AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿಎಫ್​ ಗರುಡನ ಹೊಸ ಲುಕ್​ ನೋಡಿದ್ರಾ? ‘ಮಹಾ ಸಮುದ್ರಂ’ ಮಹಾ ರಾಕ್ಷಸ

KGF Garuda: ಇದು ಟಾಲಿವುಡ್​ನಲ್ಲಿ ಗರುಡ ರಾಮ್​ಗೆ ಮೊದಲ ಸಿನಿಮಾ ಎಂಬುದು ವಿಶೇಷ. ಈ ಚಿತ್ರ ರಿಲೀಸ್​ ಆದ ಬಳಿಕ ಅವರಿಗೆ ತೆಲುಗು ಅಭಿಮಾನಿಗಳ ಸಂಖ್ಯೆ ಹೆಚ್ಚಲಿದೆ.

ಕೆಜಿಎಫ್​ ಗರುಡನ ಹೊಸ ಲುಕ್​ ನೋಡಿದ್ರಾ? ‘ಮಹಾ ಸಮುದ್ರಂ’ ಮಹಾ ರಾಕ್ಷಸ
ಗರುಡ ರಾಮ್​
Follow us
ಮದನ್​ ಕುಮಾರ್​
| Updated By: Digi Tech Desk

Updated on:Jun 26, 2021 | 12:35 PM

ಭಾರತೀಯ ಚಿತ್ರರಂಗದಲ್ಲಿ ಕನ್ನಡದ ಕೆಜಿಎಫ್​ ಸಿನಿಮಾ ಮಾಡಿದ ಮ್ಯಾಜಿಕ್​ ಒಂದೆರಡಲ್ಲ. ನಿರ್ದೇಶಕ ಪ್ರಶಾಂತ್​ ನೀಲ್​, ನಟ ಯಶ್​ ಮಾತ್ರವಲ್ಲದೆ ಈ ಚಿತ್ರತಂಡದ ಅನೇಕರಿಗೆ ಪರಭಾಷೆಯಲ್ಲಿ ಹೇರಳ ಅವಕಾಶಗಳನ್ನು ತಂದುಕೊಟ್ಟ ಸಿನಿಮಾ ಅದು. ‘ಕೆಜಿಎಫ್​: ಚಾಪ್ಟರ್​ 1’ ಚಿತ್ರದಲ್ಲಿ ವಿಲನ್​ ಆಗಿ ಅಬ್ಬರಿಸಿದ್ದ ನಟ ರಾಮ್​ ಅಲಿಯಾಸ್​ ಗರುಡ ರಾಮ್​ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿತು. ಪರಭಾಷೆಯ ಸಿನಿಮಾರಂಗಗಳಿಂದ ಅವರಿಗೆ ಬಂಪರ್​ ಆಫರ್​ಗಳು ಒಲಿದುಬರಲು ಆರಂಭಿಸಿದವು. ಈಗ ಅವರು ಟಾಲಿವುಡ್​ನಲ್ಲೂ ವಿಲನ್ ಆಗಿ ಮಿಂಚುತ್ತಿದ್ದಾರೆ.

ಶರ್ವಾನಂದ್​ ಮತ್ತು ಸಿದ್ಧಾರ್ಥ್​ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ತೆಲುಗಿನ ‘ಮಹಾ ಸಮುದ್ರಂ’ ಚಿತ್ರದಲ್ಲಿ ರಾಮ್​ ಮುಖ್ಯ ವಿಲನ್​ ಆಗಿದ್ದಾರೆ. ಅವರಿಗೆ ತುಂಬ ರಗಡ್​ ಆದಂತಹ ಪಾತ್ರವನ್ನೇ ನೀಡಲಾಗಿದೆ. ಧನಂಜಯ್​ ಎಂಬ ಮಹಾ ರಾಕ್ಷಸನ ರೀತಿಯಲ್ಲಿ ಅವರು ಅಬ್ಬರಿಸಲಿದ್ದಾರೆ. ಆ ಪಾತ್ರದ ಝಲಕ್​ ತೋರಿಸಲು ಈಗ ಚಿತ್ರತಂಡ ಅವರ ಫಸ್ಟ್​ಲುಕ್​ ಬಿಡುಗಡೆ ಮಾಡಿದೆ.

ಕಣ್ಣುಗಳಲ್ಲಿ ಕ್ರೋಧವನ್ನೇ ಉಕ್ಕಿಸುತ್ತ, ಎದುರಾಳಿಯನ್ನು ಸದೆಬಡಿಲು ಹೊರಟಿರುವ ಭಂಗಿಯಲ್ಲಿ ರಾಮ್​ ಅವರ ಫಸ್ಟ್​ಲುಕ್​ ಪೋಸ್ಟರ್​ ವಿನ್ಯಾಸಗೊಂಡಿದೆ. ‘ಧನಂಜಯ್​ ಎಂಬ ಕ್ರೂರ ಮನುಷ್ಯನಾಗಿ ಗರುಡ ರಾಮ್​ ಅವರನ್ನು ಪರಿಚಯಿಸುತ್ತಿದ್ದೇವೆ’ ಎಂಬ ಕ್ಯಾಪ್ಷನ್​ನೊಂದಿಗೆ ಎ.ಕೆ. ಎಂಟರ್​ಟೇನ್ಮೆಂಟ್ಸ್​ ಸಂಸ್ಥೆಯು ಈ ಪೋಸ್ಟರ್​ ಬಿಡುಗಡೆ ಮಾಡಿದೆ. ಆ ಮೂಲಕ ಚಿತ್ರದ ಬಗ್ಗೆ ಕುತೂಹಲ ಹೆಚ್ಚಿಸಲಾಗಿದೆ. ಇಡೀ ಸಿನಿಮಾದಲ್ಲಿ ರಾಮ್​ ಹೇಗೆ ನಟಿಸಿರಬಹುದು ಎಂಬುದನ್ನು ತಿಳಿದುಕೊಳ್ಳುವ ಕಾತರ ಅಭಿಮಾನಿಗಳಲ್ಲಿ ಹೆಚ್ಚಿದೆ.

‘ಮಹಾ ಸಮುದ್ರಂ’ ಚಿತ್ರಕ್ಕೆ ಅಜಯ್​ ಭೂಪತಿ ನಿರ್ದೇಶನ ಮಾಡುತ್ತಿದ್ದಾರೆ. ಇದು ಟಾಲಿವುಡ್​ನಲ್ಲಿ ರಾಮ್​ಗೆ ಮೊದಲ ಸಿನಿಮಾ ಎಂಬುದು ವಿಶೇಷ. ಈ ಸಿನಿಮಾ ರಿಲೀಸ್​ ಆದ ಬಳಿಕ ಅವರಿಗೆ ತೆಲುಗು ಅಭಿಮಾನಿಗಳ ಸಂಖ್ಯೆ ಹೆಚ್ಚಲಿದೆ. ಕನ್ನಡ ಮತ್ತು ತಮಿಳಿನಲ್ಲೂ ಅವರು ಅನೇಕ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ.

ಸದ್ಯ ‘ಮಹಾ ಸಮುದ್ರಂ’ ಚಿತ್ರಕ್ಕೆ ಕೊನೇ ಹಂತದ ಶೂಟಿಂಗ್​ ಬಾಕಿ ಇದೆ. ಕೊವಿಡ್​ ಪ್ರಕರಣಗಳ ಸಂಖ್ಯೆ ಇಳಿಮುಖ ಆಗುತ್ತಿರುವುದರಿಂದ ಶೀಘ್ರದಲ್ಲೇ ಚಿತ್ರೀಕರಣಕ್ಕೆ ಮರು ಚಾಲನೆ ಸಿಗಲಿದೆ. ಈ ಸಿನಿಮಾದಲ್ಲಿ ನಾಯಕಿಯರಾಗಿ ಅದಿತಿ ರಾವ್​ ಹೈದರಿ ಮತ್ತು ಅನು ಇಮ್ಯಾನುಯಲ್​ ನಟಿಸುತ್ತಿದ್ದಾರೆ.

ಇದನ್ನೂ ಓದಿ:

‘ಪುಷ್ಪ ಸಿನಿಮಾ 10 ಕೆಜಿಎಫ್​ಗೆ ಸಮ’; ಅಲ್ಲು ಅರ್ಜುನ್​ ಚಿತ್ರಕ್ಕೆ ಸಿಕ್ತು ಹೊಸ ಮೆಚ್ಚುಗೆ

KGF Chapter 2: ಕೆಜಿಎಫ್ 2 ಹೊಸ ರಿಲೀಸ್ ಡೇಟ್ ಬಗ್ಗೆ ಹರಿದಾಡುತ್ತಿದೆ ಗುಸುಗುಸು

Published On - 12:08 pm, Sat, 26 June 21

ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ