AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ’ ಸಂಗೀತ ನಿರ್ದೇಶಕನ ಹೊರಗಿಟ್ಟು ರವಿ ಬಸ್ರೂರ್​​ಗೆ ಅವಕಾಶ ನೀಡಿದ ಸಲ್ಮಾನ್ ಖಾನ್

ಹಾಡಿನ ಟ್ರ್ಯಾಕ್​ಗಳು ಕಥೆಯ ಜತೆ ಸಿಂಕ್ ಆಗುವುದಿಲ್ಲ ಎನ್ನುವ ಭಾವನೆ ಸಲ್ಮಾನ್ ಖಾನ್​ಗೆ ಮೂಡಿದೆ. ಈ ಕಾರಣಕ್ಕೆ ಅವರು ದೇವಿಶ್ರೀ ಪ್ರಸಾದ್ ಅವರನ್ನು ಕೈಬಿಡಲು ಸಲ್ಮಾನ್ ಸೂಚಿಸಿದ್ದಾರೆ.

‘ಪುಷ್ಪ’ ಸಂಗೀತ ನಿರ್ದೇಶಕನ ಹೊರಗಿಟ್ಟು ರವಿ ಬಸ್ರೂರ್​​ಗೆ ಅವಕಾಶ ನೀಡಿದ ಸಲ್ಮಾನ್ ಖಾನ್
‘ಪುಷ್ಪ’ ಸಂಗೀತ ನಿರ್ದೇಶಕನ ಹೊರಗಿಟ್ಟು ರವಿ ಬಸ್ರೂರ್​​ಗೆ ಅವಕಾಶ ನೀಡಿದ ಸಲ್ಮಾನ್ ಖಾನ್
TV9 Web
| Edited By: |

Updated on: Jun 30, 2022 | 4:46 PM

Share

‘ಪುಷ್ಪ’ (Pushpa Movie) ಹಾಗೂ ‘ಕೆಜಿಎಫ್ 2’ ಇವೆರಡೂ ಚಿತ್ರಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿವೆ. ಗೊತ್ತಿದ್ದೋ ಗೊತ್ತಿಲ್ಲದೆಯೋ ಈ ಎರಡೂ ಚಿತ್ರಗಳ ನಡುವೆ ಒಂದು ಕಾಂಪಿಟೇಷನ್ ಬೆಳೆದಿದೆ. ‘ಪುಷ್ಪ ಚಿತ್ರ 10 ಕೆಜಿಎಫ್​ಗೆ ಸಮ’ ಎಂಬ ಟಾಲಿವುಡ್ ಮಂದಿಯ ಹೇಳಿಕೆಯೇ ಈ ಸ್ಪರ್ಧೆ ಹುಟ್ಟಿಕೊಳ್ಳಲು ಮೂಲ ಕಾರಣ. ಈಗ ಬಾಲಿವುಡ್​ನಲ್ಲಿ ‘ಪುಷ್ಪ’ ಸಂಗೀತ ನಿರ್ದೇಶಕನ ಎದುರು ‘ಕೆಜಿಎಫ್’ (KGF) ಮ್ಯೂಸಿಕ್ ಡೈರೆಕ್ಟರ್ ರವಿ ಬಸ್ರೂರ್​​​ಗೆ (Ravi Basrur) ಅವಕಾಶ ಸಿಕ್ಕಿದೆ. ಈ ಬಗ್ಗೆ ಅನೇಕ ಮಾಧ್ಯಮಗಳಲ್ಲಿ ವರದಿ ಆಗಿದೆ.

‘ಪುಷ್ಪ’ ಚಿತ್ರದ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ಅವರು ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದರು. ಈ ಚಿತ್ರದ ಹಾಡುಗಳು ಹಿಟ್ ಆದ ಬಳಿಕ ಅವರಿಗೆ ಹಲವು ಅವಕಾಶಗಳು ಸಿಕ್ಕವು. ಅವರು ಸಲ್ಮಾನ್ ಖಾನ್ ನಟನೆಯ ‘ಕಭಿ ಈದ್​ ಕಭಿ ದಿವಾಲಿ’ ಸಿನಿಮಾಗೆ ಸಂಗೀತ ಸಂಯೋಜನೆ ಮಾಡಬೇಕಿತ್ತು. ಅವರು ಕೆಲ ಟ್ರ್ಯಾಕ್​ಗಳನ್ನು ಕಂಪೋಸ್ ಕೂಡ ಮಾಡಿದ್ದರು. ಆದರೆ, ಸಲ್ಲುಗೆ ಅದು ಇಷ್ಟ ಆಗಿಲ್ಲ. ಈ ಹಾಡಿನ ಟ್ರ್ಯಾಕ್​ಗಳು ಕಥೆಯ ಜತೆ ಸಿಂಕ್ ಆಗುವುದಿಲ್ಲ ಎನ್ನುವ ಭಾವನೆ ಸಲ್ಮಾನ್ ಖಾನ್​ಗೆ ಮೂಡಿದೆ. ಈ ಕಾರಣಕ್ಕೆ ಅವರು ದೇವಿಶ್ರೀ ಪ್ರಸಾದ್ ಅವರನ್ನು ಕೈಬಿಡಲು ಸೂಚಿಸಿದ್ದಾರೆ.

ಈಗ ಕೇಳಿ ಬರುತ್ತಿರುವ ಲೇಟೆಸ್ಟ್ ಮಾಹಿತಿ ಎಂದರೆ, ರವಿ ಬಸ್ರೂರ್ ಅವರನ್ನು ಸಲ್ಮಾನ್ ಖಾನ್ ಅಪ್ರೋಚ್ ಮಾಡಿದ್ದಾರೆ. ರವಿ ಬಸ್ರೂರ್ ಈ ಆಫರ್​ಗೆ ಒಕೆ ಎಂದಿದ್ದಾರೆ ಎನ್ನಲಾಗಿದೆ. ‘ಕಭಿ ಈದ್​ ಕಭಿ ದಿವಾಲಿ’ ಚಿತ್ರಕ್ಕೆ ರವಿ ಬಸ್ರೂರ್ ಹಿನ್ನೆಲೆ ಸಂಗೀತ ಹಾಗೂ ಎರಡು ಟ್ರ್ಯಾಕ್​ಗೆ ಸಂಗೀತ ಸಂಯೋಜನೆ ಮಾಡಲಿದ್ದಾರೆ.

ಇದನ್ನೂ ಓದಿ
Image
ಬೆಂಗಳೂರಲ್ಲಿ ಅಪಘಾತ: ‘ಕೆಜಿಎಫ್ 2’ ನಟನ ಬೆಂಜ್ ಕಾರು ಸಂಪೂರ್ಣ ಜಖಂ; ಕೂದಲೆಳೆ ಅಂತರದಲ್ಲಿ ನಟ ಪಾರು
Image
ಮಧ್ಯರಾತ್ರಿ ಸಿನಿಮಾ ವೀಕ್ಷಿಸಿದ ಶ್ರೀನಿಧಿ ಶೆಟ್ಟಿ, ಗರುಡ, ವಿನಯ್ ರಾಜ್​ಕುಮಾರ್..; ಚಿತ್ರ ನೋಡಿ ಆಶಾ ಭಟ್ ಹೇಳಿದ್ದೇನು?
Image
Srinidhi Shetty: ‘ಕೆಜಿಎಫ್’ ಬೆಡಗಿ ಶ್ರೀನಿಧಿ ಶೆಟ್ಟಿ ಕ್ಯೂಟ್ ಫೋಟೋ ಗ್ಯಾಲರಿ
Image
‘ಕೆಜಿಎಫ್​ 2’ ಪ್ರಚಾರಕ್ಕಾಗಿ ದೆಹಲಿಗೆ ತೆರಳಿದ ಯಶ್, ಶ್ರೀನಿಧಿ ಶೆಟ್ಟಿ

ಸಲ್ಮಾನ್ ಖಾನ್ ನಟನೆಯ ‘ಅಂತಿಮ್​’ ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ ಸಂಯೋಜನೆ ಮಾಡಿದ್ದರು. ಆ ಸಂದರ್ಭದಲ್ಲಿ ಸಲ್ಮಾನ್ ಖಾನ್ ಹಾಗೂ ರವಿ ನಡುವೆ ಫ್ರೆಂಡ್​ಶಿಪ್ ಬೆಳೆದಿದೆ. ರವಿ ಬಸ್ರೂರ್ ಕಾರ್ಯ ವೈಖರಿಯನ್ನು ಸಲ್ಮಾನ್ ಖಾನ್ ಮೆಚ್ಚಿಕೊಂಡಿದ್ದಾರೆ. ಈ ಕಾರಣಕ್ಕೆ ಸಲ್ಲು ಈ ಅವಕಾಶವನ್ನು ರವಿಗೆ  ನೀಡಿದ್ದಾರೆ. ಸದ್ಯ ಈ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಚರ್ಚೆ ಆಗುತ್ತಿದೆ. ‘ಪುಷ್ಪ’ ಚಿತ್ರಕ್ಕಿಂತ ‘ಕೆಜಿಎಫ್’ ಚಿತ್ರವೇ ಮೇಲು ಎನ್ನುವ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.

ಇದನ್ನೂ ಓದಿ: ‘ವಿಕ್ರಮ್​’ ಸಿನಿಮಾ ಸಕ್ಸಸ್​ ಪಾರ್ಟಿ ಆಯೋಜಿಸಿದ ಚಿರಂಜೀವಿ; ಗಮನ ಸೆಳೆದ ಸಲ್ಮಾನ್ ಖಾನ್

ಸಲ್ಮಾನ್ ಖಾನ್​ಗೆ ಅಂಕಲ್​ ಎಂದು ಕರೆದ ಸಾರಾ ಅಲಿ ಖಾನ್​; ನಟನ ರಿಯಾಕ್ಷನ್ ಹೇಗಿತ್ತು?

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!