AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಬಿಗ್​ ಬಾಸ್​ ನಿರೂಪಣೆ ಬಗ್ಗೆ ಹರಡಿದ ಅಂತೆಕಂತೆಗೆ ಸುದೀಪ್​ ಸ್ಪಷ್ಟನೆ

ಸಿನಿಮಾ ಕೆಲಸಗಳಿಗೆ ಸುದೀಪ್​ ಬೇರೆ ಬೇರೆ ಕಡೆಗಳಿಗೆ ತೆರಳುತ್ತಾರೆ. ಆದಾಗ್ಯೂ ಅವರು ವೀಕೆಂಡ್​ನಲ್ಲಿ ಬೆಂಗಳೂರಿಗೆ ವಾಪಾಸಾಗುತ್ತಿದ್ದರು. ಇದು 8 ವರ್ಷಗಳಿಂದಲೂ ನಡೆದುಕೊಂಡೇ ಬಂದಿದೆ.

Kichcha Sudeep: ಬಿಗ್​ ಬಾಸ್​ ನಿರೂಪಣೆ ಬಗ್ಗೆ ಹರಡಿದ ಅಂತೆಕಂತೆಗೆ ಸುದೀಪ್​ ಸ್ಪಷ್ಟನೆ
ಸುದೀಪ್​
ರಾಜೇಶ್ ದುಗ್ಗುಮನೆ
| Edited By: |

Updated on: Apr 16, 2021 | 4:00 PM

Share

ಕನ್ನಡ ಬಿಗ್​ ಬಾಸ್​ನ 7 ಸೀಸನ್​ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಕಿಚ್ಚ ಸುದೀಪ್​ 8ನೇ ಸೀಸನ್​ಗೆ ಕಾಲಿಟ್ಟಿದ್ದಾರೆ. ಅದನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ ಕೂಡ. ಒಂದೇ ಒಂದು ವಾರ ಕೂಡ ಅವರು ಬಿಗ್​ ಬಾಸ್​ ತಪ್ಪಿಸಿಲ್ಲ. ಆದರೆ, ಇದೇ ಮೊದಲ ಬಾರಿಗೆ ಅವರು ಬಿಗ್​ ಬಾಸ್​ನಿಂದ ದೂರ ಉಳಿಯುತ್ತಿದ್ದಾರೆ. ಈ ಬಗ್ಗೆ ಸುದೀಪ್​ ಅಧಿಕೃತ ಘೋಷಣೆ ಮಾಡಿದ್ದಾರೆ. ಸಿನಿಮಾ ಕೆಲಸಗಳಿಗೆ ಸುದೀಪ್​ ಬೇರೆ ಬೇರೆ ಕಡೆಗಳಿಗೆ ತೆರಳುತ್ತಾರೆ. ಆದಾಗ್ಯೂ ಅವರು ವೀಕೆಂಡ್​ನಲ್ಲಿ ಬೆಂಗಳೂರಿಗೆ ವಾಪಾಸಾಗುತ್ತಿದ್ದರು. ಇದು 8 ವರ್ಷಗಳಿಂದಲೂ ನಡೆದುಕೊಂಡೇ ಬಂದಿದೆ. ಆದರೆ, ಈ ಬಾರಿ ಅನಾರೋಗ್ಯದ ಕಾರಣದಿಂದ ಅವರು ನಿರೂಪಣೆ ಮಾಡುತ್ತಿಲ್ಲ ಎಂಬ ಮಾತುಗಳು ಕೇಳಿಬಂದಿದ್ದವು. ಈಗ ಈ ವಿಚಾರವನ್ನು ಸುದೀಪ್​ ಅಧಿಕೃತಗೊಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸುದೀಪ್​, ನನಗೆ ಅನಾರೋಗ್ಯ ಕಾಡುತ್ತಿದೆ. ಈ ವಾರಾಂತ್ಯಕ್ಕೆ ನಾನು ಗುಣಮುಖನಾಗುವ ನಿರೀಕ್ಷೆ ಇದೆ. ಆದರೆ, ವೈದ್ಯರ ಸೂಚನೆಯಂತೆ ನಾನು ಕೆಲ ದಿನ ರೆಸ್ಟ್​ ಮಾಡುತ್ತಿದ್ದೇನೆ. ಹೀಗಾಗಿ, ಈ ವಾರದ ಬಿಗ್​ ಬಾಸ್​ ಮಿಸ್​ ಮಾಡಿಕೊಳ್ಳುತ್ತಿದ್ದೇನೆ. ಈ ವಾರದ ಎಲಿಮಿನೇಷನ್​ಗೆ ಯಾವ ಪ್ಲ್ಯಾನ್​ ಮೂಲಕ ತಂಡ ಬರುತ್ತದೆ ಎನ್ನುವ ಕುತೂಹಲ ನನ್ನದು ಎಂದಿದ್ದಾರೆ ಸುದೀಪ್​.

ಈ ವಾರ ಶೋ ಯಾರು ನಡೆಸಿಕೊಡುತ್ತಾರೆ ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಏಳನೇ ವಾರದ ವೀಕೆಂಡ್​ ಎಪಿಸೋಡ್​ಗಳನ್ನು ಸಮರ್ಥವಾಗಿ ನಡೆಸಿಕೊಡಬಲ್ಲ ನಿರೂಪಕರಿಗಾಗಿ ವಾಹಿನಿ ಹುಡುಕಾಟ ನಡೆಸುತ್ತಿದೆ ಎನ್ನಲಾಗಿದೆ.

ಬೇರೆ ಭಾಷೆಯ ಬಿಗ್​ ಬಾಸ್​ ಕಾರ್ಯಕ್ರಮಗಳಲ್ಲಿ ಇಂಥ ಪರಿಸ್ಥಿತಿ ಈ ಹಿಂದೆ ಎದುರಾಗಿತ್ತು. ಅಕ್ಕಿನೇನಿ ನಾಗಾರ್ಜುನ ಅವರ ಅನುಪಸ್ಥಿತಿಯಲ್ಲಿ ಅವರ ಸೊಸೆ ಸಮಂತಾ ಅವರು ತೆಲುಗು ಬಿಗ್​ ಬಾಸ್​ ನಿರೂಪಣೆ ಮಾಡಿದ್ದರು. ಹಿರಿಯ ನಟಿ ರಮ್ಯಾ ಕೃಷ್ಣ ಅವರ ಹೆಗಲಿಗೂ ಒಮ್ಮೆ ಈ ಜವಾಬ್ದಾರಿ ಹೋಗಿತ್ತು. ಹಿಂದಿಯಲ್ಲಿ ಸಲ್ಮಾನ್​ ಖಾನ್​ ಬದಲಿಗೆ ಬಿಗ್​ ಬಾಸ್​ 13ನೇ ಸೀಸನ್​ ವಿನ್ನರ್​ ಸಿದ್ದಾರ್ಥ್​ ಶುಕ್ಲಾ ನಡೆಸಿಕೊಟ್ಟಿದ್ದರು. ಕನ್ನಡದಲ್ಲಿ ಯಾರಿಗೆ ಈ ಚಾನ್ಸ್​ ಸಿಗಲಿದೆ ಎಂಬ ಕೌತುಕ ಮನೆ ಮಾಡಿದೆ.

ಇದನ್ನೂ ಓದಿ: Kichcha Sudeep: ಇದೇ ಮೊದಲ ಬಾರಿಗೆ ಬಿಗ್​ ಬಾಸ್​ ನಿರೂಪಣೆ ತಪ್ಪಿಸಿಕೊಳ್ಳುತ್ತಿರುವ ಕಿಚ್ಚ ಸುದೀಪ್​?

Follow Us
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ