AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಬಿಗ್​ ಬಾಸ್​ ನಿರೂಪಣೆ ಬಗ್ಗೆ ಹರಡಿದ ಅಂತೆಕಂತೆಗೆ ಸುದೀಪ್​ ಸ್ಪಷ್ಟನೆ

ಸಿನಿಮಾ ಕೆಲಸಗಳಿಗೆ ಸುದೀಪ್​ ಬೇರೆ ಬೇರೆ ಕಡೆಗಳಿಗೆ ತೆರಳುತ್ತಾರೆ. ಆದಾಗ್ಯೂ ಅವರು ವೀಕೆಂಡ್​ನಲ್ಲಿ ಬೆಂಗಳೂರಿಗೆ ವಾಪಾಸಾಗುತ್ತಿದ್ದರು. ಇದು 8 ವರ್ಷಗಳಿಂದಲೂ ನಡೆದುಕೊಂಡೇ ಬಂದಿದೆ.

Kichcha Sudeep: ಬಿಗ್​ ಬಾಸ್​ ನಿರೂಪಣೆ ಬಗ್ಗೆ ಹರಡಿದ ಅಂತೆಕಂತೆಗೆ ಸುದೀಪ್​ ಸ್ಪಷ್ಟನೆ
ಸುದೀಪ್​
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: Apr 16, 2021 | 4:00 PM

ಕನ್ನಡ ಬಿಗ್​ ಬಾಸ್​ನ 7 ಸೀಸನ್​ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಕಿಚ್ಚ ಸುದೀಪ್​ 8ನೇ ಸೀಸನ್​ಗೆ ಕಾಲಿಟ್ಟಿದ್ದಾರೆ. ಅದನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ ಕೂಡ. ಒಂದೇ ಒಂದು ವಾರ ಕೂಡ ಅವರು ಬಿಗ್​ ಬಾಸ್​ ತಪ್ಪಿಸಿಲ್ಲ. ಆದರೆ, ಇದೇ ಮೊದಲ ಬಾರಿಗೆ ಅವರು ಬಿಗ್​ ಬಾಸ್​ನಿಂದ ದೂರ ಉಳಿಯುತ್ತಿದ್ದಾರೆ. ಈ ಬಗ್ಗೆ ಸುದೀಪ್​ ಅಧಿಕೃತ ಘೋಷಣೆ ಮಾಡಿದ್ದಾರೆ. ಸಿನಿಮಾ ಕೆಲಸಗಳಿಗೆ ಸುದೀಪ್​ ಬೇರೆ ಬೇರೆ ಕಡೆಗಳಿಗೆ ತೆರಳುತ್ತಾರೆ. ಆದಾಗ್ಯೂ ಅವರು ವೀಕೆಂಡ್​ನಲ್ಲಿ ಬೆಂಗಳೂರಿಗೆ ವಾಪಾಸಾಗುತ್ತಿದ್ದರು. ಇದು 8 ವರ್ಷಗಳಿಂದಲೂ ನಡೆದುಕೊಂಡೇ ಬಂದಿದೆ. ಆದರೆ, ಈ ಬಾರಿ ಅನಾರೋಗ್ಯದ ಕಾರಣದಿಂದ ಅವರು ನಿರೂಪಣೆ ಮಾಡುತ್ತಿಲ್ಲ ಎಂಬ ಮಾತುಗಳು ಕೇಳಿಬಂದಿದ್ದವು. ಈಗ ಈ ವಿಚಾರವನ್ನು ಸುದೀಪ್​ ಅಧಿಕೃತಗೊಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸುದೀಪ್​, ನನಗೆ ಅನಾರೋಗ್ಯ ಕಾಡುತ್ತಿದೆ. ಈ ವಾರಾಂತ್ಯಕ್ಕೆ ನಾನು ಗುಣಮುಖನಾಗುವ ನಿರೀಕ್ಷೆ ಇದೆ. ಆದರೆ, ವೈದ್ಯರ ಸೂಚನೆಯಂತೆ ನಾನು ಕೆಲ ದಿನ ರೆಸ್ಟ್​ ಮಾಡುತ್ತಿದ್ದೇನೆ. ಹೀಗಾಗಿ, ಈ ವಾರದ ಬಿಗ್​ ಬಾಸ್​ ಮಿಸ್​ ಮಾಡಿಕೊಳ್ಳುತ್ತಿದ್ದೇನೆ. ಈ ವಾರದ ಎಲಿಮಿನೇಷನ್​ಗೆ ಯಾವ ಪ್ಲ್ಯಾನ್​ ಮೂಲಕ ತಂಡ ಬರುತ್ತದೆ ಎನ್ನುವ ಕುತೂಹಲ ನನ್ನದು ಎಂದಿದ್ದಾರೆ ಸುದೀಪ್​.

ಈ ವಾರ ಶೋ ಯಾರು ನಡೆಸಿಕೊಡುತ್ತಾರೆ ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಏಳನೇ ವಾರದ ವೀಕೆಂಡ್​ ಎಪಿಸೋಡ್​ಗಳನ್ನು ಸಮರ್ಥವಾಗಿ ನಡೆಸಿಕೊಡಬಲ್ಲ ನಿರೂಪಕರಿಗಾಗಿ ವಾಹಿನಿ ಹುಡುಕಾಟ ನಡೆಸುತ್ತಿದೆ ಎನ್ನಲಾಗಿದೆ.

ಬೇರೆ ಭಾಷೆಯ ಬಿಗ್​ ಬಾಸ್​ ಕಾರ್ಯಕ್ರಮಗಳಲ್ಲಿ ಇಂಥ ಪರಿಸ್ಥಿತಿ ಈ ಹಿಂದೆ ಎದುರಾಗಿತ್ತು. ಅಕ್ಕಿನೇನಿ ನಾಗಾರ್ಜುನ ಅವರ ಅನುಪಸ್ಥಿತಿಯಲ್ಲಿ ಅವರ ಸೊಸೆ ಸಮಂತಾ ಅವರು ತೆಲುಗು ಬಿಗ್​ ಬಾಸ್​ ನಿರೂಪಣೆ ಮಾಡಿದ್ದರು. ಹಿರಿಯ ನಟಿ ರಮ್ಯಾ ಕೃಷ್ಣ ಅವರ ಹೆಗಲಿಗೂ ಒಮ್ಮೆ ಈ ಜವಾಬ್ದಾರಿ ಹೋಗಿತ್ತು. ಹಿಂದಿಯಲ್ಲಿ ಸಲ್ಮಾನ್​ ಖಾನ್​ ಬದಲಿಗೆ ಬಿಗ್​ ಬಾಸ್​ 13ನೇ ಸೀಸನ್​ ವಿನ್ನರ್​ ಸಿದ್ದಾರ್ಥ್​ ಶುಕ್ಲಾ ನಡೆಸಿಕೊಟ್ಟಿದ್ದರು. ಕನ್ನಡದಲ್ಲಿ ಯಾರಿಗೆ ಈ ಚಾನ್ಸ್​ ಸಿಗಲಿದೆ ಎಂಬ ಕೌತುಕ ಮನೆ ಮಾಡಿದೆ.

ಇದನ್ನೂ ಓದಿ: Kichcha Sudeep: ಇದೇ ಮೊದಲ ಬಾರಿಗೆ ಬಿಗ್​ ಬಾಸ್​ ನಿರೂಪಣೆ ತಪ್ಪಿಸಿಕೊಳ್ಳುತ್ತಿರುವ ಕಿಚ್ಚ ಸುದೀಪ್​?

Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್