Bigg Boss Kannada Finale: ಬಿಗ್ ಬಾಸ್ ಫಿನಾಲೆ ಎಪಿಸೋಡ್​ನಲ್ಲಾದ ತಪ್ಪಿನ ಕಾರಣ ಬಿಚ್ಚಿಟ್ಟ ಕಿಚ್ಚ ಸುದೀಪ್

BBK 8 Finale Episode | ನಿನ್ನೆ ಬಿಗ್ ಬಾಸ್ ಫಿನಾಲೆ​ ಎಪಿಸೋಡ್​ನಲ್ಲಿ ವಿಪರೀತ ಜಾಹೀರಾತುಗಳು ಇದ್ದುದಕ್ಕೆ ಹಾಗೂ ಎಪಿಸೋಡ್ ಮುಗಿಯುವುದು ತಡರಾತ್ರಿಯಾಗಿದ್ದಕ್ಕೆ ಕಾರಣವೇನೆಂಬ ಬಗ್ಗೆ ಸ್ವತಃ ಕಿಚ್ಚ ಸುದೀಪ್ ಅವರೇ ಇಂದಿನ ಎಪಿಸೋಡ್​ನಲ್ಲಿ ತಿಳಿಸಿದ್ದಾರೆ.

Bigg Boss Kannada Finale: ಬಿಗ್ ಬಾಸ್ ಫಿನಾಲೆ ಎಪಿಸೋಡ್​ನಲ್ಲಾದ ತಪ್ಪಿನ ಕಾರಣ ಬಿಚ್ಚಿಟ್ಟ ಕಿಚ್ಚ ಸುದೀಪ್
ಕಿಚ್ಚ ಸುದೀಪ್
Follow us
| Updated By: ಸುಷ್ಮಾ ಚಕ್ರೆ

Updated on:Aug 08, 2021 | 8:20 PM

ಬಿಗ್ ಬಾಸ್​ ಕನ್ನಡ ಸೀಸನ್ 8 ಅಂತಿಮ ಹಂತಕ್ಕೆ ಬಂದು ನಿಂತಿದೆ. ಕೊರೊನಾದಿಂದಾಗಿ ಬಿಗ್ ಬಾಸ್​ ರಿಯಾಲಿಟಿ ಶೋ (Bigg Boss Kannada 8 Reality Show) ಇತಿಹಾಸದಲ್ಲೇ ಮೊದಲ ಬಾರಿಗೆ ಅರ್ಧದಲ್ಲೇ ಬಿಗ್ ಬಾಸ್ ಕನ್ನಡ ಸೀಸನ್ 8 ಅನ್ನು ನಿಲ್ಲಿಸಲಾಗಿತ್ತು. ಅದೇ ರೀತಿ ಇದೇ ಮೊದಲ ಬಾರಿಗೆ ಮತ್ತೆ ಬಿಗ್ ಬಾಸ್​ ಎಪಿಸೋಡ್​ಗಳನ್ನು ಮುಂದುವರೆಸಲಾಗಿತ್ತು. ಪ್ರತಿ ಬಾರಿ 100 ಎಪಿಸೋಡ್​ಗೆ ಮುಗಿಯುವ ಬಿಗ್ ಬಾಸ್ ಇದೇ ಮೊದಲ ಬಾರಿಗೆ 120 ಎಪಿಸೋಡ್​ಗಳನ್ನು ಕಂಡಿದೆ. ಇಂದು ಬಿಗ್ ಬಾಸ್ ಕನ್ನಡದ 8ನೇ ಸೀಸನ್​ನ ವಿನ್ನರ್ (BBK 8) ಯಾರಾಗಲಿದ್ದಾರೆ ಎಂಬುದು ಬಹಿರಂಗವಾಗಲಿದೆ.

ನಿನ್ನೆ ಅಂದರೆ ಶನಿವಾರದ ಬಿಗ್ ಬಾಸ್ ಫಿನಾಲೆ ಎಪಿಸೋಡ್ ನೋಡಿದ ಬಹುತೇಕ ಜನರು ಅದರ ಮಧ್ಯ ಬರುತ್ತಿದ್ದ ಜಾಹೀರಾತನ್ನು ನೋಡಿ ಅಸಮಾಧಾನಗೊಂಡಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬೇಸರವನ್ನೂ ಹೊರಹಾಕಿದ್ದರು. ನೀವೇನು ಬಿಗ್ ಬಾಸ್ ಫಿನಾಲೆ ಎಪಿಸೋಡ್ ಹಾಕುತ್ತಿದ್ದೀರೋ? ಅಥವಾ ಹೊಸ ಸೀರಿಯಲ್ ಪ್ರಮೋಷನ್ ಮಾಡುತ್ತಿದ್ದೀರೋ? ಎಂಬ ಆಕ್ರೋಶವೂ ವ್ಯಕ್ತವಾಗಿತ್ತು. ಆದರೆ, ನಿನ್ನೆ ಬಿಗ್ ಬಾಸ್​ ಎಪಿಸೋಡ್​ನಲ್ಲಿ ವಿಪರೀತ ಜಾಹೀರಾತುಗಳು ಇದ್ದುದಕ್ಕೆ ಹಾಗೂ ಎಪಿಸೋಡ್ ಮುಗಿಯುವುದು ತಡರಾತ್ರಿಯಾಗಿದ್ದಕ್ಕೆ ಕಾರಣವೇನೆಂಬ ಬಗ್ಗೆ ಸ್ವತಃ ಕಿಚ್ಚ ಸುದೀಪ್ ಅವರೇ ಇಂದಿನ ಎಪಿಸೋಡ್​ನಲ್ಲಿ ತಿಳಿಸಿದ್ದಾರೆ.

ಸಾಮಾನ್ಯವಾಗಿ ಬಿಗ್​ ಬಾಸ್​ ಫಿನಾಲೆ ಎಪಿಸೋಡ್​ಗಳನ್ನು ಪ್ರಸಾರವಾಗುವುದಕ್ಕಿಂತ ಮೂರ್ನಾಲ್ಕು ಗಂಟೆ ಮೊದಲೇ ಶೂಟಿಂಗ್ ಮಾಡಲಾಗುತ್ತದೆ. ಬಳಿಕ ಅದನ್ನು ಎಡಿಟ್ ಮಾಡಿ ಪ್ರಸಾರ ಮಾಡಲಾಗುತ್ತದೆ. ಶನಿವಾರ ಬಿಗ್ ಬಾಸ್ ಶೂಟಿಂಗ್ ಸೆಟ್​ನಲ್ಲಿ ಇಂಟರ್ನೆಟ್​ ಸಮಸ್ಯೆ ಇದ್ದುದರಿಂದ ಶೂಟ್ ಮಾಡಲಾದ ಎಪಿಸೋಡ್​ಗಳನ್ನು ಟೆಕ್ನಿಕಲ್ ಟೀಂನವರು ನೊಯ್ಡಾಗೆ ಕಳುಹಿಸಬೇಕು. ಅಲ್ಲಿಂದ ಬಂದಮೇಲೂ ಕೆಲವು ಕೆಲಸಗಳಿರುತ್ತವೆ. ಇದರಿಂದ ನಿನ್ನೆಯ ಎಪಿಸೋಡ್​ನಲ್ಲಿ ಸ್ವಲ್ಪ ಸಮಸ್ಯೆಯಾಯಿತು. ಇದು ನಾವು ಯಾರೂ ಊಹಿಸದ ಸಮಸ್ಯೆಯಾಗಿತ್ತು. ಇಂಟರ್ನೆಟ್​ ಸಮಸ್ಯೆಯಿಂದ ಎಪಿಸೋಡ್​ಗಳನ್ನು ಕಳುಹಿಸುವುದು ತಡವಾಗಿದ್ದರಿಂದ ಅನಿವಾರ್ಯವಾಗಿ ಜಾಹೀರಾತುಗಳನ್ನು ಹಾಕಿಕೊಂಡು ಮ್ಯಾನೇಜ್ ಮಾಡಬೇಕಾಯಿತು. ಅದಕ್ಕೆ ನೀವು ಯಾರೂ ಬೇಸರಿಸಿಕೊಳ್ಳದೆ ನಮ್ಮ ಶೋ ನೋಡಿ, ಸಹಕಾರ ಕೊಟ್ಟಿದ್ದಕ್ಕೆ ಧನ್ಯವಾದಗಳು ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.

ಶನಿವಾರದ ಎಪಿಸೋಡ್​ನಲ್ಲಿ ಪ್ರಶಾಂತ್ ಸಂಬರಗಿ ಹಾಗೂ ವೈಷ್ಣವಿ ಗೌಡ ಬಿಗ್ ಬಾಸ್​ನಿಂದ ಎಲಿಮಿನೇಟ್ ಆಗಿದ್ದಾರೆ. ಸದ್ಯಕ್ಕೆ ಮಂಜು ಪಾವಗಡ, ಅರವಿಂದ್ ಕೆಪಿ, ದಿವ್ಯಾ ಉರುಡುಗ ಟಾಪ್ 3 ಸ್ಥಾನದಲ್ಲಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಇನ್ನೊಬ್ಬರು ಎಲಿಮಿನೇಟ್ ಆಗಲಿದ್ದಾರೆ.

ಇದನ್ನೂ ಓದಿ: Bigg Boss Kannada 8 Finale: ಬಿಗ್​ ಬಾಸ್​ ಸೀಸನ್​ 8 ವಿನ್ನರ್​​ ಇವರೇನಾ? ಇಲ್ಲಿದೆ ಲೆಕ್ಕಾಚಾರ

Bigg Boss Winner: ‘ನಾನು ಬಿಗ್​ ಬಾಸ್​ ವಿನ್ನರ್​’; ಎಲಿಮಿನೇಟ್​ ಆದ್ಮೇಲೂ ಸುದೀಪ್​ ಎದುರು ಪ್ರಶಾಂತ್​ ಸಂಬರಗಿ ಹೀಗೆ ಹೇಳಿದ್ದೇಕೆ?

(Kiccha Sudeep Revealed the Reason behind Saturday Bigg Boss Kannada Season 8 Finale Episode Mistake)

Published On - 7:26 pm, Sun, 8 August 21

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ