AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ವಾರ ಅರವಿಂದ್ ಜತೆ ಮಾತಾಡ್ಬಾರದು; ದಿವ್ಯಾ ಉರುಡುಗಗೆ ಸುದೀಪ್​ ಹೊಸ ಕಂಡೀಷನ್​!

ವೀಕೆಂಡ್​ನಲ್ಲಿ ಸುದೀಪ್​ ಅವರು ಅರವಿಂದ್​ಗೆ, ಬಾತ್​ರೂಂನಲ್ಲಿ ಅತಿ ಹೆಚ್ಚು ಸಮಯ ಕಳೆಯುವವರು ಯಾರು? ಎಂದು ಕೇಳಿದ್ದರು. ಇದಕ್ಕೆ ಉತ್ತರಿಸಿದ್ದ ಅರವಿಂದ್​, ದಿವ್ಯಾ ಅವರ ಹೆಸರನ್ನು ತೆಗೆದುಕೊಂಡಿದ್ದರು.

ಒಂದು ವಾರ ಅರವಿಂದ್ ಜತೆ ಮಾತಾಡ್ಬಾರದು; ದಿವ್ಯಾ ಉರುಡುಗಗೆ ಸುದೀಪ್​ ಹೊಸ ಕಂಡೀಷನ್​!
ದಿವ್ಯಾ ಉರುಡುಗ-ಅರವಿಂದ್ ಕೆಪಿ
ರಾಜೇಶ್ ದುಗ್ಗುಮನೆ
|

Updated on:Mar 28, 2021 | 9:36 PM

Share

ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆ.ಪಿ. ನಡುವೆ ಪ್ರೀತಿ ಮೊಳೆತಿದೆ ಎನ್ನುವ ವಿಚಾರ ಭಾರೀ ಚರ್ಚೆ ಆಗುತ್ತಿದೆ. ವೀಕ್ಷಕರ ವಲಯದಲ್ಲೂ ಈ ವಿಚಾರ ಈಗ ಹಾಟ್​ ಟಾಪಿಕ್​. ಹೀಗಿರುವಾಗಲೇ ಒಂದು ವಾರ ಅರವಿಂದ್ ಜತೆ ಮಾತಾಡಬಾರದು ಎನ್ನುವ ಕಂಡೀಷನ್​ ಅನ್ನು ದಿವ್ಯಾಗೆ ಸುದೀಪ್​ ಹಾಕಿದ್ದಾರೆ! ಅರವಿಂದ್​ ಮತ್ತು ದಿವ್ಯಾ ಉರುಡುಗ ನಡುವೆ ಪ್ರೀತಿ ಚಿಗುರಿದೆ ಎಂಬುದು ಬಹುತೇಕರ ಅಭಿಪ್ರಾಯ. ಅವರಿಬ್ಬರ ಮಧ್ಯೆ ಇರುವ ಆಪ್ತತೆ ನೋಡಿದರೆ ಎಂಥವರಿಗೂ ಈ ಅನುಮಾನ ಬಂದೇ ಬರುತ್ತದೆ. ಅಷ್ಟೇ ಅಲ್ಲದೇ, ಮನೆ ಮಂದಿ ಎಲ್ಲರೂ ಈ ವಿಚಾರವನ್ನು ಪದೇ ಪದೇ ಪ್ರಸ್ತಾಪ ಮಾಡುತ್ತಲೇ ಇರುತ್ತಾರೆ. ಆಪ್ತತೆ ಬೆಳೆದಿರುವ ವಿಚಾರವನ್ನು ಇಬ್ಬರೂ ಒಪ್ಪಿಕೊಂಡಿದ್ದರು.

ವೀಕೆಂಡ್​ನಲ್ಲಿ ಸುದೀಪ್​ ಅವರು ಅರವಿಂದ್​ಗೆ, ಬಾತ್​ರೂಂನಲ್ಲಿ ಅತಿ ಹೆಚ್ಚು ಸಮಯ ಕಳೆಯುವವರು ಯಾರು? ಎಂದು ಕೇಳಿದ್ದರು. ಇದಕ್ಕೆ ಉತ್ತರಿಸಿದ್ದ ಅರವಿಂದ್​, ದಿವ್ಯಾ ಉರುಡುಗ ಮತ್ತು ವೈಷ್ಣವಿ ನಡುವೆ ಈ ವಿಚಾರಕ್ಕೆ ಕಾಂಪಿಟೇಷನ್​ ಇದೆ. ಇಬ್ಬರೂ ಬಾತ್​ರೂಂಗೆ ಹೋದರೆ ಬೇಗ ಬರುವುದೇ ಇಲ್ಲ ಎಂದಿದ್ದರು. ಇಬ್ಬರಲ್ಲಿ ಅತಿ ಹೆಚ್ಚು ಸಮಯ ಕಳೆಯುವವರು ಯಾರು ಎಂದು ಕೇಳಿದರು ಸುದೀಪ್​. ಆಗ ದಿವ್ಯಾ ಹೆಸರನ್ನು ಎತ್ತಿಕೊಂಡರು ಅರವಿಂದ್​.

ಇದಕ್ಕೆ ದಿವ್ಯಾ ಹಾಗೆಲ್ಲ ಇಲ್ಲವೇ ಇಲ್ಲ ಎಂದರು. ಅದಕ್ಕೆ ಉತ್ತರಿಸಿದ ಸುದೀಪ್​, ಹೌದು, ಇದೆಲ್ಲ ಬರೀ ಸುಳ್ಳು. ನಾಳೆಯಿಂದ ನೀವು ಅರವಿಂದ ಪಕ್ಕ ಕೂರಬೇಡಿ. ಜಾಗ ಬದಲಿಸಿ. ಇಷ್ಟೆಲ್ಲ ಸುಳ್ಳು ಹೇಳುತ್ತಾರೆ ಎಂದು ಪಕ್ಕ ಕೂರಲೇಬೇಡಿ. ಅವರ ಜತೆ ಮಾತಾಡಬೇಡಿ. ಅರವಿಂದ್​ ಜತೆ ನೀವು ಒಂದು ವಾರಗಳ ಕಾಲ ಒಂದೇ ಒಂದು ಶಬ್ದ ಕೂಡ ಮಾತನಾಡಬಾರದು ಎಂದು ಕಂಡೀಷನ್​ ಹಾಕಿದರು. ಇದನ್ನು ಕೇಳಿ ಈ ಜೋಡಿ ಕಂಗಾಲಾಗಿತ್ತು. ನಂತರ ಸುದೀಪ್​ ಹಾಗೆ ಮಾಡಲ್ಲ ಎಂದು ಹೇಳುವ ಮೂಲಕ ಇಬ್ಬರನ್ನೂ ನಿರಾಳ ಮಾಡಿದರು.

ಇದನ್ನೂ ಓದಿ: ತಪ್ಪು ಮಾಡಿದರೂ ಪ್ರಶಾಂತ್​ ಸಂಬರಗಿ ಬೆನ್ನು ತಟ್ಟಿದ ಸುದೀಪ್​! ಕಿಚ್ಚ ಮಾಡಿದ್ದು ಸರೀನಾ?

Published On - 9:00 pm, Sun, 28 March 21

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ