AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಬಿಗ್​ ಬಾಸ್​ ನಿರೂಪಣೆ ಬಗ್ಗೆ ಹರಡಿದ ಅಂತೆಕಂತೆಗೆ ಸುದೀಪ್​ ಸ್ಪಷ್ಟನೆ

ಸಿನಿಮಾ ಕೆಲಸಗಳಿಗೆ ಸುದೀಪ್​ ಬೇರೆ ಬೇರೆ ಕಡೆಗಳಿಗೆ ತೆರಳುತ್ತಾರೆ. ಆದಾಗ್ಯೂ ಅವರು ವೀಕೆಂಡ್​ನಲ್ಲಿ ಬೆಂಗಳೂರಿಗೆ ವಾಪಾಸಾಗುತ್ತಿದ್ದರು. ಇದು 8 ವರ್ಷಗಳಿಂದಲೂ ನಡೆದುಕೊಂಡೇ ಬಂದಿದೆ.

Kichcha Sudeep: ಬಿಗ್​ ಬಾಸ್​ ನಿರೂಪಣೆ ಬಗ್ಗೆ ಹರಡಿದ ಅಂತೆಕಂತೆಗೆ ಸುದೀಪ್​ ಸ್ಪಷ್ಟನೆ
ಸುದೀಪ್​
ರಾಜೇಶ್ ದುಗ್ಗುಮನೆ
| Edited By: |

Updated on: Apr 16, 2021 | 4:00 PM

Share

ಕನ್ನಡ ಬಿಗ್​ ಬಾಸ್​ನ 7 ಸೀಸನ್​ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಕಿಚ್ಚ ಸುದೀಪ್​ 8ನೇ ಸೀಸನ್​ಗೆ ಕಾಲಿಟ್ಟಿದ್ದಾರೆ. ಅದನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ ಕೂಡ. ಒಂದೇ ಒಂದು ವಾರ ಕೂಡ ಅವರು ಬಿಗ್​ ಬಾಸ್​ ತಪ್ಪಿಸಿಲ್ಲ. ಆದರೆ, ಇದೇ ಮೊದಲ ಬಾರಿಗೆ ಅವರು ಬಿಗ್​ ಬಾಸ್​ನಿಂದ ದೂರ ಉಳಿಯುತ್ತಿದ್ದಾರೆ. ಈ ಬಗ್ಗೆ ಸುದೀಪ್​ ಅಧಿಕೃತ ಘೋಷಣೆ ಮಾಡಿದ್ದಾರೆ. ಸಿನಿಮಾ ಕೆಲಸಗಳಿಗೆ ಸುದೀಪ್​ ಬೇರೆ ಬೇರೆ ಕಡೆಗಳಿಗೆ ತೆರಳುತ್ತಾರೆ. ಆದಾಗ್ಯೂ ಅವರು ವೀಕೆಂಡ್​ನಲ್ಲಿ ಬೆಂಗಳೂರಿಗೆ ವಾಪಾಸಾಗುತ್ತಿದ್ದರು. ಇದು 8 ವರ್ಷಗಳಿಂದಲೂ ನಡೆದುಕೊಂಡೇ ಬಂದಿದೆ. ಆದರೆ, ಈ ಬಾರಿ ಅನಾರೋಗ್ಯದ ಕಾರಣದಿಂದ ಅವರು ನಿರೂಪಣೆ ಮಾಡುತ್ತಿಲ್ಲ ಎಂಬ ಮಾತುಗಳು ಕೇಳಿಬಂದಿದ್ದವು. ಈಗ ಈ ವಿಚಾರವನ್ನು ಸುದೀಪ್​ ಅಧಿಕೃತಗೊಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸುದೀಪ್​, ನನಗೆ ಅನಾರೋಗ್ಯ ಕಾಡುತ್ತಿದೆ. ಈ ವಾರಾಂತ್ಯಕ್ಕೆ ನಾನು ಗುಣಮುಖನಾಗುವ ನಿರೀಕ್ಷೆ ಇದೆ. ಆದರೆ, ವೈದ್ಯರ ಸೂಚನೆಯಂತೆ ನಾನು ಕೆಲ ದಿನ ರೆಸ್ಟ್​ ಮಾಡುತ್ತಿದ್ದೇನೆ. ಹೀಗಾಗಿ, ಈ ವಾರದ ಬಿಗ್​ ಬಾಸ್​ ಮಿಸ್​ ಮಾಡಿಕೊಳ್ಳುತ್ತಿದ್ದೇನೆ. ಈ ವಾರದ ಎಲಿಮಿನೇಷನ್​ಗೆ ಯಾವ ಪ್ಲ್ಯಾನ್​ ಮೂಲಕ ತಂಡ ಬರುತ್ತದೆ ಎನ್ನುವ ಕುತೂಹಲ ನನ್ನದು ಎಂದಿದ್ದಾರೆ ಸುದೀಪ್​.

ಈ ವಾರ ಶೋ ಯಾರು ನಡೆಸಿಕೊಡುತ್ತಾರೆ ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಏಳನೇ ವಾರದ ವೀಕೆಂಡ್​ ಎಪಿಸೋಡ್​ಗಳನ್ನು ಸಮರ್ಥವಾಗಿ ನಡೆಸಿಕೊಡಬಲ್ಲ ನಿರೂಪಕರಿಗಾಗಿ ವಾಹಿನಿ ಹುಡುಕಾಟ ನಡೆಸುತ್ತಿದೆ ಎನ್ನಲಾಗಿದೆ.

ಬೇರೆ ಭಾಷೆಯ ಬಿಗ್​ ಬಾಸ್​ ಕಾರ್ಯಕ್ರಮಗಳಲ್ಲಿ ಇಂಥ ಪರಿಸ್ಥಿತಿ ಈ ಹಿಂದೆ ಎದುರಾಗಿತ್ತು. ಅಕ್ಕಿನೇನಿ ನಾಗಾರ್ಜುನ ಅವರ ಅನುಪಸ್ಥಿತಿಯಲ್ಲಿ ಅವರ ಸೊಸೆ ಸಮಂತಾ ಅವರು ತೆಲುಗು ಬಿಗ್​ ಬಾಸ್​ ನಿರೂಪಣೆ ಮಾಡಿದ್ದರು. ಹಿರಿಯ ನಟಿ ರಮ್ಯಾ ಕೃಷ್ಣ ಅವರ ಹೆಗಲಿಗೂ ಒಮ್ಮೆ ಈ ಜವಾಬ್ದಾರಿ ಹೋಗಿತ್ತು. ಹಿಂದಿಯಲ್ಲಿ ಸಲ್ಮಾನ್​ ಖಾನ್​ ಬದಲಿಗೆ ಬಿಗ್​ ಬಾಸ್​ 13ನೇ ಸೀಸನ್​ ವಿನ್ನರ್​ ಸಿದ್ದಾರ್ಥ್​ ಶುಕ್ಲಾ ನಡೆಸಿಕೊಟ್ಟಿದ್ದರು. ಕನ್ನಡದಲ್ಲಿ ಯಾರಿಗೆ ಈ ಚಾನ್ಸ್​ ಸಿಗಲಿದೆ ಎಂಬ ಕೌತುಕ ಮನೆ ಮಾಡಿದೆ.

ಇದನ್ನೂ ಓದಿ: Kichcha Sudeep: ಇದೇ ಮೊದಲ ಬಾರಿಗೆ ಬಿಗ್​ ಬಾಸ್​ ನಿರೂಪಣೆ ತಪ್ಪಿಸಿಕೊಳ್ಳುತ್ತಿರುವ ಕಿಚ್ಚ ಸುದೀಪ್​?

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ