AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿಎಫ್​ ಗರುಡನ ಹೊಸ ಲುಕ್​ ನೋಡಿದ್ರಾ? ‘ಮಹಾ ಸಮುದ್ರಂ’ ಮಹಾ ರಾಕ್ಷಸ

KGF Garuda: ಇದು ಟಾಲಿವುಡ್​ನಲ್ಲಿ ಗರುಡ ರಾಮ್​ಗೆ ಮೊದಲ ಸಿನಿಮಾ ಎಂಬುದು ವಿಶೇಷ. ಈ ಚಿತ್ರ ರಿಲೀಸ್​ ಆದ ಬಳಿಕ ಅವರಿಗೆ ತೆಲುಗು ಅಭಿಮಾನಿಗಳ ಸಂಖ್ಯೆ ಹೆಚ್ಚಲಿದೆ.

ಕೆಜಿಎಫ್​ ಗರುಡನ ಹೊಸ ಲುಕ್​ ನೋಡಿದ್ರಾ? ‘ಮಹಾ ಸಮುದ್ರಂ’ ಮಹಾ ರಾಕ್ಷಸ
ಗರುಡ ರಾಮ್​
ಮದನ್​ ಕುಮಾರ್​
| Edited By: |

Updated on:Jun 26, 2021 | 12:35 PM

Share

ಭಾರತೀಯ ಚಿತ್ರರಂಗದಲ್ಲಿ ಕನ್ನಡದ ಕೆಜಿಎಫ್​ ಸಿನಿಮಾ ಮಾಡಿದ ಮ್ಯಾಜಿಕ್​ ಒಂದೆರಡಲ್ಲ. ನಿರ್ದೇಶಕ ಪ್ರಶಾಂತ್​ ನೀಲ್​, ನಟ ಯಶ್​ ಮಾತ್ರವಲ್ಲದೆ ಈ ಚಿತ್ರತಂಡದ ಅನೇಕರಿಗೆ ಪರಭಾಷೆಯಲ್ಲಿ ಹೇರಳ ಅವಕಾಶಗಳನ್ನು ತಂದುಕೊಟ್ಟ ಸಿನಿಮಾ ಅದು. ‘ಕೆಜಿಎಫ್​: ಚಾಪ್ಟರ್​ 1’ ಚಿತ್ರದಲ್ಲಿ ವಿಲನ್​ ಆಗಿ ಅಬ್ಬರಿಸಿದ್ದ ನಟ ರಾಮ್​ ಅಲಿಯಾಸ್​ ಗರುಡ ರಾಮ್​ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿತು. ಪರಭಾಷೆಯ ಸಿನಿಮಾರಂಗಗಳಿಂದ ಅವರಿಗೆ ಬಂಪರ್​ ಆಫರ್​ಗಳು ಒಲಿದುಬರಲು ಆರಂಭಿಸಿದವು. ಈಗ ಅವರು ಟಾಲಿವುಡ್​ನಲ್ಲೂ ವಿಲನ್ ಆಗಿ ಮಿಂಚುತ್ತಿದ್ದಾರೆ.

ಶರ್ವಾನಂದ್​ ಮತ್ತು ಸಿದ್ಧಾರ್ಥ್​ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ತೆಲುಗಿನ ‘ಮಹಾ ಸಮುದ್ರಂ’ ಚಿತ್ರದಲ್ಲಿ ರಾಮ್​ ಮುಖ್ಯ ವಿಲನ್​ ಆಗಿದ್ದಾರೆ. ಅವರಿಗೆ ತುಂಬ ರಗಡ್​ ಆದಂತಹ ಪಾತ್ರವನ್ನೇ ನೀಡಲಾಗಿದೆ. ಧನಂಜಯ್​ ಎಂಬ ಮಹಾ ರಾಕ್ಷಸನ ರೀತಿಯಲ್ಲಿ ಅವರು ಅಬ್ಬರಿಸಲಿದ್ದಾರೆ. ಆ ಪಾತ್ರದ ಝಲಕ್​ ತೋರಿಸಲು ಈಗ ಚಿತ್ರತಂಡ ಅವರ ಫಸ್ಟ್​ಲುಕ್​ ಬಿಡುಗಡೆ ಮಾಡಿದೆ.

ಕಣ್ಣುಗಳಲ್ಲಿ ಕ್ರೋಧವನ್ನೇ ಉಕ್ಕಿಸುತ್ತ, ಎದುರಾಳಿಯನ್ನು ಸದೆಬಡಿಲು ಹೊರಟಿರುವ ಭಂಗಿಯಲ್ಲಿ ರಾಮ್​ ಅವರ ಫಸ್ಟ್​ಲುಕ್​ ಪೋಸ್ಟರ್​ ವಿನ್ಯಾಸಗೊಂಡಿದೆ. ‘ಧನಂಜಯ್​ ಎಂಬ ಕ್ರೂರ ಮನುಷ್ಯನಾಗಿ ಗರುಡ ರಾಮ್​ ಅವರನ್ನು ಪರಿಚಯಿಸುತ್ತಿದ್ದೇವೆ’ ಎಂಬ ಕ್ಯಾಪ್ಷನ್​ನೊಂದಿಗೆ ಎ.ಕೆ. ಎಂಟರ್​ಟೇನ್ಮೆಂಟ್ಸ್​ ಸಂಸ್ಥೆಯು ಈ ಪೋಸ್ಟರ್​ ಬಿಡುಗಡೆ ಮಾಡಿದೆ. ಆ ಮೂಲಕ ಚಿತ್ರದ ಬಗ್ಗೆ ಕುತೂಹಲ ಹೆಚ್ಚಿಸಲಾಗಿದೆ. ಇಡೀ ಸಿನಿಮಾದಲ್ಲಿ ರಾಮ್​ ಹೇಗೆ ನಟಿಸಿರಬಹುದು ಎಂಬುದನ್ನು ತಿಳಿದುಕೊಳ್ಳುವ ಕಾತರ ಅಭಿಮಾನಿಗಳಲ್ಲಿ ಹೆಚ್ಚಿದೆ.

‘ಮಹಾ ಸಮುದ್ರಂ’ ಚಿತ್ರಕ್ಕೆ ಅಜಯ್​ ಭೂಪತಿ ನಿರ್ದೇಶನ ಮಾಡುತ್ತಿದ್ದಾರೆ. ಇದು ಟಾಲಿವುಡ್​ನಲ್ಲಿ ರಾಮ್​ಗೆ ಮೊದಲ ಸಿನಿಮಾ ಎಂಬುದು ವಿಶೇಷ. ಈ ಸಿನಿಮಾ ರಿಲೀಸ್​ ಆದ ಬಳಿಕ ಅವರಿಗೆ ತೆಲುಗು ಅಭಿಮಾನಿಗಳ ಸಂಖ್ಯೆ ಹೆಚ್ಚಲಿದೆ. ಕನ್ನಡ ಮತ್ತು ತಮಿಳಿನಲ್ಲೂ ಅವರು ಅನೇಕ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ.

ಸದ್ಯ ‘ಮಹಾ ಸಮುದ್ರಂ’ ಚಿತ್ರಕ್ಕೆ ಕೊನೇ ಹಂತದ ಶೂಟಿಂಗ್​ ಬಾಕಿ ಇದೆ. ಕೊವಿಡ್​ ಪ್ರಕರಣಗಳ ಸಂಖ್ಯೆ ಇಳಿಮುಖ ಆಗುತ್ತಿರುವುದರಿಂದ ಶೀಘ್ರದಲ್ಲೇ ಚಿತ್ರೀಕರಣಕ್ಕೆ ಮರು ಚಾಲನೆ ಸಿಗಲಿದೆ. ಈ ಸಿನಿಮಾದಲ್ಲಿ ನಾಯಕಿಯರಾಗಿ ಅದಿತಿ ರಾವ್​ ಹೈದರಿ ಮತ್ತು ಅನು ಇಮ್ಯಾನುಯಲ್​ ನಟಿಸುತ್ತಿದ್ದಾರೆ.

ಇದನ್ನೂ ಓದಿ:

‘ಪುಷ್ಪ ಸಿನಿಮಾ 10 ಕೆಜಿಎಫ್​ಗೆ ಸಮ’; ಅಲ್ಲು ಅರ್ಜುನ್​ ಚಿತ್ರಕ್ಕೆ ಸಿಕ್ತು ಹೊಸ ಮೆಚ್ಚುಗೆ

KGF Chapter 2: ಕೆಜಿಎಫ್ 2 ಹೊಸ ರಿಲೀಸ್ ಡೇಟ್ ಬಗ್ಗೆ ಹರಿದಾಡುತ್ತಿದೆ ಗುಸುಗುಸು

Published On - 12:08 pm, Sat, 26 June 21

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ