ರಾಮ್​ ಚರಣ್​-ಶಂಕರ್​ ಸಿನಿಮಾಗೆ ಕಿಯಾರಾ ನಾಯಕಿ; ಹುಟ್ಟುಹಬ್ಬದ ದಿನವೇ ಗುಡ್​ ನ್ಯೂಸ್​

ಮೊದಲಿನಿಂದಲೂ ಬಿಗ್​ ಬಜೆಟ್​ನ ಸಿನಿಮಾಗಳನ್ನು ಮಾಡಿಕೊಂಡು ಬಂದಿರುವ ನಿರ್ದೇಶಕ ಶಂಕರ್​ ಈ ಬಾರಿ ಇನ್ನೊಂದು ದೈತ್ಯ ಸಿನಿಮಾ ಕಟ್ಟಿಕೊಡಲು ಸಜ್ಜಾಗುತ್ತಿದ್ದಾರೆ. ಅದಕ್ಕೆ ಕಿಯಾರಾ ಅಡ್ವಾಣಿ ನಾಯಕಿ ಎಂಬುದು ವಿಶೇಷ.

ರಾಮ್​ ಚರಣ್​-ಶಂಕರ್​ ಸಿನಿಮಾಗೆ ಕಿಯಾರಾ ನಾಯಕಿ; ಹುಟ್ಟುಹಬ್ಬದ ದಿನವೇ ಗುಡ್​ ನ್ಯೂಸ್​
ಕಿಯಾರಾ ಅಡ್ವಾಣಿ, ರಾಮ್​ ಚರಣ್​, ಶಂಕರ್​
Follow us
| Updated By: ಮದನ್​ ಕುಮಾರ್​

Updated on: Jul 31, 2021 | 1:04 PM

ಬಾಲಿವುಡ್​ನ ಬಹುಬೇಡಿಕೆಯ ನಟಿಯರಲ್ಲಿ ಕಿಯಾರಾ ಅಡ್ವಾಣಿ (Kiara Advani) ಕೂಡ ಪ್ರಮುಖರು. ಹಲವು ಹಿಟ್​ ಸಿನಿಮಾಗಳನ್ನು ನೀಡಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ಎಂ.ಎಸ್​. ಧೋನಿ: ಅನ್​ಟೋಲ್ಡ್​ ಸ್ಟೋರಿ, ಕಬೀರ್​ ಸಿಂಗ್, ಗುಡ್​ ನ್ಯೂಸ್​ ಮುಂತಾದ ಚಿತ್ರಗಳಿಂದ ಅವರಿಗೆ ಭಾರಿ ಯಶಸ್ಸು ಸಿಕ್ಕಿದೆ. ಲಸ್ಟ್​ ಸ್ಟೋರೀಸ್​ ವೆಬ್​ ಸರಣಿ ಮೂಲಕವೂ ಅವರ ಜನಪ್ರಿಯತೆ ಹೆಚ್ಚಿತು. ಈ ಬಾಲಿವುಡ್​ ಬೆಡಗಿಗೆ ದಕ್ಷಿಣ ಭಾರತದಲ್ಲೂ ಸಖತ್​ ಡಿಮ್ಯಾಂಡ್​ ಇದೆ. ತೆಲುಗಿನ ಸ್ಟಾರ್​ ನಟರ ಜೊತೆ ಅಭಿನಯಿಸಿರುವ ಅವರಿಗೆ ಈಗ ಇನ್ನೊಂದು ಬಂಪರ್​ ಆಫರ್​ ಸಿಕ್ಕಿದೆ. ನಟ ರಾಮ್​ ಚರಣ್​ (Ram Charan) ಮತ್ತು ನಿರ್ದೇಶಕ ಶಂಕರ್​ (S. Shankar) ಕಾಂಬಿನೇಷನ್​ನ ಹೊಸ ಚಿತ್ರಕ್ಕೆ ಕಿಯಾರಾ ನಾಯಕಿಯಾಗಿ ಆಯ್ಕೆ ಆಗಿದ್ದಾರೆ.

ಇಂದು (ಜು.31) ಕಿಯಾರಾ ಅಡ್ವಾಣಿ ಜನ್ಮದಿನ. ಆ ಪ್ರಯುಕ್ತ ಈ ಸಿಹಿ ಸುದ್ದಿ ಬ್ರೇಕ್​ ಮಾಡಲಾಗಿದೆ. ಖ್ಯಾತ ನಿರ್ಮಾಪಕ ದಿಲ್​ ರಾಜು ನಿರ್ಮಾಣ ಮಾಡಲಿರುವ ದೊಡ್ಡ ಪ್ರಾಜೆಕ್ಟ್​ನಲ್ಲಿ ರಾಮ್​ ಚರಣ್​ ನಟಿಸುತ್ತಿದ್ದು, ಅದಕ್ಕೆ ಶಂಕರ್​ ನಿರ್ದೇಶನ ಮಾಡಲಿದ್ದಾರೆ. ಈ ಸಿನಿಮಾದಲ್ಲಿ ರಾಮ್​ ಚರಣ್​ಗೆ ಜೋಡಿಯಾಗಿ ನಟಿಸುವ ಅವಕಾಶ ಕಿಯಾರಾಗೆ ಸಿಕ್ಕಿದೆ. ಈ ಹಿಂದೆ ‘ವಿನಯ ವಿಧೇಯ ರಾಮ’ ಸಿನಿಮಾದಲ್ಲಿ ರಾಮ್​ ಚರಣ್​ ಮತ್ತು ಕಿಯಾರಾ ಜೊತೆಯಾಗಿ ನಟಿಸಿದ್ದರು. ಈಗ ಮತ್ತೊಮ್ಮೆ ಈ ಜೋಡಿ ಒಂದಾಗುತ್ತಿದೆ.

ರಾಮ್​ ಚರಣ್​ ನಟಿಸುತ್ತಿರುವ 15ನೇ ಸಿನಿಮಾ ಇದಾಗಿದ್ದು, ಶೀಘ್ರದಲ್ಲೇ ಶೂಟಿಂಗ್​ ಆರಂಭ ಆಗಲಿದೆ. ಚಿತ್ರದ ಶೀರ್ಷಿಕೆ ಏನು ಹಾಗೂ ಬೇರೆ ಯಾವೆಲ್ಲ ಕಲಾವಿದರು ಸಿನಿಮಾದಲ್ಲಿ ನಟಿಸಲಿದ್ದಾರೆ ಎಂಬಿತ್ಯಾದಿ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ. ತೆಲುಗು, ತಮಿಳು ಮತ್ತು ಹಿಂದಿಯಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಆ ಮೂಲಕ ಕಿಯಾರಾಗೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಖ್ಯಾತಿ ಹೆಚ್ಚಲಿದೆ.

ಸದ್ಯ ರಾಮ್​ ಚರಣ್​ ಅವರು ಆರ್​ಆರ್​ಆರ್​ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ರಾಜಮೌಳಿ ನಿರ್ದೇಶಿಸುತ್ತಿರುವ ಆ ಚಿತ್ರದ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ. ಆ ಸಿನಿಮಾ ಬಳಿಕ ರಾಮ್​ ಚರಣ್​-ಶಂಕರ್​ ಕಾಂಬಿನೇಷನ್​ನ ಚಿತ್ರ ಸೆಟ್ಟೇರುವುದರಿಂದ ಇನ್ನೂ ದೊಟ್ಟದಲ್ಲಿ ನಿರ್ಮಾಣವಾಗಲೇಬೇಕಾದ ಅನಿವಾರ್ಯತೆ ಇದೆ. ಮೊದಲಿನಿಂದಲೂ ಬಿಗ್​ ಬಜೆಟ್​ನ ಸಿನಿಮಾಗಳನ್ನು ಮಾಡಿಕೊಂಡು ಬಂದಿರುವ ಶಂಕರ್​ ಈ ಬಾರಿ ಇನ್ನೊಂದು ದೈತ್ಯ ಸಿನಿಮಾ ಕಟ್ಟಿಕೊಡಲು ಸಜ್ಜಾಗುತ್ತಿದ್ದಾರೆ.

ಇದನ್ನೂ ಓದಿ:

ರಾಮ್​ ಚರಣ್​ Vs ಜ್ಯೂ. ಎನ್​ಟಿಆರ್​; ಫ್ಯಾನ್ಸ್ ತಕರಾರು ಬಗೆಹರಿಸಲು ರಾಜಮೌಳಿ ಮಾಡಿದ ಪ್ಲ್ಯಾನ್​ ಏನು?

ಮತ್ತೆ ಮತ್ತೆ ಆಲಿಯಾ ಭಟ್​ ಬೇಕು ಎಂದು ಬಯಸಿದ ರಾಮ್​ ಚರಣ್​; ಏನಿದು ವಿಷ್ಯ?

ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ