AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಂಥವರಿಗೆಲ್ಲ ತ್ರಿಷಾ ಉತ್ತರಿಸಬೇಕಿಲ್ಲ’; ಖಡಕ್ ಆಗಿ ಹೇಳಿದ ಖುಷ್ಬೂ ಸುಂದರ್

ದಳಪತಿ ವಿಜಯ್ ಮತ್ತು ತ್ರಿಷಾ ಸಂಬಂಧದ ಕುರಿತು ನಡೆಯುತ್ತಿರುವ ಆರೋಪಗಳ ಬಗ್ಗೆ ನಟಿ ಖುಷ್ಬೂ ಸುಂದರ್ ಪ್ರತಿಕ್ರಿಯಿಸಿದ್ದಾರೆ. ವಿಜಯ್ ಪತ್ನಿ ಆರೋಪದ ನಂತರ ತ್ರಿಷಾ ಟೀಕೆಗೆ ಗುರಿಯಾಗಿದ್ದರು. ಖುಷ್ಬೂ, ತ್ರಿಷಾ ಅವರನ್ನು ಗೌರವಾನ್ವಿತ ಮತ್ತು ಸೌಮ್ಯ ಸ್ವಭಾವದ ಮಹಿಳೆ ಎಂದು ಬಣ್ಣಿಸಿದ್ದಾರೆ. ಇಂತಹ ಆರೋಪಗಳಿಗೆ ಪ್ರತಿಕ್ರಿಯಿಸಿ ಸಮಯ ವ್ಯರ್ಥ ಮಾಡಬಾರದು ಎಂದು ಹೇಳಿ, ತ್ರಿಷಾ ಪರವಾಗಿ ಖಡಕ್ ಆಗಿ ಬ್ಯಾಟ್ ಬೀಸಿದ್ದಾರೆ.

‘ಇಂಥವರಿಗೆಲ್ಲ ತ್ರಿಷಾ ಉತ್ತರಿಸಬೇಕಿಲ್ಲ’; ಖಡಕ್ ಆಗಿ ಹೇಳಿದ ಖುಷ್ಬೂ ಸುಂದರ್
ತ್ರಿಷಾ, ವಿಜಯ್-ಖುಷ್ಬೂ, ತ್ರಿಷಾ
ರಾಜೇಶ್ ದುಗ್ಗುಮನೆ
|

Updated on: Mar 17, 2026 | 8:03 AM

Share

ನಟ ದಳಪತಿ ವಿಜಯ್ ಹಾಗೂ ನಟಿ ತ್ರಿಷಾ (Trisha) ಮಧ್ಯೆ ಸಂಬಂಧ ಇದೆ ಎಂಬ ವಿಷಯ ಚರ್ಚೆ ಆಗುತ್ತಿದೆ. ಹೀಗಿರುವಾಗಲೇ ವಿಜಯ್​ ವಿರುದ್ಧ ಅವರ ಪತ್ನಿ ಗಂಭೀರ ಆರೋಪ ಮಾಡಿದ್ದು, ಪತಿಗೆ ನಟಿಯ ಜೊತೆ ಅನೈತಿಕ ಸಂಬಂಧ ಇದೆ ಎಂದು ಆರೋಪಿಸಿದ್ದಾರೆ. ಈ ಮಧ್ಯೆ ವಿಜಯ್ ಹಾಗೂ ತ್ರಿಷಾ ಒಟ್ಟಾಗಿ ಮದುವೆ ಒಂದರಲ್ಲಿ ಕಾಣಿಸಿಕೊಂಡಿದ್ದು ಚರ್ಚೆ ಹುಟ್ಟುಹಾಕಿದೆ. ಈ ಬೆಳವಣಿಗೆಯಿಂದ ತ್ರಿಷಾ ಅವರು ಟೀಕೆ ಎದುರಿಸಬೇಕಾಗಿ ಬಂದಿದೆ. ಈ ಎಲ್ಲ ವಿಷಯಗಳಿಗೆ ಖುಷ್ಬೂ ಸುಂದರ್ ಪ್ರತಿಕ್ರಿಯೆ ನೀಡಿದ್ದಾರೆ. ಅವರು ನಟಿಯ ಪರ ಬ್ಯಾಟ್ ಬೀಸಿದ್ದಾರೆ.

ಖುಷ್ಬೂ ಅವರು ಕನ್ನಡ, ತಮಿಳು ಸೇರಿದಂತೆ ಅನೇಕ ಭಾಷೆಯ ಸಿನಿಮಾಗಳಲ್ಲಿ ನಟಿಸಿದವರು. ಅವರು ಈಗ ರಾಜಕೀಯದಲ್ಲಿ ಬ್ಯುಸಿ ಇದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರೋ ಖುಷ್ಬೂ ವಿವಿಧ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯ ಹೊರ ಹಾಕುತ್ತಾ ಇರುತ್ತಾರೆ. ಈಗ ಅವರು ತ್ರಿಷಾ ವಿಷಯದಲ್ಲಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

‘ದುರದೃಷ್ಟವಶಾತ್, ನೀವು ಸೀನಿದರೂ ಸಹ ಅದನ್ನು ಬೇರೆಯವರನ್ನು ದೂಷಿಸಲು ಬಯಸುವ ಕಾಲದಲ್ಲಿ ನಾವಿದ್ದೇವೆ. ಅವರಿಬ್ಬರ (ವಿಜಯ್ ಹಾಗೂ ತ್ರಿಷಾ) ಬಗ್ಗೆ ನನಗೆ ತಿಳಿದಿದೆ. ಟ್ರ್ಯಾಶ್ (ತ್ರಿಶಾ) ನನಗೆ ತುಂಬಾ ಹತ್ತಿರವಾದವರು. ನಾನು ಭೇಟಿಯಾದ ಅತ್ಯಂತ ಗೌರವಾನ್ವಿತ ಮಹಿಳೆಯರಲ್ಲಿ ತ್ರಿಷಾ ಕೂಡ ಒಬ್ಬರು ಮತ್ತು ಅತ್ಯಂತ ಸೌಮ್ಯ ಸ್ವಭಾವದವರು’ ಎಂದು ಖುಷ್ಬೂ ಹೇಳಿದ್ದಾರೆ.

ತ್ರಿಷಾ ಅವರನ್ನು ಆಪ್ತ ಸ್ನೇಹಿತೆ ಎಂದು ಬಣ್ಣಿಸಿರುವ ಖುಷ್ಬು ಅವರು, ಸಾರ್ವಜನಿಕ ವ್ಯಕ್ತಿಗಳ ವೈಯಕ್ತಿಕ ಜೀವನದಲ್ಲಿ ಜನರು ಅನಗತ್ಯ ಆಸಕ್ತಿ ವಹಿಸುವುದರಿಂದ ಹೆಚ್ಚಿನ ಟೀಕೆಗಳು ಬರುತ್ತಿವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ತ್ರಿಷಾ ಬರ್ತ್​​​ಡೇ ದಿನ ದಳಪತಿ ವಿಜಯ್ ರಾಜಕೀಯ ಭವಿಷ್ಯ; ಚುನಾವಣೆಗೂ ಮುನ್ನವೇ ಡಿವೋರ್ಸ್?

‘ಕುಳಿತು ಕಾಮೆಂಟ್ ಮಾಡುವವರಿಗೆ ಅವರ ಜೀವನದಲ್ಲಿ ಏನಾಗುತ್ತಿದೆ ಎಂಬುದು ಬೇಕಾಗಿಲ್ಲ. ಅವರಿಗೆ ಬೇರೆಯವರ ಜೀವನ ನೋಡುವುದರಲ್ಲೇ ಖುಷಿ ಸಿಗುತ್ತದೆ. ಅವರು ಬೇರೆಯವರ ಬಗ್ಗೆ ಕಾಮೆಂಟ್ ಮಾಡುವುದರಲ್ಲಿ ಆನಂದ ಪಡೆಯುತ್ತಾರೆ. ನಾವು ಅವರಿಗೆ ಪ್ರತಿಕ್ರಿಯಿಸಲು ನಮ್ಮ ಸಮಯವನ್ನು ವ್ಯರ್ಥ ಮಾಡುವ ಅಗತ್ಯವಿಲ್ಲ ಎಂಬುದು ನನ್ನ ಅಭಿಪ್ರಾಯ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ