AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ವಾರ ಅರವಿಂದ್ ಜತೆ ಮಾತಾಡ್ಬಾರದು; ದಿವ್ಯಾ ಉರುಡುಗಗೆ ಸುದೀಪ್​ ಹೊಸ ಕಂಡೀಷನ್​!

ವೀಕೆಂಡ್​ನಲ್ಲಿ ಸುದೀಪ್​ ಅವರು ಅರವಿಂದ್​ಗೆ, ಬಾತ್​ರೂಂನಲ್ಲಿ ಅತಿ ಹೆಚ್ಚು ಸಮಯ ಕಳೆಯುವವರು ಯಾರು? ಎಂದು ಕೇಳಿದ್ದರು. ಇದಕ್ಕೆ ಉತ್ತರಿಸಿದ್ದ ಅರವಿಂದ್​, ದಿವ್ಯಾ ಅವರ ಹೆಸರನ್ನು ತೆಗೆದುಕೊಂಡಿದ್ದರು.

ಒಂದು ವಾರ ಅರವಿಂದ್ ಜತೆ ಮಾತಾಡ್ಬಾರದು; ದಿವ್ಯಾ ಉರುಡುಗಗೆ ಸುದೀಪ್​ ಹೊಸ ಕಂಡೀಷನ್​!
ದಿವ್ಯಾ ಉರುಡುಗ-ಅರವಿಂದ್ ಕೆಪಿ
ರಾಜೇಶ್ ದುಗ್ಗುಮನೆ
|

Updated on:Mar 28, 2021 | 9:36 PM

Share

ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆ.ಪಿ. ನಡುವೆ ಪ್ರೀತಿ ಮೊಳೆತಿದೆ ಎನ್ನುವ ವಿಚಾರ ಭಾರೀ ಚರ್ಚೆ ಆಗುತ್ತಿದೆ. ವೀಕ್ಷಕರ ವಲಯದಲ್ಲೂ ಈ ವಿಚಾರ ಈಗ ಹಾಟ್​ ಟಾಪಿಕ್​. ಹೀಗಿರುವಾಗಲೇ ಒಂದು ವಾರ ಅರವಿಂದ್ ಜತೆ ಮಾತಾಡಬಾರದು ಎನ್ನುವ ಕಂಡೀಷನ್​ ಅನ್ನು ದಿವ್ಯಾಗೆ ಸುದೀಪ್​ ಹಾಕಿದ್ದಾರೆ! ಅರವಿಂದ್​ ಮತ್ತು ದಿವ್ಯಾ ಉರುಡುಗ ನಡುವೆ ಪ್ರೀತಿ ಚಿಗುರಿದೆ ಎಂಬುದು ಬಹುತೇಕರ ಅಭಿಪ್ರಾಯ. ಅವರಿಬ್ಬರ ಮಧ್ಯೆ ಇರುವ ಆಪ್ತತೆ ನೋಡಿದರೆ ಎಂಥವರಿಗೂ ಈ ಅನುಮಾನ ಬಂದೇ ಬರುತ್ತದೆ. ಅಷ್ಟೇ ಅಲ್ಲದೇ, ಮನೆ ಮಂದಿ ಎಲ್ಲರೂ ಈ ವಿಚಾರವನ್ನು ಪದೇ ಪದೇ ಪ್ರಸ್ತಾಪ ಮಾಡುತ್ತಲೇ ಇರುತ್ತಾರೆ. ಆಪ್ತತೆ ಬೆಳೆದಿರುವ ವಿಚಾರವನ್ನು ಇಬ್ಬರೂ ಒಪ್ಪಿಕೊಂಡಿದ್ದರು.

ವೀಕೆಂಡ್​ನಲ್ಲಿ ಸುದೀಪ್​ ಅವರು ಅರವಿಂದ್​ಗೆ, ಬಾತ್​ರೂಂನಲ್ಲಿ ಅತಿ ಹೆಚ್ಚು ಸಮಯ ಕಳೆಯುವವರು ಯಾರು? ಎಂದು ಕೇಳಿದ್ದರು. ಇದಕ್ಕೆ ಉತ್ತರಿಸಿದ್ದ ಅರವಿಂದ್​, ದಿವ್ಯಾ ಉರುಡುಗ ಮತ್ತು ವೈಷ್ಣವಿ ನಡುವೆ ಈ ವಿಚಾರಕ್ಕೆ ಕಾಂಪಿಟೇಷನ್​ ಇದೆ. ಇಬ್ಬರೂ ಬಾತ್​ರೂಂಗೆ ಹೋದರೆ ಬೇಗ ಬರುವುದೇ ಇಲ್ಲ ಎಂದಿದ್ದರು. ಇಬ್ಬರಲ್ಲಿ ಅತಿ ಹೆಚ್ಚು ಸಮಯ ಕಳೆಯುವವರು ಯಾರು ಎಂದು ಕೇಳಿದರು ಸುದೀಪ್​. ಆಗ ದಿವ್ಯಾ ಹೆಸರನ್ನು ಎತ್ತಿಕೊಂಡರು ಅರವಿಂದ್​.

ಇದಕ್ಕೆ ದಿವ್ಯಾ ಹಾಗೆಲ್ಲ ಇಲ್ಲವೇ ಇಲ್ಲ ಎಂದರು. ಅದಕ್ಕೆ ಉತ್ತರಿಸಿದ ಸುದೀಪ್​, ಹೌದು, ಇದೆಲ್ಲ ಬರೀ ಸುಳ್ಳು. ನಾಳೆಯಿಂದ ನೀವು ಅರವಿಂದ ಪಕ್ಕ ಕೂರಬೇಡಿ. ಜಾಗ ಬದಲಿಸಿ. ಇಷ್ಟೆಲ್ಲ ಸುಳ್ಳು ಹೇಳುತ್ತಾರೆ ಎಂದು ಪಕ್ಕ ಕೂರಲೇಬೇಡಿ. ಅವರ ಜತೆ ಮಾತಾಡಬೇಡಿ. ಅರವಿಂದ್​ ಜತೆ ನೀವು ಒಂದು ವಾರಗಳ ಕಾಲ ಒಂದೇ ಒಂದು ಶಬ್ದ ಕೂಡ ಮಾತನಾಡಬಾರದು ಎಂದು ಕಂಡೀಷನ್​ ಹಾಕಿದರು. ಇದನ್ನು ಕೇಳಿ ಈ ಜೋಡಿ ಕಂಗಾಲಾಗಿತ್ತು. ನಂತರ ಸುದೀಪ್​ ಹಾಗೆ ಮಾಡಲ್ಲ ಎಂದು ಹೇಳುವ ಮೂಲಕ ಇಬ್ಬರನ್ನೂ ನಿರಾಳ ಮಾಡಿದರು.

ಇದನ್ನೂ ಓದಿ: ತಪ್ಪು ಮಾಡಿದರೂ ಪ್ರಶಾಂತ್​ ಸಂಬರಗಿ ಬೆನ್ನು ತಟ್ಟಿದ ಸುದೀಪ್​! ಕಿಚ್ಚ ಮಾಡಿದ್ದು ಸರೀನಾ?

Published On - 9:00 pm, Sun, 28 March 21

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!