ಸಿದ್ದಾರ್ಥ್​ ಮಲ್ಹೋತ್ರಾ- ಕಿಯಾರಾ ಅಡ್ವಾಣಿ ಪ್ರೇಮಕ್ಕೆ ಸಿಕ್ತು ಮತ್ತೊಂದು ಸಾಕ್ಷ್ಯ

ಕಿಯಾರಾ ಹಾಗೂ ಸಿದ್ಧಾರ್ಥ್​ ಸಾಕಷ್ಟು ಬಾರಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಕಿಯಾರಾ ಅವರು ಸಿದ್ದಾರ್ಥ್​ ಪಾಲಕರನ್ನು ಭೇಟಿ ಮಾಡಿದ್ದರು. ಈ ಭೇಟಿ ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು.

ಸಿದ್ದಾರ್ಥ್​ ಮಲ್ಹೋತ್ರಾ- ಕಿಯಾರಾ ಅಡ್ವಾಣಿ ಪ್ರೇಮಕ್ಕೆ ಸಿಕ್ತು ಮತ್ತೊಂದು ಸಾಕ್ಷ್ಯ
ಕಿಯಾರಾ-ಸಿದ್ದಾರ್ಥ್​
Follow us
| Updated By: ರಾಜೇಶ್ ದುಗ್ಗುಮನೆ

Updated on:Dec 28, 2021 | 3:23 PM

ಕಿಯಾರಾ ಅಡ್ವಾಣಿ (Kiara Advani) ಹಾಗೂ ಸಿದ್ಧಾರ್ಥ್​ ಮಲ್ಹೋತ್ರಾ (Sidharth Malhotra) ರಿಲೇಶನ್​ಶಿಪ್​ನಲ್ಲಿದ್ದಾರೆ ಎನ್ನುವ ಗುಸುಗುಸು ಬಾಲಿವುಡ್​ ಅಂಗಳದಲ್ಲಿ ಹರಿದಾಡಿತ್ತು. ಈ ವದಂತಿಯನ್ನು ನಂಬುವ ರೀತಿಯಲ್ಲಿ ಸಾಕಷ್ಟು ಘಟನೆಗಳು ನಡೆದವು. ಆದರೆ, ಇದನ್ನು ಕಿಯಾರಾ ಅಲ್ಲಗಳೆಯುತ್ತಲೇ ಬರುತ್ತಿದ್ದಾರೆ. ‘ನಾವಿಬ್ಬರೂ ಉತ್ತಮ ಗೆಳೆಯರಷ್ಟೇ’ ಎಂದು ಹೇಳುವ ಮೂಲಕ ಎಲ್ಲಾ ಊಹಾಪೋಹಗಳಿಗೆ ಕಿಯಾರಾ ತೆರೆ ಎಳೆಯುವ ಪ್ರಯತ್ನ ಮಾಡಿದ್ದರು. ಈಗ ಕಿಯಾರಾ ಹಾಗೂ ಸಿದ್ದಾರ್ಥ್​ ಪ್ರೀತಿಯಲ್ಲಿರುವ ವಿಚಾರಕ್ಕೆ ಹೊಸ ಸಾಕ್ಷ್ಯ ಸಿಕ್ಕಿದೆ.

ಕಿಯಾರಾ ಹಾಗೂ ಸಿದ್ಧಾರ್ಥ್​ ಸಾಕಷ್ಟು ಬಾರಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಕಿಯಾರಾ ಅವರು ಸಿದ್ದಾರ್ಥ್​ ಪಾಲಕರನ್ನು ಭೇಟಿ ಮಾಡಿದ್ದರು. ಈ ಭೇಟಿ ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು. ಈ ಘಟನೆ ನಂತರದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವದಂತಿಗಳು ಹುಟ್ಟಿಕೊಳ್ಳಲು ಆರಂಭಿಸಿದವು. ಈ ಬಗ್ಗೆ ಕಿಯಾರಾ ಸಾಕಷ್ಟು ಬಾರಿ ಉತ್ತರಿಸುವ ಪ್ರಯತ್ನ ಮಾಡಿದ್ದರು. ಆದರೆ, ಇದನ್ನು ನಂಬೋಕೆ ಅಭಿಮಾನಿಗಳು ರೆಡಿ ಇಲ್ಲ.

ಕಿಯಾರಾ ಹಾಗೂ ಸಿದ್ದಾರ್ಥ್​ ಹೊಸ ವರ್ಷ ವೆಲ್​ಕಮ್​ ಮಾಡಲು ಮಾಲ್ಡೀವ್ಸ್​ಗೆ ತೆರಳಿದ್ದಾರೆ. ಇಬ್ಬರೂ ಇಂದು (ಡಿಸೆಂಬರ್​ 28) ಮುಂಜಾನೆ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಇವರನ್ನು ಪಾಪರಾಜಿಗಳು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಸದ್ಯ, ಈ ಫೋಟೋ ವೈರಲ್​ ಆಗುತ್ತಿದ್ದು, ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಬಾಲಿವುಡ್​ನ ಬಹುಬೇಡಿಕೆಯ ನಟಿಯರಲ್ಲಿ ಕಿಯಾರಾ ಅಡ್ವಾಣಿ ಕೂಡ ಪ್ರಮುಖರು. ಹಲವು ಹಿಟ್​ ಸಿನಿಮಾಗಳನ್ನು ನೀಡಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ‘ಎಂ.ಎಸ್​. ಧೋನಿ: ಅನ್​ಟೋಲ್ಡ್​ ಸ್ಟೋರಿ’, ‘ಕಬೀರ್​ ಸಿಂಗ್’, ‘ಗುಡ್​ ನ್ಯೂಸ್’ ಮುಂತಾದ ಚಿತ್ರಗಳಿಂದ ಅವರಿಗೆ ಭಾರಿ ಯಶಸ್ಸು ಸಿಕ್ಕಿದೆ. ಲಸ್ಟ್​ ಸ್ಟೋರೀಸ್​ ವೆಬ್​ ಸರಣಿ ಮೂಲಕವೂ ಅವರ ಜನಪ್ರಿಯತೆ ಹೆಚ್ಚಿತು. ಈ ಬಾಲಿವುಡ್​ ಬೆಡಗಿಗೆ ದಕ್ಷಿಣ ಭಾರತದಲ್ಲೂ ಸಖತ್​ ಡಿಮ್ಯಾಂಡ್​ ಇದೆ. ತೆಲುಗಿನ ಸ್ಟಾರ್​ ನಟರ ಜೊತೆ ಅಭಿನಯಿಸಿರುವ ಅವರಿಗೆ ಇತ್ತೀಚೆಗೆ ಬಂಪರ್​ ಆಫರ್​ ಸಿಕ್ಕಿತ್ತು. ನಟ ರಾಮ್​ ಚರಣ್​ ಮತ್ತು ನಿರ್ದೇಶಕ ಶಂಕರ್​ ಕಾಂಬಿನೇಷನ್​ನ ಹೊಸ ಚಿತ್ರಕ್ಕೆ ಕಿಯಾರಾ ನಾಯಕಿಯಾಗಿ ಆಯ್ಕೆ ಆಗಿದ್ದಾರೆ. ‘ಶೇರ್​​ಷಾ’ ಸಿನಿಮಾದಲ್ಲಿ ಕಿಯಾರಾ ಹಾಗೂ ಸಿದ್ದಾರ್ಥ್​ ಒಟ್ಟಾಗಿ ನಟಿಸಿದ್ದರು.

ಇದನ್ನೂ ಓದಿ: ‘ಪುಷ್ಪ’ ಹಾಡಿನಿಂದ ಸಮಂತಾ ಪ್ರಪಂಚದಲ್ಲೇ ನಂ.1; ಏನಿದು ಹೊಸ ದಾಖಲೆ?

ಸಿದ್ದಾರ್ಥ್​ ಶುಕ್ಲಾ ಪ್ರಿಯತಮೆ ಶೆಹನಾಜ್ ಗಿಲ್​ ತಂದೆ ಮೇಲೆ ಗುಂಡಿನ ದಾಳಿ; ನಟಿಗೆ ಮತ್ತೊಂದು ಆಘಾತ

Published On - 2:58 pm, Tue, 28 December 21

ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?