AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮವರು ಬೇರೆ ಭಾಷೆಗೆ ಹೋಗ್ತಾರೆ, ಆದ್ರೆ ಪರಭಾಷೆಯವರು ಬರಲ್ಲ; ಸುದೀಪ್ ಬೇಸರ

Kichcha Sudeep: ಸದ್ಯ ಸುದೀಪ್ ಹೇಳಿದ ಮಾತನ್ನು ಅನೇಕರು ಬೆಂಬಲಿಸಿದ್ದಾರೆ. ಸಂಜಯ್ ದತ್ ಸೇರಿದಂತೆ ಅನೇಕ ಕಲಾವಿದರು ದೊಡ್ಡ ದೊಡ್ಡ ಬಜೆಟ್ ಸಿನಿಮಾಗಳಲ್ಲಿ ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದನ್ನು ಹೊರತುಪಡಿಸಿದರೆ ಯಾರೊಬ್ಬರೂ ನಮ್ಮ ಸಿನಿಮಾಗಳಲ್ಲಿ ಅತಿಥಿ ಪಾತ್ರ ಮಾಡುತ್ತಿಲ್ಲ ಎಂಬುದು ಬೇಸರದ ವಿಷಯ.

ನಮ್ಮವರು ಬೇರೆ ಭಾಷೆಗೆ ಹೋಗ್ತಾರೆ, ಆದ್ರೆ ಪರಭಾಷೆಯವರು ಬರಲ್ಲ; ಸುದೀಪ್ ಬೇಸರ
ಸುದೀಪ್
ರಾಜೇಶ್ ದುಗ್ಗುಮನೆ
|

Updated on:Dec 27, 2025 | 9:33 AM

Share

ಕನ್ನಡ ಕಲಾವಿದರಿಗೆ ಈಗ ಸಾಕಷ್ಟು ಬೇಡಿಕೆ ಬರುತ್ತಿದೆ. ಅನೇಕ ಸ್ಟಾರ್ ಕಲಾವಿದರು ಪರಭಾಷೆಗೆ ತೆರಳಿ ಅತಿಥಿ ಪಾತ್ರ ಮಾಡಿದ್ದು ಇದೆ. ಶಿವರಾಜ್​​ಕುಮಾರ್ ಅವರು ‘ಜೈಲರ್​’ ಅಲ್ಲಿ, ಉಪೇಂದ್ರ ಅವರು ‘ಕೂಲಿ’ ಚಿತ್ರದಲ್ಲಿಅತಿಥಿ ಪಾತ್ರ ಮಾಡಿದ್ದಾರೆ. ಅತಿಥಿ ಪಾತ್ರಗಳ ಬಗ್ಗೆ ಸುದೀಪ್ ಮಾತನಾಡಿದ್ದಾರೆ. ನಮ್ಮ ಕಲಾವಿದರು ಅಲ್ಲಿಗೆ ತೆರಳಿ ಅತಿಥಿ ಪಾತ್ರ ಮಾಡುವ ಬಗ್ಗೆ ಅವರಿಗೆ ಯಾವುದೇ ತಕರಾರು ಇಲ್ಲ. ಆದರೆ, ಅಲ್ಲಿಯವರು ಇಲ್ಲಿಗೆ ಬರೋದಿಲ್ಲ ಎಂಬ ಬೇಸರ ಅವರನ್ನು ಕಾಡುತ್ತಿದೆ.

ಈ ಬಗ್ಗೆ ಸಂದರ್ಶನ ಒಂದರಲ್ಲಿ ಸುದೀಪ್ ಮಾತನಾಡಿದ್ದಾರೆ. ‘ನಾವು ಕನ್ನಡ ಕಲಾವಿದರು ಬೇರೆ ಭಾಷೆಗಳಲ್ಲಿ ಸಾಕಷ್ಟು ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತೇವೆ. ಆದರೆ, ಬೇರೆ ಭಾಷೆಯವರು ನಮ್ಮ ಸಿನಿಮಾಗಳಲ್ಲಿ ನಟಿಸಲು ಸಿದ್ಧರಿರುವುದಿಲ್ಲ’ ಎಂದಿದ್ದಾರೆ ಸುದೀಪ್.

‘ನಮ್ಮ ಸಿನಿಮಾಗಳಲ್ಲಿ ನಟಿಸುವಂತೆ ನಾನು ವೈಯಕ್ತಿಕವಾಗಿ ಕೆಲವು ನಟರನ್ನು ಕೇಳಿಕೊಂಡೆ. ಆದರೆ, ಅದು ಸಾಧ್ಯವಾಗಿಲ್ಲ. ಇದು ಎರಡೂ ಕಡೆಗಳಿಂದ ಹಾಕಬೇಕಾದ ಶ್ರಮ. ಆದರೆ, ಈಗ ನನಗೆ ಅದು ಕಾಣಿಸುತ್ತಿಲ್ಲ’ ಎಂದು ಸುದೀಪ್ ಅವರು ಬೇಸರ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಯುದ್ಧಕ್ಕೆ ಸಿದ್ಧ ಎಂದ ಸುದೀಪ್ ಮಾತಿಗೆ ಅರ್ಜುನ್ ಜನ್ಯ ಮೊದಲ ರಿಯಾಕ್ಷನ್

ಕನ್ನಡದ ಕಲಾವಿದರು ಪರಭಾಷೆಯಲ್ಲಿ ನಟಿಸೋದನ್ನು ಸಾಕಷ್ಟು ಕಾಣಬಹುದು. ಆದರೆ, ಅವರು ಇಲ್ಲಿ ಬಂದು ನಟಿಸಿದ್ದು ಕಡಿಮೆ. ಸುದೀಪ್ ಅವರು ಕೂಡ ಈ ಮೊದಲು ಅತಿಥಿ ಪಾತ್ರ ಮಾಡಿದ್ದರು. ‘ಬಾಹುಬಲಿ’ ಸಿನಿಮಾದಲ್ಲಿ ಅವರು ಅತಿಥಿ ಕಲಾವಿದರಾಗಿ ನಟಿಸಿದ್ದರು.

ಸದ್ಯ ಸುದೀಪ್ ಹೇಳಿದ ಮಾತನ್ನು ಅನೇಕರು ಬೆಂಬಲಿಸಿದ್ದಾರೆ. ಸಂಜಯ್ ದತ್ ಸೇರಿದಂತೆ ಅನೇಕ ಕಲಾವಿದರು ದೊಡ್ಡ ದೊಡ್ಡ ಬಜೆಟ್ ಸಿನಿಮಾಗಳಲ್ಲಿ ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದನ್ನು ಹೊರತುಪಡಿಸಿದರೆ ಯಾರೊಬ್ಬರೂ ಸಿನಿಮಾಗಳಲ್ಲಿ ಅತಿಥಿ ಪಾತ್ರ ಮಾಡುತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:30 am, Sat, 27 December 25

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ