AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2018 Movie: ‘ಈ ಮಲಯಾಳಂ ಸಿನಿಮಾ ಕನ್ನಡಿಗರ ಹೃದಯ ಗೆದ್ದಿದೆ’: ‘2018’ ಚಿತ್ರಕ್ಕೆ ಕಿಚ್ಚ ಸುದೀಪ್ ಮೆಚ್ಚುಗೆ

Kichcha Sudeep: ಒಳ್ಳೆಯ ಸಿನಿಮಾಗಳಿಗೆ ಕಿಚ್ಚ ಸುದೀಪ್ ಅವರು ಯಾವಾಗಲೂ ಬೆಂಬಲ ನೀಡುತ್ತಾರೆ. ಮಾನವೀಯತೆಯ ಕಥೆ ಹೊಂದಿರುವ ‘2018’ ಸಿನಿಮಾ ಬಗ್ಗೆ ಅವರು ಈಗ ಮೆಚ್ಚುಗೆ ಸೂಚಿಸಿದ್ದಾರೆ.

2018 Movie: ‘ಈ ಮಲಯಾಳಂ ಸಿನಿಮಾ ಕನ್ನಡಿಗರ ಹೃದಯ ಗೆದ್ದಿದೆ’: ‘2018’ ಚಿತ್ರಕ್ಕೆ ಕಿಚ್ಚ ಸುದೀಪ್ ಮೆಚ್ಚುಗೆ
2018 ಸಿನಿಮಾ ಪೋಸ್ಟರ್​, ಸುದೀಪ್​
ಮದನ್​ ಕುಮಾರ್​
|

Updated on: Jun 04, 2023 | 9:16 AM

Share

ಮಲಯಾಳಂನ ‘2018’ ಸಿನಿಮಾ (2018 Movie) ಭಾರಿ ಸದ್ದು ಮಾಡುತ್ತಿದೆ. ನೈಜ ಘಟನೆಗಳನ್ನು ಆಧರಿಸಿ ತಯಾರಾದ ಈ ಸಿನಿಮಾಗೆ ಪ್ರೇಕ್ಷಕರು ಮನ ಸೋತಿದ್ದಾರೆ. ಕಿಚ್ಚ ಸುದೀಪ್​ (Kichcha Sudeep) ಕೂಡ ಈ ಚಿತ್ರದ ಬಗ್ಗೆ ಟ್ವೀಟ್​ ಮಾಡಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ‘2018’ ಮಾಡಿದ ಸಾಧನೆಗಾಗಿ ಸುದೀಪ್​ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಮೊದಲು ಮಲಯಾಳಂನಲ್ಲಿ ಮಾತ್ರ ಬಿಡುಗಡೆಯಾದ ಈ ಸಿನಿಮಾ ನಂತರ ತೆಲುಗು, ಕನ್ನಡ, ಹಿಂದಿ, ತಮಿಳು ಭಾಷೆಗಳಿಗೆ ಡಬ್​ ಆಗಿ ತೆರೆ ಕಂಡಿತು. ಕನ್ನಡಿಗರು ಕೂಡ ಈ ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. ಗಲ್ಲಾಪೆಟ್ಟಿಗೆಯಲ್ಲಿ ನೂರಾರು ಕೋಟಿ ರೂಪಾಯಿ ಗಳಿಸುವ ಮೂಲಕ ಮಲಯಾಳಂ (Mollywood) ಚಿತ್ರರಂಗದಲ್ಲಿ ಈ ಸಿನಿಮಾ ಹೊಸ ದಾಖಲೆ ಬರೆದಿದೆ. ಈ ಬಗ್ಗೆ ಕಿಚ್ಚ ಸುದೀಪ್ ಅವರು ಟ್ವೀಟ್​ ಮಾಡಿ, ಶುಭ ಕೋರಿದ್ದಾರೆ.

‘ಕೇರಳದಲ್ಲಿ 2018ರಲ್ಲಿ ಪ್ರವಾಹ ಉಂಟಾದಾಗ ಮಾನವೀಯತೆ ಗೆದ್ದಿತ್ತು. ಈ ಧೈರ್ಯಶಾಲಿ ನೈಜ ಕಥೆಯು ಬೆಳ್ಳಿತೆರೆಯಲ್ಲಿ ಅದ್ಭುತವಾಗಿ ಮೂಡಿಬಂದಿದ್ದು, ಕೇರಳ ಚಿತ್ರೋದ್ಯಮದ ಇತಿಹಾಸದಲ್ಲಿ ಅತಿದೊಡ್ಡ ಬ್ಲಾಕ್‌ ಬಸ್ಟರ್ ಆಗಿದೆ. ‘2018’ ಸಿನಿಮಾ ಕನ್ನಡಿಗರ ಹೃದಯವನ್ನೂ ಗೆಲ್ಲುತ್ತಿದೆ. ಅಭಿನಂದನೆಗಳು’ ಎಂದು ಸುದೀಪ್​ ಅವರು ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿದ್ದಾರೆ. ‘ಇದು ನಿಜವಾದ ಕೇರಳ ಸ್ಟೋರಿ’ ಎಂದು ಅಭಿಮಾನಿಗಳು ಕಮೆಂಟ್​ ಬಾಕ್ಸ್​ನಲ್ಲಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ‘ನಿಮ್ಮ ಪ್ರೀತಿಗೆ ಧನ್ಯವಾದಗಳು. ಇಷ್ಟೇ ನಮಗೆ ಬೇಕಿರುವುದು’ ಎಂದು ಕೇರಳದಲ್ಲಿನ ಫ್ಯಾನ್ಸ್​ ಕೂಡ ಕಮೆಂಟ್​ ಮಾಡಿದ್ದಾರೆ.

‘2018’ ಚಿತ್ರದ ಕಥೆ ಏನು?

2018ರಲ್ಲಿ ಕೇರಳದಲ್ಲಿ ಉಂಟಾದ ಪ್ರವಾಹವನ್ನು ಆಧರಿಸಿ ‘2018’ ಸಿನಿಮಾ ಸಿದ್ಧವಾಗಿದೆ. ಹಲವರ ಪ್ರಾಣಹಾನಿ, ಆಸ್ತಿಪಾಸ್ತಿ ನಷ್ಟದ ಘಟನೆಗಳನ್ನು ಈ ಚಿತ್ರದ ಮೂಲಕ ತೋರಿಸಲಾಗಿದೆ. ಅತಿ ಕಷ್ಟದ ಸಂದರ್ಭದಲ್ಲಿ ಕೇರಳದ ಪ್ರತಿಯೊಬ್ಬರು ಹೇಗೆ ನಡೆದುಕೊಂಡರು ಎಂಬ ವಿವರ ಈ ಸಿನಿಮಾದಲ್ಲಿ. ‘ಪ್ರತಿಯೊಬ್ಬರೂ ಹೀರೋ’ ಎಂಬ ಟ್ಯಾಗ್​ಲೈನ್​ ಗಮನ ಸೆಳೆದಿದೆ. 2018ರ ಪ್ರವಾಹದಲ್ಲಿ ಕೇರಳದ 400ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದರು. ಅನೇಕರು ನಾಪತ್ತೆಯಾದರು. 1924ರ ಬಳಿಕ ಕೇರಳದಲ್ಲಿ ಉಂಟಾದ ಅತಿ ಭೀಕರ ಪ್ರವಾಹ ಅದು.

ಇದನ್ನೂ ಓದಿ: Kichcha Sudeep: ಸುದೀಪ್​ ಹೊಸ ಸಿನಿಮಾ ಬಗ್ಗೆ ಸಿಕ್ತು ಅಪ್​ಡೇಟ್​; ‘ಕಬಾಲಿ’ ನಿರ್ಮಾಪಕರ ಜೊತೆ ಕೈ ಜೋಡಿಸಿದ ಕಿಚ್ಚ

ಈವರೆಗೂ 160 ಕೋಟಿ ರೂಪಾಯಿಗಳನ್ನು ಗಳಿಸುವ ಮೂಲಕ ಮಲಯಾಳಂ ಚಿತ್ರರಂಗದ ಅತಿ ದೊಡ್ಡ ಬ್ಲಾಕ್​ ಬಸ್ಟರ್​ ಸಿನಿಮಾ ಎಂಬ ಖ್ಯಾತಿಗೆ ‘2018’ ಒಳಗಾಗಿದೆ. ಟೊವಿನೋ ಥಾಮಸ್​ ಜೊತೆ ಆಸಿಫ್​ ಅಲಿ, ಅಪರ್ಣಾ ಬಾಲಮುರಳಿ, ವಿನೀತ್​ ಶ್ರೀನಿವಾಸನ್​, ಕಲೈಯರಸನ್​, ಸುದೇಶ್​, ಅಜು ವರ್ಗೀಸ್​, ತನ್ವಿ ರಾಮ್​, ಗೌತಮಿ ನಾಯರ್​ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಜೂಡ್​ ಆಂಥೊನಿ ಜೋಸೆಫ್​ ಅವರು ನಿರ್ದೇಶನ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ವೇ ಫ್ಲೈಓವರ್‌‌ನಿಂದ ಕೆಳಗೆ ಬಿದ್ದ ಕಾರು
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಪ್ರತಿ ಲೀಟರ್‌ ಹಾಲಿನ ದರ ₹8 ಹೆಚ್ಚಳಕ್ಕೆ ಹಾಲು ಒಕ್ಕೂಟಗಳ ಆಗ್ರಹ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ