AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್​ ಚರಣ್​-ಶಂಕರ್​ ಸಿನಿಮಾಗೆ ಕಿಯಾರಾ ನಾಯಕಿ; ಹುಟ್ಟುಹಬ್ಬದ ದಿನವೇ ಗುಡ್​ ನ್ಯೂಸ್​

ಮೊದಲಿನಿಂದಲೂ ಬಿಗ್​ ಬಜೆಟ್​ನ ಸಿನಿಮಾಗಳನ್ನು ಮಾಡಿಕೊಂಡು ಬಂದಿರುವ ನಿರ್ದೇಶಕ ಶಂಕರ್​ ಈ ಬಾರಿ ಇನ್ನೊಂದು ದೈತ್ಯ ಸಿನಿಮಾ ಕಟ್ಟಿಕೊಡಲು ಸಜ್ಜಾಗುತ್ತಿದ್ದಾರೆ. ಅದಕ್ಕೆ ಕಿಯಾರಾ ಅಡ್ವಾಣಿ ನಾಯಕಿ ಎಂಬುದು ವಿಶೇಷ.

ರಾಮ್​ ಚರಣ್​-ಶಂಕರ್​ ಸಿನಿಮಾಗೆ ಕಿಯಾರಾ ನಾಯಕಿ; ಹುಟ್ಟುಹಬ್ಬದ ದಿನವೇ ಗುಡ್​ ನ್ಯೂಸ್​
ಕಿಯಾರಾ ಅಡ್ವಾಣಿ, ರಾಮ್​ ಚರಣ್​, ಶಂಕರ್​
TV9 Web
| Edited By: |

Updated on: Jul 31, 2021 | 1:04 PM

Share

ಬಾಲಿವುಡ್​ನ ಬಹುಬೇಡಿಕೆಯ ನಟಿಯರಲ್ಲಿ ಕಿಯಾರಾ ಅಡ್ವಾಣಿ (Kiara Advani) ಕೂಡ ಪ್ರಮುಖರು. ಹಲವು ಹಿಟ್​ ಸಿನಿಮಾಗಳನ್ನು ನೀಡಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ಎಂ.ಎಸ್​. ಧೋನಿ: ಅನ್​ಟೋಲ್ಡ್​ ಸ್ಟೋರಿ, ಕಬೀರ್​ ಸಿಂಗ್, ಗುಡ್​ ನ್ಯೂಸ್​ ಮುಂತಾದ ಚಿತ್ರಗಳಿಂದ ಅವರಿಗೆ ಭಾರಿ ಯಶಸ್ಸು ಸಿಕ್ಕಿದೆ. ಲಸ್ಟ್​ ಸ್ಟೋರೀಸ್​ ವೆಬ್​ ಸರಣಿ ಮೂಲಕವೂ ಅವರ ಜನಪ್ರಿಯತೆ ಹೆಚ್ಚಿತು. ಈ ಬಾಲಿವುಡ್​ ಬೆಡಗಿಗೆ ದಕ್ಷಿಣ ಭಾರತದಲ್ಲೂ ಸಖತ್​ ಡಿಮ್ಯಾಂಡ್​ ಇದೆ. ತೆಲುಗಿನ ಸ್ಟಾರ್​ ನಟರ ಜೊತೆ ಅಭಿನಯಿಸಿರುವ ಅವರಿಗೆ ಈಗ ಇನ್ನೊಂದು ಬಂಪರ್​ ಆಫರ್​ ಸಿಕ್ಕಿದೆ. ನಟ ರಾಮ್​ ಚರಣ್​ (Ram Charan) ಮತ್ತು ನಿರ್ದೇಶಕ ಶಂಕರ್​ (S. Shankar) ಕಾಂಬಿನೇಷನ್​ನ ಹೊಸ ಚಿತ್ರಕ್ಕೆ ಕಿಯಾರಾ ನಾಯಕಿಯಾಗಿ ಆಯ್ಕೆ ಆಗಿದ್ದಾರೆ.

ಇಂದು (ಜು.31) ಕಿಯಾರಾ ಅಡ್ವಾಣಿ ಜನ್ಮದಿನ. ಆ ಪ್ರಯುಕ್ತ ಈ ಸಿಹಿ ಸುದ್ದಿ ಬ್ರೇಕ್​ ಮಾಡಲಾಗಿದೆ. ಖ್ಯಾತ ನಿರ್ಮಾಪಕ ದಿಲ್​ ರಾಜು ನಿರ್ಮಾಣ ಮಾಡಲಿರುವ ದೊಡ್ಡ ಪ್ರಾಜೆಕ್ಟ್​ನಲ್ಲಿ ರಾಮ್​ ಚರಣ್​ ನಟಿಸುತ್ತಿದ್ದು, ಅದಕ್ಕೆ ಶಂಕರ್​ ನಿರ್ದೇಶನ ಮಾಡಲಿದ್ದಾರೆ. ಈ ಸಿನಿಮಾದಲ್ಲಿ ರಾಮ್​ ಚರಣ್​ಗೆ ಜೋಡಿಯಾಗಿ ನಟಿಸುವ ಅವಕಾಶ ಕಿಯಾರಾಗೆ ಸಿಕ್ಕಿದೆ. ಈ ಹಿಂದೆ ‘ವಿನಯ ವಿಧೇಯ ರಾಮ’ ಸಿನಿಮಾದಲ್ಲಿ ರಾಮ್​ ಚರಣ್​ ಮತ್ತು ಕಿಯಾರಾ ಜೊತೆಯಾಗಿ ನಟಿಸಿದ್ದರು. ಈಗ ಮತ್ತೊಮ್ಮೆ ಈ ಜೋಡಿ ಒಂದಾಗುತ್ತಿದೆ.

ರಾಮ್​ ಚರಣ್​ ನಟಿಸುತ್ತಿರುವ 15ನೇ ಸಿನಿಮಾ ಇದಾಗಿದ್ದು, ಶೀಘ್ರದಲ್ಲೇ ಶೂಟಿಂಗ್​ ಆರಂಭ ಆಗಲಿದೆ. ಚಿತ್ರದ ಶೀರ್ಷಿಕೆ ಏನು ಹಾಗೂ ಬೇರೆ ಯಾವೆಲ್ಲ ಕಲಾವಿದರು ಸಿನಿಮಾದಲ್ಲಿ ನಟಿಸಲಿದ್ದಾರೆ ಎಂಬಿತ್ಯಾದಿ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ. ತೆಲುಗು, ತಮಿಳು ಮತ್ತು ಹಿಂದಿಯಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಆ ಮೂಲಕ ಕಿಯಾರಾಗೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಖ್ಯಾತಿ ಹೆಚ್ಚಲಿದೆ.

ಸದ್ಯ ರಾಮ್​ ಚರಣ್​ ಅವರು ಆರ್​ಆರ್​ಆರ್​ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ರಾಜಮೌಳಿ ನಿರ್ದೇಶಿಸುತ್ತಿರುವ ಆ ಚಿತ್ರದ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇದೆ. ಆ ಸಿನಿಮಾ ಬಳಿಕ ರಾಮ್​ ಚರಣ್​-ಶಂಕರ್​ ಕಾಂಬಿನೇಷನ್​ನ ಚಿತ್ರ ಸೆಟ್ಟೇರುವುದರಿಂದ ಇನ್ನೂ ದೊಟ್ಟದಲ್ಲಿ ನಿರ್ಮಾಣವಾಗಲೇಬೇಕಾದ ಅನಿವಾರ್ಯತೆ ಇದೆ. ಮೊದಲಿನಿಂದಲೂ ಬಿಗ್​ ಬಜೆಟ್​ನ ಸಿನಿಮಾಗಳನ್ನು ಮಾಡಿಕೊಂಡು ಬಂದಿರುವ ಶಂಕರ್​ ಈ ಬಾರಿ ಇನ್ನೊಂದು ದೈತ್ಯ ಸಿನಿಮಾ ಕಟ್ಟಿಕೊಡಲು ಸಜ್ಜಾಗುತ್ತಿದ್ದಾರೆ.

ಇದನ್ನೂ ಓದಿ:

ರಾಮ್​ ಚರಣ್​ Vs ಜ್ಯೂ. ಎನ್​ಟಿಆರ್​; ಫ್ಯಾನ್ಸ್ ತಕರಾರು ಬಗೆಹರಿಸಲು ರಾಜಮೌಳಿ ಮಾಡಿದ ಪ್ಲ್ಯಾನ್​ ಏನು?

ಮತ್ತೆ ಮತ್ತೆ ಆಲಿಯಾ ಭಟ್​ ಬೇಕು ಎಂದು ಬಯಸಿದ ರಾಮ್​ ಚರಣ್​; ಏನಿದು ವಿಷ್ಯ?

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ