AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಡನ್​​​ನಲ್ಲಿ ಖುಷ್ಬೂ; ಅವರ ಸ್ಲಿಮ್​ ಬಾಡಿ ನೋಡಿ ಅಚ್ಚರಿ ಹೊರ ಹಾಕಿದ ಫ್ಯಾನ್ಸ್​

‘ರಣಧೀರ’, ‘ಅಂಜದ ಗಂಡು’, ‘ಯುಗಪುರುಷ’, ‘ಶಾಂತಿ ಕ್ರಾಂತಿ’ ಮುಂತಾದ ಸಿನಿಮಾಗಳಲ್ಲಿ ನಟಿಸಿ ಕರುನಾಡಿನಲ್ಲಿ ಜನಪ್ರಿಯರಾದ ಖುಷ್ಬೂ ಅವರಿಗೆ ಈಗ 50ರ ಪ್ರಾಯ. ಈ ವಯಸ್ಸಿನಲ್ಲೂ ಅವರು ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ.

ಲಂಡನ್​​​ನಲ್ಲಿ ಖುಷ್ಬೂ; ಅವರ ಸ್ಲಿಮ್​ ಬಾಡಿ ನೋಡಿ ಅಚ್ಚರಿ ಹೊರ ಹಾಕಿದ ಫ್ಯಾನ್ಸ್​
ಖುಷ್ಬೂ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jan 31, 2022 | 2:42 PM

Share

ನೂರಾರು ಸಿನಿಮಾಗಳಲ್ಲಿ ನಟಿಸಿರುವ ಬಹುಭಾಷಾ ಕಲಾವಿದೆ ಖುಷ್ಬೂ (Khushbu) ಅವರು ಈಗ ರಾಜಕೀಯದಲ್ಲಿ ಬ್ಯುಸಿ ಆಗಿದ್ದಾರೆ. ಚಿತ್ರರಂಗದಲ್ಲಿ ಅವರು ಹೆಚ್ಚಾಗಿ ಸಕ್ರಿಯರಾಗಿಲ್ಲ. ಈ ನಡುವೆ ಅವರು ಫಿಟ್ನೆಸ್​ ಕಡೆಗೆ ಹೆಚ್ಚು ಗಮನ ಹರಿಸಿದ್ದಾರೆ. ಇದನ್ನು ಚಾಲೆಂಜ್​ ಆಗಿ ತೆಗೆದುಕೊಂಡಿದ್ದಾರೆ ಅವರು. ಪರಿಣಾಮವಾಗಿ ಸಿಕ್ಕಾಪಟ್ಟೆ ಸ್ಲಿಮ್​ ಆಗಿದ್ದಾರೆ. ಇತ್ತೀಚೆಗೆ ಅವರು ಸಾಕಷ್ಟು ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಫೋಟೋಗಳನ್ನು ನೋಡಿದರೆ ಒಮ್ಮೆಲೇ ಅವರ ಗುರುತು ಸಿಗುವುದು ಕೂಡ ಕಷ್ಟವಾಗುತ್ತಿದೆ. ಈಗ ಅವರು ಲಂಡನ್​ಗೆ (London) ತೆರಳಿದ್ದಾರೆ. ಇದರ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿ ಎಲ್ಲರೂ ಅಚ್ಚರಿ ಹೊರಹಾಕಿದ್ದಾರೆ.

‘ರಣಧೀರ’, ‘ಅಂಜದ ಗಂಡು’, ‘ಯುಗಪುರುಷ’, ‘ಶಾಂತಿ ಕ್ರಾಂತಿ’ ಮುಂತಾದ ಸಿನಿಮಾಗಳಲ್ಲಿ ನಟಿಸಿ ಕರುನಾಡಿನಲ್ಲಿ ಜನಪ್ರಿಯರಾದ ಖುಷ್ಬೂ ಅವರಿಗೆ ಈಗ 50ರ ಪ್ರಾಯ. ಈ ವಯಸ್ಸಿನಲ್ಲೂ ಅವರು ಫಿಟ್​ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಮಿತಿ ಮೀರಿದ್ದ ಅವರ ದೇಹದ ತೂಕ ಇಳಿಕೆ ಆಗಿದೆ. ಅವರು ಬರೋಬ್ಬರಿ 15 ಕೆಜಿಗೂ ಅಧಿಕ ದೇಹತೂಕ ಇಳಿಸಿಕೊಂಡಿದ್ದಾರೆ. ಇದಕ್ಕೆ ಅವರ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಲಂಡನ್​ನಲ್ಲಿರುವ ಅವರು ಹಾಕಿರುವ ಫೋಟೋ ವೈರಲ್​ ಆಗುತ್ತಿದೆ.

ಖುಷ್ಬೂ ಅವರಿಗೆ ಕಾಣಿಸಿಕೊಂಡಿತ್ತು ಕೊರೊನಾ

ಕೊವಿಡ್​ ಮೂರನೇ ಅಲೆ ಕಾಣಿಸಿಕೊಂಡಿದೆ. ಕೊವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಗಳು ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ. ಈ ಮಧ್ಯೆ ಸಾಕಷ್ಟು ಸೆಲೆಬ್ರಿಟಿಗಳಿಗೆ, ರಾಜಕಾರಣಿಗಳಿಗೆ ಕೊವಿಡ್​ ಅಂಟುತ್ತಿದೆ. ಸಿನಿಮಾ ಕೆಲಸಗಳಿಗಾಗಿ ನಾನಾ ಕಡೆ ಸುತ್ತಾಟ ನಡೆಸುವ ಹಲವರು ಕೊವಿಡ್​ ಸೋಂಕಿಗೆ ತುತ್ತಾಗಿದ್ದಾರೆ. ನಟಿ ಹಾಗೂ ರಾಜಕಾರಣಿ ಖುಷ್ಬೂ ಸುಂದರ್​ಗೂ ಈಗ ಕೊರೊನಾ ವೈರಸ್​ ಅಂಟಿತ್ತು. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಅವರು ಬರೆದುಕೊಂಡಿದ್ದರು.

‘ಕೊವಿಡ್​ ಎರಡು ಅಲೆಯನ್ನು ತಪ್ಪಿಸಿಕೊಂಡೆ. ಆದರೆ, ಈಗ ಕೊವಿಡ್​ ಪಾಸಿಟಿವ್​ ಆಗಿದೆ. ನಿನ್ನೆ ಸಂಜೆಯವರೆಗೂ ನನಗೆ ಕೊವಿಡ್​ ನೆಗೆಟಿವ್​ ಆಗಿತ್ತು. ಆದರೆ, ಈಗ ಪಾಸಿಟಿವ್​ ವರದಿ ಬಂದಿದೆ. ನಾನು ಐಸೋಲೇಷನ್​ನಲ್ಲಿದ್ದೇನೆ. ಒಂಟಿಯಾಗಿರುವುದನ್ನು ನಿಜಕ್ಕೂ ದ್ವೇಷಿಸುತ್ತೇನೆ. ಮುಂದಿನ ಐದು ದಿನಗಳಕಾಲ ನನಗೆ ಮನರಂಜನೆ ನೀಡಿ. ಕೊವಿಡ್​ ಲಕ್ಷಣ ಇದ್ದರೆ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದು ಖುಷ್ಬೂ ಟ್ವೀಟ್​ ಮಾಡಿದ್ದರು. ಆ ಬಳಿಕ ಅವರು ಚೇತರಿಸಿಕೊಂಡಿದ್ದರು.

ಕನ್ನಡ ಚಿತ್ರರಂಗದ ಬಗ್ಗೆ ಹಾಗೂ ಇಲ್ಲಿನ ಕಲಾವಿದರ ಬಗ್ಗೆ ಇರುವ ಗೌರವ ಖುಷ್ಬೂಗೆ ಕಿಂಚಿತ್ತೂ ಕಡಿಮೆ ಆಗಿಲ್ಲ. ಸಾಕಷ್ಟು ಕಡೆಗಳಲ್ಲಿ ಅವರು ಸ್ಯಾಂಡಲ್​ವುಡ್​ ಹಾಗೂ ಸ್ಯಾಂಡಲ್​ವುಡ್​ ಕಲಾವಿದರ ಬಗ್ಗೆ ಮಾತನಾಡಿದ್ದಿದೆ. ನವೆಂಬರ್​ 9ರಂದು ಖುಷ್ಬೂ ಬೆಂಗಳೂರಿನಲ್ಲಿರುವ ಪುನೀತ್​ ರಾಜ್​ಕುಮಾರ್​ ಮನೆಗೆ ಆಗಮಿಸಿದ್ದರು. ಈ ವೇಳೆ ಅಪ್ಪು ಪತ್ನಿ ಅಶ್ವಿನಿ ಪುನೀತ್​ ರಾಜ್​​ಕುಮಾರ್​ಗೆ ಸಾಂತ್ವನ ಹೇಳಿದ್ದರು.

ಇದನ್ನೂ ಓದಿ: Khushbu: ಬೆಂಗಳೂರಿಗೆ ಆಗಮಿಸಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ಗೆ ಸಾಂತ್ವನ ಹೇಳಿದ ಖುಷ್ಬೂ

Samantha: ಅಬ್ಬಬ್ಬಾ, ಸಮಂತಾ ಖರೀದಿಸಿದ ಈ ಎರಡು ಜಾಕೆಟ್​ನ ಬೆಲೆ ಇಷ್ಟೊಂದಾ?

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ