AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ವಾರ ಅರವಿಂದ್ ಜತೆ ಮಾತಾಡ್ಬಾರದು; ದಿವ್ಯಾ ಉರುಡುಗಗೆ ಸುದೀಪ್​ ಹೊಸ ಕಂಡೀಷನ್​!

ವೀಕೆಂಡ್​ನಲ್ಲಿ ಸುದೀಪ್​ ಅವರು ಅರವಿಂದ್​ಗೆ, ಬಾತ್​ರೂಂನಲ್ಲಿ ಅತಿ ಹೆಚ್ಚು ಸಮಯ ಕಳೆಯುವವರು ಯಾರು? ಎಂದು ಕೇಳಿದ್ದರು. ಇದಕ್ಕೆ ಉತ್ತರಿಸಿದ್ದ ಅರವಿಂದ್​, ದಿವ್ಯಾ ಅವರ ಹೆಸರನ್ನು ತೆಗೆದುಕೊಂಡಿದ್ದರು.

ಒಂದು ವಾರ ಅರವಿಂದ್ ಜತೆ ಮಾತಾಡ್ಬಾರದು; ದಿವ್ಯಾ ಉರುಡುಗಗೆ ಸುದೀಪ್​ ಹೊಸ ಕಂಡೀಷನ್​!
ದಿವ್ಯಾ ಉರುಡುಗ-ಅರವಿಂದ್ ಕೆಪಿ
ರಾಜೇಶ್ ದುಗ್ಗುಮನೆ
|

Updated on:Mar 28, 2021 | 9:36 PM

Share

ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆ.ಪಿ. ನಡುವೆ ಪ್ರೀತಿ ಮೊಳೆತಿದೆ ಎನ್ನುವ ವಿಚಾರ ಭಾರೀ ಚರ್ಚೆ ಆಗುತ್ತಿದೆ. ವೀಕ್ಷಕರ ವಲಯದಲ್ಲೂ ಈ ವಿಚಾರ ಈಗ ಹಾಟ್​ ಟಾಪಿಕ್​. ಹೀಗಿರುವಾಗಲೇ ಒಂದು ವಾರ ಅರವಿಂದ್ ಜತೆ ಮಾತಾಡಬಾರದು ಎನ್ನುವ ಕಂಡೀಷನ್​ ಅನ್ನು ದಿವ್ಯಾಗೆ ಸುದೀಪ್​ ಹಾಕಿದ್ದಾರೆ! ಅರವಿಂದ್​ ಮತ್ತು ದಿವ್ಯಾ ಉರುಡುಗ ನಡುವೆ ಪ್ರೀತಿ ಚಿಗುರಿದೆ ಎಂಬುದು ಬಹುತೇಕರ ಅಭಿಪ್ರಾಯ. ಅವರಿಬ್ಬರ ಮಧ್ಯೆ ಇರುವ ಆಪ್ತತೆ ನೋಡಿದರೆ ಎಂಥವರಿಗೂ ಈ ಅನುಮಾನ ಬಂದೇ ಬರುತ್ತದೆ. ಅಷ್ಟೇ ಅಲ್ಲದೇ, ಮನೆ ಮಂದಿ ಎಲ್ಲರೂ ಈ ವಿಚಾರವನ್ನು ಪದೇ ಪದೇ ಪ್ರಸ್ತಾಪ ಮಾಡುತ್ತಲೇ ಇರುತ್ತಾರೆ. ಆಪ್ತತೆ ಬೆಳೆದಿರುವ ವಿಚಾರವನ್ನು ಇಬ್ಬರೂ ಒಪ್ಪಿಕೊಂಡಿದ್ದರು.

ವೀಕೆಂಡ್​ನಲ್ಲಿ ಸುದೀಪ್​ ಅವರು ಅರವಿಂದ್​ಗೆ, ಬಾತ್​ರೂಂನಲ್ಲಿ ಅತಿ ಹೆಚ್ಚು ಸಮಯ ಕಳೆಯುವವರು ಯಾರು? ಎಂದು ಕೇಳಿದ್ದರು. ಇದಕ್ಕೆ ಉತ್ತರಿಸಿದ್ದ ಅರವಿಂದ್​, ದಿವ್ಯಾ ಉರುಡುಗ ಮತ್ತು ವೈಷ್ಣವಿ ನಡುವೆ ಈ ವಿಚಾರಕ್ಕೆ ಕಾಂಪಿಟೇಷನ್​ ಇದೆ. ಇಬ್ಬರೂ ಬಾತ್​ರೂಂಗೆ ಹೋದರೆ ಬೇಗ ಬರುವುದೇ ಇಲ್ಲ ಎಂದಿದ್ದರು. ಇಬ್ಬರಲ್ಲಿ ಅತಿ ಹೆಚ್ಚು ಸಮಯ ಕಳೆಯುವವರು ಯಾರು ಎಂದು ಕೇಳಿದರು ಸುದೀಪ್​. ಆಗ ದಿವ್ಯಾ ಹೆಸರನ್ನು ಎತ್ತಿಕೊಂಡರು ಅರವಿಂದ್​.

ಇದಕ್ಕೆ ದಿವ್ಯಾ ಹಾಗೆಲ್ಲ ಇಲ್ಲವೇ ಇಲ್ಲ ಎಂದರು. ಅದಕ್ಕೆ ಉತ್ತರಿಸಿದ ಸುದೀಪ್​, ಹೌದು, ಇದೆಲ್ಲ ಬರೀ ಸುಳ್ಳು. ನಾಳೆಯಿಂದ ನೀವು ಅರವಿಂದ ಪಕ್ಕ ಕೂರಬೇಡಿ. ಜಾಗ ಬದಲಿಸಿ. ಇಷ್ಟೆಲ್ಲ ಸುಳ್ಳು ಹೇಳುತ್ತಾರೆ ಎಂದು ಪಕ್ಕ ಕೂರಲೇಬೇಡಿ. ಅವರ ಜತೆ ಮಾತಾಡಬೇಡಿ. ಅರವಿಂದ್​ ಜತೆ ನೀವು ಒಂದು ವಾರಗಳ ಕಾಲ ಒಂದೇ ಒಂದು ಶಬ್ದ ಕೂಡ ಮಾತನಾಡಬಾರದು ಎಂದು ಕಂಡೀಷನ್​ ಹಾಕಿದರು. ಇದನ್ನು ಕೇಳಿ ಈ ಜೋಡಿ ಕಂಗಾಲಾಗಿತ್ತು. ನಂತರ ಸುದೀಪ್​ ಹಾಗೆ ಮಾಡಲ್ಲ ಎಂದು ಹೇಳುವ ಮೂಲಕ ಇಬ್ಬರನ್ನೂ ನಿರಾಳ ಮಾಡಿದರು.

ಇದನ್ನೂ ಓದಿ: ತಪ್ಪು ಮಾಡಿದರೂ ಪ್ರಶಾಂತ್​ ಸಂಬರಗಿ ಬೆನ್ನು ತಟ್ಟಿದ ಸುದೀಪ್​! ಕಿಚ್ಚ ಮಾಡಿದ್ದು ಸರೀನಾ?

Published On - 9:00 pm, Sun, 28 March 21

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್