AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2018 Movie: ‘ಈ ಮಲಯಾಳಂ ಸಿನಿಮಾ ಕನ್ನಡಿಗರ ಹೃದಯ ಗೆದ್ದಿದೆ’: ‘2018’ ಚಿತ್ರಕ್ಕೆ ಕಿಚ್ಚ ಸುದೀಪ್ ಮೆಚ್ಚುಗೆ

Kichcha Sudeep: ಒಳ್ಳೆಯ ಸಿನಿಮಾಗಳಿಗೆ ಕಿಚ್ಚ ಸುದೀಪ್ ಅವರು ಯಾವಾಗಲೂ ಬೆಂಬಲ ನೀಡುತ್ತಾರೆ. ಮಾನವೀಯತೆಯ ಕಥೆ ಹೊಂದಿರುವ ‘2018’ ಸಿನಿಮಾ ಬಗ್ಗೆ ಅವರು ಈಗ ಮೆಚ್ಚುಗೆ ಸೂಚಿಸಿದ್ದಾರೆ.

2018 Movie: ‘ಈ ಮಲಯಾಳಂ ಸಿನಿಮಾ ಕನ್ನಡಿಗರ ಹೃದಯ ಗೆದ್ದಿದೆ’: ‘2018’ ಚಿತ್ರಕ್ಕೆ ಕಿಚ್ಚ ಸುದೀಪ್ ಮೆಚ್ಚುಗೆ
2018 ಸಿನಿಮಾ ಪೋಸ್ಟರ್​, ಸುದೀಪ್​
ಮದನ್​ ಕುಮಾರ್​
|

Updated on: Jun 04, 2023 | 9:16 AM

Share

ಮಲಯಾಳಂನ ‘2018’ ಸಿನಿಮಾ (2018 Movie) ಭಾರಿ ಸದ್ದು ಮಾಡುತ್ತಿದೆ. ನೈಜ ಘಟನೆಗಳನ್ನು ಆಧರಿಸಿ ತಯಾರಾದ ಈ ಸಿನಿಮಾಗೆ ಪ್ರೇಕ್ಷಕರು ಮನ ಸೋತಿದ್ದಾರೆ. ಕಿಚ್ಚ ಸುದೀಪ್​ (Kichcha Sudeep) ಕೂಡ ಈ ಚಿತ್ರದ ಬಗ್ಗೆ ಟ್ವೀಟ್​ ಮಾಡಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ‘2018’ ಮಾಡಿದ ಸಾಧನೆಗಾಗಿ ಸುದೀಪ್​ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಮೊದಲು ಮಲಯಾಳಂನಲ್ಲಿ ಮಾತ್ರ ಬಿಡುಗಡೆಯಾದ ಈ ಸಿನಿಮಾ ನಂತರ ತೆಲುಗು, ಕನ್ನಡ, ಹಿಂದಿ, ತಮಿಳು ಭಾಷೆಗಳಿಗೆ ಡಬ್​ ಆಗಿ ತೆರೆ ಕಂಡಿತು. ಕನ್ನಡಿಗರು ಕೂಡ ಈ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. ಗಲ್ಲಾಪೆಟ್ಟಿಗೆಯಲ್ಲಿ ನೂರಾರು ಕೋಟಿ ರೂಪಾಯಿ ಗಳಿಸುವ ಮೂಲಕ ಮಲಯಾಳಂ (Mollywood) ಚಿತ್ರರಂಗದಲ್ಲಿ ಈ ಸಿನಿಮಾ ಹೊಸ ದಾಖಲೆ ಬರೆದಿದೆ. ಈ ಬಗ್ಗೆ ಕಿಚ್ಚ ಸುದೀಪ್ ಅವರು ಟ್ವೀಟ್​ ಮಾಡಿ, ಶುಭ ಕೋರಿದ್ದಾರೆ.

‘ಕೇರಳದಲ್ಲಿ 2018ರಲ್ಲಿ ಪ್ರವಾಹ ಉಂಟಾದಾಗ ಮಾನವೀಯತೆ ಗೆದ್ದಿತ್ತು. ಈ ಧೈರ್ಯಶಾಲಿ ನೈಜ ಕಥೆಯು ಬೆಳ್ಳಿತೆರೆಯಲ್ಲಿ ಅದ್ಭುತವಾಗಿ ಮೂಡಿಬಂದಿದ್ದು, ಕೇರಳ ಚಿತ್ರೋದ್ಯಮದ ಇತಿಹಾಸದಲ್ಲಿ ಅತಿದೊಡ್ಡ ಬ್ಲಾಕ್‌ ಬಸ್ಟರ್ ಆಗಿದೆ. ‘2018’ ಸಿನಿಮಾ ಕನ್ನಡಿಗರ ಹೃದಯವನ್ನೂ ಗೆಲ್ಲುತ್ತಿದೆ. ಅಭಿನಂದನೆಗಳು’ ಎಂದು ಸುದೀಪ್​ ಅವರು ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿದ್ದಾರೆ. ‘ಇದು ನಿಜವಾದ ಕೇರಳ ಸ್ಟೋರಿ’ ಎಂದು ಅಭಿಮಾನಿಗಳು ಕಮೆಂಟ್​ ಬಾಕ್ಸ್​ನಲ್ಲಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ‘ನಿಮ್ಮ ಪ್ರೀತಿಗೆ ಧನ್ಯವಾದಗಳು. ಇಷ್ಟೇ ನಮಗೆ ಬೇಕಿರುವುದು’ ಎಂದು ಕೇರಳದಲ್ಲಿನ ಫ್ಯಾನ್ಸ್​ ಕೂಡ ಕಮೆಂಟ್​ ಮಾಡಿದ್ದಾರೆ.

‘2018’ ಚಿತ್ರದ ಕಥೆ ಏನು?

2018ರಲ್ಲಿ ಕೇರಳದಲ್ಲಿ ಉಂಟಾದ ಪ್ರವಾಹವನ್ನು ಆಧರಿಸಿ ‘2018’ ಸಿನಿಮಾ ಸಿದ್ಧವಾಗಿದೆ. ಹಲವರ ಪ್ರಾಣಹಾನಿ, ಆಸ್ತಿಪಾಸ್ತಿ ನಷ್ಟದ ಘಟನೆಗಳನ್ನು ಈ ಚಿತ್ರದ ಮೂಲಕ ತೋರಿಸಲಾಗಿದೆ. ಅತಿ ಕಷ್ಟದ ಸಂದರ್ಭದಲ್ಲಿ ಕೇರಳದ ಪ್ರತಿಯೊಬ್ಬರು ಹೇಗೆ ನಡೆದುಕೊಂಡರು ಎಂಬ ವಿವರ ಈ ಸಿನಿಮಾದಲ್ಲಿ. ‘ಪ್ರತಿಯೊಬ್ಬರೂ ಹೀರೋ’ ಎಂಬ ಟ್ಯಾಗ್​ಲೈನ್​ ಗಮನ ಸೆಳೆದಿದೆ. 2018ರ ಪ್ರವಾಹದಲ್ಲಿ ಕೇರಳದ 400ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದರು. ಅನೇಕರು ನಾಪತ್ತೆಯಾದರು. 1924ರ ಬಳಿಕ ಕೇರಳದಲ್ಲಿ ಉಂಟಾದ ಅತಿ ಭೀಕರ ಪ್ರವಾಹ ಅದು.

ಇದನ್ನೂ ಓದಿ: Kichcha Sudeep: ಸುದೀಪ್​ ಹೊಸ ಸಿನಿಮಾ ಬಗ್ಗೆ ಸಿಕ್ತು ಅಪ್​ಡೇಟ್​; ‘ಕಬಾಲಿ’ ನಿರ್ಮಾಪಕರ ಜೊತೆ ಕೈ ಜೋಡಿಸಿದ ಕಿಚ್ಚ

ಈವರೆಗೂ 160 ಕೋಟಿ ರೂಪಾಯಿಗಳನ್ನು ಗಳಿಸುವ ಮೂಲಕ ಮಲಯಾಳಂ ಚಿತ್ರರಂಗದ ಅತಿ ದೊಡ್ಡ ಬ್ಲಾಕ್​ ಬಸ್ಟರ್​ ಸಿನಿಮಾ ಎಂಬ ಖ್ಯಾತಿಗೆ ‘2018’ ಒಳಗಾಗಿದೆ. ಟೊವಿನೋ ಥಾಮಸ್​ ಜೊತೆ ಆಸಿಫ್​ ಅಲಿ, ಅಪರ್ಣಾ ಬಾಲಮುರಳಿ, ವಿನೀತ್​ ಶ್ರೀನಿವಾಸನ್​, ಕಲೈಯರಸನ್​, ಸುದೇಶ್​, ಅಜು ವರ್ಗೀಸ್​, ತನ್ವಿ ರಾಮ್​, ಗೌತಮಿ ನಾಯರ್​ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಜೂಡ್​ ಆಂಥೊನಿ ಜೋಸೆಫ್​ ಅವರು ನಿರ್ದೇಶನ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ