AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪ್ಪು ಮಾಡಿದರೂ ಪ್ರಶಾಂತ್​ ಸಂಬರಗಿ ಬೆನ್ನು ತಟ್ಟಿದ ಸುದೀಪ್​! ಕಿಚ್ಚ ಮಾಡಿದ್ದು ಸರೀನಾ?

ಮಂಜು ಮೂರು ದಿನ ಮೊದಲೇ ನನಗೆ ಕಳಪೆ ಎನ್ನುವ ಪಟ್ಟ ನೀಡುವುದಾಗಿ ಹೇಳಿಕೊಂಡಿದ್ದರು. ಇದಕ್ಕೆ ಅವರು ಮನೆಯಲ್ಲಿ ಎಲ್ಲರನ್ನೂ ಎತ್ತಿಕಟ್ಟಿದ್ದರು ಎನ್ನುವ ಆರೊಪವನ್ನು ಪ್ರಶಾಂತ್​ ಮಾಡಿದರು.

ತಪ್ಪು ಮಾಡಿದರೂ ಪ್ರಶಾಂತ್​ ಸಂಬರಗಿ ಬೆನ್ನು ತಟ್ಟಿದ ಸುದೀಪ್​! ಕಿಚ್ಚ ಮಾಡಿದ್ದು ಸರೀನಾ?
ಪ್ರಶಾಂತ್​-ಕಿಚ್ಚ ಸುದೀಪ್​
ರಾಜೇಶ್ ದುಗ್ಗುಮನೆ
|

Updated on: Mar 28, 2021 | 5:20 PM

Share

ಪ್ರಶಾಂತ್​ ಸಂಬರಗಿ ಬಿಗ್​ ಬಾಸ್​ ಮನೆಯಲ್ಲಿ ಅತಿ ಹೆಚ್ಚು ಚರ್ಚೆಗೆ ಒಳಗಾದ ಸ್ಪರ್ಧಿ. ಇಲ್ಲಿಗೆ ಬರುವ ಮೊದಲು ಸಾಕಷ್ಟು ವಿವಾದಗಳನ್ನು ಮಾಡಿಕೊಂಡಿದ್ದ ಅವರು, ಬಿಗ್​ ಬಾಸ್​ ಮನೆಯಲ್ಲೂ ತಮ್ಮ ನೇರ ಮಾತಿನಿಂದ ಚರ್ಚೆಯಲ್ಲಿದ್ದಾರೆ. ಈ ಮಧ್ಯೆ, ಬಿಗ್​ ಬಾಸ್​ ಮನೆಯಲ್ಲಿ ಸಾಕಷ್ಟು ವಿವಾದಗಳನ್ನು ಅವರು ಮೈಮೇಲೆ ಎಳೆದುಕೊಂಡಿದ್ದಾರೆ. ನಾಲ್ಕನೇ ವಾರ ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಾಲು ಸಾಲು ತಪ್ಪು ಮಾಡಿದ್ದರೂ ಅವರನ್ನು ಕಿಚ್ಚ ಸುದೀಪ್​ ಹೊಗಳಿದ್ದಾರೆ. ಅಷ್ಟಕ್ಕೂ ಪ್ರಶಾಂತ್ ಅವರನ್ನು ಕಿಚ್ಚ ಹೊಗಳಲು ಕಾರಣ ಏನು ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ. ನಾಲ್ಕನೇ ವಾರ ಬಿಗ್​ ಬಾಸ್ ಮನೆಯಲ್ಲಿ ಪ್ರಶಾಂತ್​ ಸಾಕಷ್ಟು ಜನರ ಬಳಿ ಜಗಳ ಮಾಡಿಕೊಂಡಿದ್ದಾರೆ. ಅದರಲ್ಲೂ ಮಂಜು ಜತೆ ಪ್ರಶಾಂತ್​ ತುಂಬಾನೇ ಮುನಿಸಿಕೊಂಡಿದ್ದರು. ಈ ವಾರ ಅತಿ ಕಳಪೆ ಎನ್ನುವ ಪಟ್ಟವನ್ನು ಪ್ರಶಾಂತ್​ಗೆ ನೀಡಲಾಯಿತು. ನನಗೆ ಕಳಪೆ ಎನ್ನುವ ಪಟ್ಟ ಬರುವುದಕ್ಕೆ ಮಂಜು ಪಾವಗಡ ಪಾತ್ರ ದೊಡ್ಡದಿದೆ ಎಂದು ಪ್ರಶಾಂತ್​ ಆರೋಪ ಮಾಡಿದ್ದರು.

ಮಂಜು ಮೂರು ದಿನ ಮೊದಲೇ ನನಗೆ ಕಳಪೆ ಎನ್ನುವ ಪಟ್ಟ ನೀಡುವುದಾಗಿ ಹೇಳಿಕೊಂಡಿದ್ದರು. ಇದಕ್ಕೆ ಅವರು ಮನೆಯಲ್ಲಿ ಎಲ್ಲರನ್ನೂ ಎತ್ತಿಕಟ್ಟಿದ್ದರು ಎನ್ನುವ ಆರೊಪವನ್ನು ಪ್ರಶಾಂತ್​ ಮಾಡಿದರು. ಆದರೆ, ಮಂಜು ಈ ಆರೋಪವನ್ನು ಅಲ್ಲಗಳೆದಿದ್ದರು. ಪ್ರಶಾಂತ್​ ಮನೆಯಲ್ಲಿ ಕಸವನ್ನು ಸರಿಯಾಗಿ ಗುಡಿಸಿಲ್ಲ. ಈ ಕಾರಣಕ್ಕೆ ನಾನು ಕಳಪೆ ಎನ್ನುವ ಪಟ್ಟ ನೀಡಿದೆ ಎಂದು ಸ್ಪಷ್ಟನೆಯನ್ನೂ ನಿಡಿದರು. ಇದು ಪ್ರಶಾಂತ್​ಗೆ ಖುಷಿ ನೀಡಿಲ್ಲ. ಹೀಗಾಗಿ ಇಬ್ಬರ ನಡುವೆ ವೈಮನಸ್ಸು ಕೂಡ ಬೆಳೆಯಿತು.

ವಾರದ ಪಂಚಾಯ್ತಿಯಲ್ಲೂ ಸುದೀಪ್​ ಈ ವಿಚಾರ ಪ್ರಸ್ತಾಪ ಮಾಡಿದರು. ಅಂದು ಮನೆಯ ಕ್ಯಾಪ್ಟನ್​ ಆಗಿದ್ದ ಅರವಿಂದ್​ ಈ ಬಗ್ಗೆ ಪ್ರತಿಕ್ರಿಯೆ ನೀಡಿದರು. ಪ್ರಶಾಂತ್​ ಅವರು ತಮಗೆ ವಹಿಸಿದ ಕೆಲಸವನ್ನು ಸರಿಯಾಗಿ ಮಾಡಿಲ್ಲ ಎಂದರು. ಆಗ, ಪ್ರಶಾಂತ್​ ಸಂಬರಗಿ ತಪ್ಪನ್ನು ಒಪ್ಪಿಕೊಂಡರು. ಅಷ್ಟೇ ಅಲ್ಲ ಮುಂದಿನ ದಿನಗಳಲ್ಲಿ ಇದನ್ನು ತಿದ್ದುಕೊಳ್ಳುತ್ತೇನೆ ಎಂದು ಭರವಸೆ ಕೂಡ ನೀಡಿದರು.

ಪ್ರಶಾಂತ್​ ತಪ್ಪು ಮಾಡಿದ್ದರೂ ಅದನ್ನು ಒಪ್ಪಿಕೊಂಡು ತಿದ್ದುಕೊಳ್ಳುತ್ತೇನೆ ಎಂದು ಹೇಳಿರುವುದು ಸುದೀಪ್​ಗೆ ಖುಷಿ ತಂದಿದೆ. ಹೀಗಾಗಿ, ತಪ್ಪು ಮಾಡಿದರೂ ನೀವು ಅದನ್ನು ಒಪ್ಪಿಕೊಂಡಿದ್ದೀರ. ಹೀಗಾಗಿ, ನಾನು ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತೇನೆ ಎಂದರು.

ಇದನ್ನೂ ಓದಿ: ಸ್ಪರ್ಧಿಗಳ ವಿರುದ್ಧ ಸಿಟ್ಟಿಗೆದ್ದ ಪ್ರಶಾಂತ್​; ಬಿಗ್​ ಬಾಸ್​ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ!

Follow Us
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ