AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖುಷ್ಬೂ ದಾಂಪತ್ಯ ಜೀವನದಲ್ಲಿ ಹೊಸ ಮೈಲಿಗಲ್ಲು; ಸಂತಸ ಹಂಚಿಕೊಂಡ ನಟಿ

ಖುಷ್ಬೂ ಅವರು ಇತ್ತೀಚೆಗೆ ಫಿಟ್​ನೆಸ್​ಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ಹಲವು ತಿಂಗಳ ಕಾಲ ಜಿಮ್​ನಲ್ಲಿ ಶ್ರಮ ಹಾಕಿ ತೆಳ್ಳಗೆ ಆಗಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

ಖುಷ್ಬೂ ದಾಂಪತ್ಯ ಜೀವನದಲ್ಲಿ ಹೊಸ ಮೈಲಿಗಲ್ಲು; ಸಂತಸ ಹಂಚಿಕೊಂಡ ನಟಿ
ಕುಟುಂಬದ ಜತೆ ಖುಷ್ಬೂ
TV9 Web
| Edited By: |

Updated on: Mar 11, 2022 | 4:52 PM

Share

ನಟಿ ಖುಷ್ಬೂ ಸುಂದರ್ (Khushbu Sundar)​ ಸದ್ಯ ಚಿತ್ರರಂಗದಿಂದ ದೂರವೇ ಉಳಿದುಕೊಂಡಿದ್ದಾರೆ. ಆದರೆ, ರಾಜಕೀಯದಲ್ಲಿ ಸಖತ್ ಆ್ಯಕ್ಟೀವ್​ ಆಗಿದ್ದಾರೆ. ಇದರ ಜತೆಗೆ ಸೋಶಿಯಲ್​ ಮೀಡಿಯಾದಲ್ಲೂ (Social Media) ಅವರು ಸಖತ್​ ಆ್ಯಕ್ಟೀವ್​ ಆಗಿರುತ್ತಾರೆ. ನಿತ್ಯ ಹೊಸಹೊಸ ಫೋಟೋ ಹಂಚಿಕೊಂಡು ಅಭಿಮಾನಿಗಳ ಜತೆ ಸಂಪರ್ಕದಲ್ಲಿ ಇರೋಕೆ ಖುಷ್ಬೂ ಪ್ರಯತ್ನಪಡುತ್ತಾರೆ. ಈಗ ಅವರ ದಾಂಪತ್ಯ ಜೀವನ ಹೊಸ ಮೈಲಿಗಲ್ಲನ್ನು ದಾಟಿ ಮುಂದೆ ಸಾಗುತ್ತಿದೆ. ಈ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಖುಷ್ಬೂ ಅವರ ದಾಂಪತ್ಯ ಜೀವನಕ್ಕೆ 22 ವರ್ಷ ತುಂಬಿದೆ. ಸುಂದರ್ ವೃತ್ತಿಯಲ್ಲಿ ನಿರ್ಮಾಪಕ. ಖುಷ್ಬೂ ಹಾಗೂ ಸುಂದರ್ ಒಟ್ಟಾಗಿ ‘ಅವ್ನಿ ಸಿನಿಮ್ಯಾಕ್ಸ್​’ ನಿರ್ಮಾಣ ಸಂಸ್ಥೆ ಆರಂಭಿಸಿದ್ದು, ಇದರ ಅಡಿಯಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈಗ ಸುಂದರ್ ಅವರು ಹೊಸ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈ ದಂಪತಿ ನಿರ್ಮಾಣ ಮಾಡುತ್ತಿರುವ ಹೊಸ ಸಿನಿಮಾದಲ್ಲಿ ಜೀವಾ, ಜೈ, ಶ್ರೀಕಾಂತ್​, ಐಶ್ವರ್ಯಾ ದತ್ತ, ಅಮೃತಾ ಅಯ್ಯರ್, ಸಂಯುಕ್ತ ಕಾರ್ತಿಕ್​ ಹಾಗೂ ದಿವ್ಯ ದರ್ಶಿನಿ ನಟಿಸುತ್ತಿದ್ದಾರೆ. ಈ ಮಧ್ಯೆ 22ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ.

ಖುಷ್ಬೂ ಅವರು ಸೋಶಿಯಲ್​ ಮೀಡಿಯಾದಲ್ಲಿ ಸುಂದರ್ ಜತೆ ಇರುವ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ, ’22 ವರ್ಷ ತುಂಬಿದೆ ಮತ್ತು ಮುಂದೆ ಸಾಗುತ್ತಿದ್ದೇವೆ’ ಎಂದು ಖುಷ್ಬೂ ಬರೆದುಕೊಂಡಿದ್ದಾರೆ. ಈ ಫೋಟೋಗೆ ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಖುಷ್ಬೂಗೆ ಶುಭಕೋರಿದ್ದಾರೆ.

ಖುಷ್ಬೂ ಅವರು ಇತ್ತೀಚೆಗೆ ಫಿಟ್​ನೆಸ್​ಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ಹಲವು ತಿಂಗಳ ಕಾಲ ಜಿಮ್​ನಲ್ಲಿ ಶ್ರಮ ಹಾಕಿ ತೆಳ್ಳಗೆ ಆಗಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಈ ಫೋಟೋ ನೋಡಿದ ಅಭಿಮಾನಿಗಳು ನಿಜಕ್ಕೂ ಅಚ್ಚರಿ ಹೊರಹಾಕುತ್ತಿದ್ದಾರೆ. ಮತ್ತೆ ಚಿತ್ರರಂಗಕ್ಕೆ ಬರುವಂತೆ ಅವರಿಗೆ ಅನೇಕರು ಬೇಡಿಕೆ ಕೂಡ ಇಟ್ಟಿದ್ದಾರೆ. ಆದರೆ, ಸದ್ಯಕ್ಕೆ ಅವರು ಆ ಬಗ್ಗೆ ಆಲೋಚನೆ ಮಾಡಿದಂತಿಲ್ಲ.

ಖುಷ್ಬೂ ಅವರು ಕನ್ನಡ ಚಿತ್ರರಂಗದಲ್ಲೂ ನಟಿಸಿದ್ದಾರೆ. ಇಲ್ಲಿಯ ನಟ-ನಟಿಯರ ಜತೆ ಅವರಿಗೆ ಒಳ್ಳೆಯ ಒಡನಾಟವಿದೆ. ಪುನೀತ್​ ರಾಜ್​ಕುಮಾರ್ ನಿಧನ ಹೊಂದಿದ ನಂತರ ಅವರು ಬೆಂಗಳೂರಿಗೆ ಆಗಮಿಸಿ ಶಿವರಾಜ್​ಕುಮಾರ್​ಗೆ ಧೈರ್ಯ ತುಂಬುವ ಕೆಲಸ ಮಾಡಿದ್ದರು.

ಇದನ್ನೂ ಓದಿ: ಲಂಡನ್​​​ನಲ್ಲಿ ಖುಷ್ಬೂ; ಅವರ ಸ್ಲಿಮ್​ ಬಾಡಿ ನೋಡಿ ಅಚ್ಚರಿ ಹೊರ ಹಾಕಿದ ಫ್ಯಾನ್ಸ್​

ಪದೇಪದೇ ಕರೆ ಮಾಡಿ ಪತಿ ಸುಂದರ್​ಗೆ ತೊಂದರೆ ಕೊಡಬೇಡಿ; ಖುಷ್ಬೂಗೆ ಯುವನಟಿಯ ಎಚ್ಚರಿಕೆ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?