AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ’ ಸಂಗೀತ ನಿರ್ದೇಶಕನ ಹೊರಗಿಟ್ಟು ರವಿ ಬಸ್ರೂರ್​​ಗೆ ಅವಕಾಶ ನೀಡಿದ ಸಲ್ಮಾನ್ ಖಾನ್

ಹಾಡಿನ ಟ್ರ್ಯಾಕ್​ಗಳು ಕಥೆಯ ಜತೆ ಸಿಂಕ್ ಆಗುವುದಿಲ್ಲ ಎನ್ನುವ ಭಾವನೆ ಸಲ್ಮಾನ್ ಖಾನ್​ಗೆ ಮೂಡಿದೆ. ಈ ಕಾರಣಕ್ಕೆ ಅವರು ದೇವಿಶ್ರೀ ಪ್ರಸಾದ್ ಅವರನ್ನು ಕೈಬಿಡಲು ಸಲ್ಮಾನ್ ಸೂಚಿಸಿದ್ದಾರೆ.

‘ಪುಷ್ಪ’ ಸಂಗೀತ ನಿರ್ದೇಶಕನ ಹೊರಗಿಟ್ಟು ರವಿ ಬಸ್ರೂರ್​​ಗೆ ಅವಕಾಶ ನೀಡಿದ ಸಲ್ಮಾನ್ ಖಾನ್
‘ಪುಷ್ಪ’ ಸಂಗೀತ ನಿರ್ದೇಶಕನ ಹೊರಗಿಟ್ಟು ರವಿ ಬಸ್ರೂರ್​​ಗೆ ಅವಕಾಶ ನೀಡಿದ ಸಲ್ಮಾನ್ ಖಾನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jun 30, 2022 | 4:46 PM

‘ಪುಷ್ಪ’ (Pushpa Movie) ಹಾಗೂ ‘ಕೆಜಿಎಫ್ 2’ ಇವೆರಡೂ ಚಿತ್ರಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿವೆ. ಗೊತ್ತಿದ್ದೋ ಗೊತ್ತಿಲ್ಲದೆಯೋ ಈ ಎರಡೂ ಚಿತ್ರಗಳ ನಡುವೆ ಒಂದು ಕಾಂಪಿಟೇಷನ್ ಬೆಳೆದಿದೆ. ‘ಪುಷ್ಪ ಚಿತ್ರ 10 ಕೆಜಿಎಫ್​ಗೆ ಸಮ’ ಎಂಬ ಟಾಲಿವುಡ್ ಮಂದಿಯ ಹೇಳಿಕೆಯೇ ಈ ಸ್ಪರ್ಧೆ ಹುಟ್ಟಿಕೊಳ್ಳಲು ಮೂಲ ಕಾರಣ. ಈಗ ಬಾಲಿವುಡ್​ನಲ್ಲಿ ‘ಪುಷ್ಪ’ ಸಂಗೀತ ನಿರ್ದೇಶಕನ ಎದುರು ‘ಕೆಜಿಎಫ್’ (KGF) ಮ್ಯೂಸಿಕ್ ಡೈರೆಕ್ಟರ್ ರವಿ ಬಸ್ರೂರ್​​​ಗೆ (Ravi Basrur) ಅವಕಾಶ ಸಿಕ್ಕಿದೆ. ಈ ಬಗ್ಗೆ ಅನೇಕ ಮಾಧ್ಯಮಗಳಲ್ಲಿ ವರದಿ ಆಗಿದೆ.

‘ಪುಷ್ಪ’ ಚಿತ್ರದ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ಅವರು ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದರು. ಈ ಚಿತ್ರದ ಹಾಡುಗಳು ಹಿಟ್ ಆದ ಬಳಿಕ ಅವರಿಗೆ ಹಲವು ಅವಕಾಶಗಳು ಸಿಕ್ಕವು. ಅವರು ಸಲ್ಮಾನ್ ಖಾನ್ ನಟನೆಯ ‘ಕಭಿ ಈದ್​ ಕಭಿ ದಿವಾಲಿ’ ಸಿನಿಮಾಗೆ ಸಂಗೀತ ಸಂಯೋಜನೆ ಮಾಡಬೇಕಿತ್ತು. ಅವರು ಕೆಲ ಟ್ರ್ಯಾಕ್​ಗಳನ್ನು ಕಂಪೋಸ್ ಕೂಡ ಮಾಡಿದ್ದರು. ಆದರೆ, ಸಲ್ಲುಗೆ ಅದು ಇಷ್ಟ ಆಗಿಲ್ಲ. ಈ ಹಾಡಿನ ಟ್ರ್ಯಾಕ್​ಗಳು ಕಥೆಯ ಜತೆ ಸಿಂಕ್ ಆಗುವುದಿಲ್ಲ ಎನ್ನುವ ಭಾವನೆ ಸಲ್ಮಾನ್ ಖಾನ್​ಗೆ ಮೂಡಿದೆ. ಈ ಕಾರಣಕ್ಕೆ ಅವರು ದೇವಿಶ್ರೀ ಪ್ರಸಾದ್ ಅವರನ್ನು ಕೈಬಿಡಲು ಸೂಚಿಸಿದ್ದಾರೆ.

ಈಗ ಕೇಳಿ ಬರುತ್ತಿರುವ ಲೇಟೆಸ್ಟ್ ಮಾಹಿತಿ ಎಂದರೆ, ರವಿ ಬಸ್ರೂರ್ ಅವರನ್ನು ಸಲ್ಮಾನ್ ಖಾನ್ ಅಪ್ರೋಚ್ ಮಾಡಿದ್ದಾರೆ. ರವಿ ಬಸ್ರೂರ್ ಈ ಆಫರ್​ಗೆ ಒಕೆ ಎಂದಿದ್ದಾರೆ ಎನ್ನಲಾಗಿದೆ. ‘ಕಭಿ ಈದ್​ ಕಭಿ ದಿವಾಲಿ’ ಚಿತ್ರಕ್ಕೆ ರವಿ ಬಸ್ರೂರ್ ಹಿನ್ನೆಲೆ ಸಂಗೀತ ಹಾಗೂ ಎರಡು ಟ್ರ್ಯಾಕ್​ಗೆ ಸಂಗೀತ ಸಂಯೋಜನೆ ಮಾಡಲಿದ್ದಾರೆ.

ಇದನ್ನೂ ಓದಿ
Image
ಬೆಂಗಳೂರಲ್ಲಿ ಅಪಘಾತ: ‘ಕೆಜಿಎಫ್ 2’ ನಟನ ಬೆಂಜ್ ಕಾರು ಸಂಪೂರ್ಣ ಜಖಂ; ಕೂದಲೆಳೆ ಅಂತರದಲ್ಲಿ ನಟ ಪಾರು
Image
ಮಧ್ಯರಾತ್ರಿ ಸಿನಿಮಾ ವೀಕ್ಷಿಸಿದ ಶ್ರೀನಿಧಿ ಶೆಟ್ಟಿ, ಗರುಡ, ವಿನಯ್ ರಾಜ್​ಕುಮಾರ್..; ಚಿತ್ರ ನೋಡಿ ಆಶಾ ಭಟ್ ಹೇಳಿದ್ದೇನು?
Image
Srinidhi Shetty: ‘ಕೆಜಿಎಫ್’ ಬೆಡಗಿ ಶ್ರೀನಿಧಿ ಶೆಟ್ಟಿ ಕ್ಯೂಟ್ ಫೋಟೋ ಗ್ಯಾಲರಿ
Image
‘ಕೆಜಿಎಫ್​ 2’ ಪ್ರಚಾರಕ್ಕಾಗಿ ದೆಹಲಿಗೆ ತೆರಳಿದ ಯಶ್, ಶ್ರೀನಿಧಿ ಶೆಟ್ಟಿ

ಸಲ್ಮಾನ್ ಖಾನ್ ನಟನೆಯ ‘ಅಂತಿಮ್​’ ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ ಸಂಯೋಜನೆ ಮಾಡಿದ್ದರು. ಆ ಸಂದರ್ಭದಲ್ಲಿ ಸಲ್ಮಾನ್ ಖಾನ್ ಹಾಗೂ ರವಿ ನಡುವೆ ಫ್ರೆಂಡ್​ಶಿಪ್ ಬೆಳೆದಿದೆ. ರವಿ ಬಸ್ರೂರ್ ಕಾರ್ಯ ವೈಖರಿಯನ್ನು ಸಲ್ಮಾನ್ ಖಾನ್ ಮೆಚ್ಚಿಕೊಂಡಿದ್ದಾರೆ. ಈ ಕಾರಣಕ್ಕೆ ಸಲ್ಲು ಈ ಅವಕಾಶವನ್ನು ರವಿಗೆ  ನೀಡಿದ್ದಾರೆ. ಸದ್ಯ ಈ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಚರ್ಚೆ ಆಗುತ್ತಿದೆ. ‘ಪುಷ್ಪ’ ಚಿತ್ರಕ್ಕಿಂತ ‘ಕೆಜಿಎಫ್’ ಚಿತ್ರವೇ ಮೇಲು ಎನ್ನುವ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.

ಇದನ್ನೂ ಓದಿ: ‘ವಿಕ್ರಮ್​’ ಸಿನಿಮಾ ಸಕ್ಸಸ್​ ಪಾರ್ಟಿ ಆಯೋಜಿಸಿದ ಚಿರಂಜೀವಿ; ಗಮನ ಸೆಳೆದ ಸಲ್ಮಾನ್ ಖಾನ್

ಸಲ್ಮಾನ್ ಖಾನ್​ಗೆ ಅಂಕಲ್​ ಎಂದು ಕರೆದ ಸಾರಾ ಅಲಿ ಖಾನ್​; ನಟನ ರಿಯಾಕ್ಷನ್ ಹೇಗಿತ್ತು?

ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು