ನಿರ್ದೇಶನದ ಸಿನಿಮಾ ಕೂಡ ಸೇರ್ಪಡೆ ಆಗುತ್ತಿದೆ. ಈ ಚಿತ್ರದಲ್ಲಿ ಯಾರು ನಟಿಸಲಿದ್ದಾರೆ? ಈ ಸಿನಿಮಾ ಕೂಡ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ತಯಾರಾಗಲಿದೆಯಾ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಇದನ್ನೂ ಓದಿ:

ಟೀಸರ್​ ಮೂಲಕ ಗಮನ ಸೆಳೆದ ‘ಕಾಂತಾರ’, ‘ರಾಘವೇಂದ್ರ ಸ್ಟೋರ್ಸ್​’; ಹೊಂಬಾಳೆ ಫಿಲ್ಮ್ಸ್​ ಪ್ರಯತ್ನಕ್ಕೆ ಸಿಕ್ತು ಮೆಚ್ಚುಗೆ

Hombale Films: ಬಿಗ್​ ಬ್ರೇಕಿಂಗ್​ ನ್ಯೂಸ್​ ನೀಡಿದ ‘ಹೊಂಬಾಳೆ ಫಿಲ್ಮ್ಸ್​’; ಆರ್​ಸಿಬಿ ಜೊತೆ ಹೊಸ ಸಾಹಸ

Published On - 11:41 am, Thu, 21 April 22

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು
‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು