ಕೆಜಿಎಫ್​ ಗರುಡನ ಹೊಸ ಲುಕ್​ ನೋಡಿದ್ರಾ? ‘ಮಹಾ ಸಮುದ್ರಂ’ ಮಹಾ ರಾಕ್ಷಸ

KGF Garuda: ಇದು ಟಾಲಿವುಡ್​ನಲ್ಲಿ ಗರುಡ ರಾಮ್​ಗೆ ಮೊದಲ ಸಿನಿಮಾ ಎಂಬುದು ವಿಶೇಷ. ಈ ಚಿತ್ರ ರಿಲೀಸ್​ ಆದ ಬಳಿಕ ಅವರಿಗೆ ತೆಲುಗು ಅಭಿಮಾನಿಗಳ ಸಂಖ್ಯೆ ಹೆಚ್ಚಲಿದೆ.

ಕೆಜಿಎಫ್​ ಗರುಡನ ಹೊಸ ಲುಕ್​ ನೋಡಿದ್ರಾ? ‘ಮಹಾ ಸಮುದ್ರಂ’ ಮಹಾ ರಾಕ್ಷಸ
ಗರುಡ ರಾಮ್​
Follow us
| Updated By: Digi Tech Desk

Updated on:Jun 26, 2021 | 12:35 PM

ಭಾರತೀಯ ಚಿತ್ರರಂಗದಲ್ಲಿ ಕನ್ನಡದ ಕೆಜಿಎಫ್​ ಸಿನಿಮಾ ಮಾಡಿದ ಮ್ಯಾಜಿಕ್​ ಒಂದೆರಡಲ್ಲ. ನಿರ್ದೇಶಕ ಪ್ರಶಾಂತ್​ ನೀಲ್​, ನಟ ಯಶ್​ ಮಾತ್ರವಲ್ಲದೆ ಈ ಚಿತ್ರತಂಡದ ಅನೇಕರಿಗೆ ಪರಭಾಷೆಯಲ್ಲಿ ಹೇರಳ ಅವಕಾಶಗಳನ್ನು ತಂದುಕೊಟ್ಟ ಸಿನಿಮಾ ಅದು. ‘ಕೆಜಿಎಫ್​: ಚಾಪ್ಟರ್​ 1’ ಚಿತ್ರದಲ್ಲಿ ವಿಲನ್​ ಆಗಿ ಅಬ್ಬರಿಸಿದ್ದ ನಟ ರಾಮ್​ ಅಲಿಯಾಸ್​ ಗರುಡ ರಾಮ್​ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿತು. ಪರಭಾಷೆಯ ಸಿನಿಮಾರಂಗಗಳಿಂದ ಅವರಿಗೆ ಬಂಪರ್​ ಆಫರ್​ಗಳು ಒಲಿದುಬರಲು ಆರಂಭಿಸಿದವು. ಈಗ ಅವರು ಟಾಲಿವುಡ್​ನಲ್ಲೂ ವಿಲನ್ ಆಗಿ ಮಿಂಚುತ್ತಿದ್ದಾರೆ.

ಶರ್ವಾನಂದ್​ ಮತ್ತು ಸಿದ್ಧಾರ್ಥ್​ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ತೆಲುಗಿನ ‘ಮಹಾ ಸಮುದ್ರಂ’ ಚಿತ್ರದಲ್ಲಿ ರಾಮ್​ ಮುಖ್ಯ ವಿಲನ್​ ಆಗಿದ್ದಾರೆ. ಅವರಿಗೆ ತುಂಬ ರಗಡ್​ ಆದಂತಹ ಪಾತ್ರವನ್ನೇ ನೀಡಲಾಗಿದೆ. ಧನಂಜಯ್​ ಎಂಬ ಮಹಾ ರಾಕ್ಷಸನ ರೀತಿಯಲ್ಲಿ ಅವರು ಅಬ್ಬರಿಸಲಿದ್ದಾರೆ. ಆ ಪಾತ್ರದ ಝಲಕ್​ ತೋರಿಸಲು ಈಗ ಚಿತ್ರತಂಡ ಅವರ ಫಸ್ಟ್​ಲುಕ್​ ಬಿಡುಗಡೆ ಮಾಡಿದೆ.

ಕಣ್ಣುಗಳಲ್ಲಿ ಕ್ರೋಧವನ್ನೇ ಉಕ್ಕಿಸುತ್ತ, ಎದುರಾಳಿಯನ್ನು ಸದೆಬಡಿಲು ಹೊರಟಿರುವ ಭಂಗಿಯಲ್ಲಿ ರಾಮ್​ ಅವರ ಫಸ್ಟ್​ಲುಕ್​ ಪೋಸ್ಟರ್​ ವಿನ್ಯಾಸಗೊಂಡಿದೆ. ‘ಧನಂಜಯ್​ ಎಂಬ ಕ್ರೂರ ಮನುಷ್ಯನಾಗಿ ಗರುಡ ರಾಮ್​ ಅವರನ್ನು ಪರಿಚಯಿಸುತ್ತಿದ್ದೇವೆ’ ಎಂಬ ಕ್ಯಾಪ್ಷನ್​ನೊಂದಿಗೆ ಎ.ಕೆ. ಎಂಟರ್​ಟೇನ್ಮೆಂಟ್ಸ್​ ಸಂಸ್ಥೆಯು ಈ ಪೋಸ್ಟರ್​ ಬಿಡುಗಡೆ ಮಾಡಿದೆ. ಆ ಮೂಲಕ ಚಿತ್ರದ ಬಗ್ಗೆ ಕುತೂಹಲ ಹೆಚ್ಚಿಸಲಾಗಿದೆ. ಇಡೀ ಸಿನಿಮಾದಲ್ಲಿ ರಾಮ್​ ಹೇಗೆ ನಟಿಸಿರಬಹುದು ಎಂಬುದನ್ನು ತಿಳಿದುಕೊಳ್ಳುವ ಕಾತರ ಅಭಿಮಾನಿಗಳಲ್ಲಿ ಹೆಚ್ಚಿದೆ.

‘ಮಹಾ ಸಮುದ್ರಂ’ ಚಿತ್ರಕ್ಕೆ ಅಜಯ್​ ಭೂಪತಿ ನಿರ್ದೇಶನ ಮಾಡುತ್ತಿದ್ದಾರೆ. ಇದು ಟಾಲಿವುಡ್​ನಲ್ಲಿ ರಾಮ್​ಗೆ ಮೊದಲ ಸಿನಿಮಾ ಎಂಬುದು ವಿಶೇಷ. ಈ ಸಿನಿಮಾ ರಿಲೀಸ್​ ಆದ ಬಳಿಕ ಅವರಿಗೆ ತೆಲುಗು ಅಭಿಮಾನಿಗಳ ಸಂಖ್ಯೆ ಹೆಚ್ಚಲಿದೆ. ಕನ್ನಡ ಮತ್ತು ತಮಿಳಿನಲ್ಲೂ ಅವರು ಅನೇಕ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ.

ಸದ್ಯ ‘ಮಹಾ ಸಮುದ್ರಂ’ ಚಿತ್ರಕ್ಕೆ ಕೊನೇ ಹಂತದ ಶೂಟಿಂಗ್​ ಬಾಕಿ ಇದೆ. ಕೊವಿಡ್​ ಪ್ರಕರಣಗಳ ಸಂಖ್ಯೆ ಇಳಿಮುಖ ಆಗುತ್ತಿರುವುದರಿಂದ ಶೀಘ್ರದಲ್ಲೇ ಚಿತ್ರೀಕರಣಕ್ಕೆ ಮರು ಚಾಲನೆ ಸಿಗಲಿದೆ. ಈ ಸಿನಿಮಾದಲ್ಲಿ ನಾಯಕಿಯರಾಗಿ ಅದಿತಿ ರಾವ್​ ಹೈದರಿ ಮತ್ತು ಅನು ಇಮ್ಯಾನುಯಲ್​ ನಟಿಸುತ್ತಿದ್ದಾರೆ.

ಇದನ್ನೂ ಓದಿ:

‘ಪುಷ್ಪ ಸಿನಿಮಾ 10 ಕೆಜಿಎಫ್​ಗೆ ಸಮ’; ಅಲ್ಲು ಅರ್ಜುನ್​ ಚಿತ್ರಕ್ಕೆ ಸಿಕ್ತು ಹೊಸ ಮೆಚ್ಚುಗೆ

KGF Chapter 2: ಕೆಜಿಎಫ್ 2 ಹೊಸ ರಿಲೀಸ್ ಡೇಟ್ ಬಗ್ಗೆ ಹರಿದಾಡುತ್ತಿದೆ ಗುಸುಗುಸು

Published On - 12:08 pm, Sat, 26 June 21

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು