AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ‘ಉತ್ತರ ಕರ್ನಾಟಕದ ಜನರಿಗೆ ಬರೀ ನೀರು ಕೊಟ್ಟು ಸಮಾಧಾನ ಮಾಡಿದ್ದಾರೆ’: ಮತದಾನದ ಬಳಿಕ ಸುದೀಪ್​ ಪ್ರತಿಕ್ರಿಯೆ

Karnataka Assembly Elections 2023: ಕಿಚ್ಚ ಸುದೀಪ್​ ಅವರು ಜೆ.ಪಿ. ನಗರದ ಆಕ್ಸ್​ಫರ್ಡ್​ ಶಾಲೆಯಲ್ಲಿ ಮತದಾನ ಮಾಡಿದ್ದಾರೆ. ಪತ್ನಿ ಪ್ರಿಯಾ ಹಾಗೂ ಪುತ್ರಿ ಸಾನ್ವಿ ಜತೆ ಆಗಮಿಸಿದ ಅವರು ತಮ್ಮ ಮತ ಚಲಾಯಿಸಿದ್ದಾರೆ.

ಮದನ್​ ಕುಮಾರ್​
|

Updated on: May 10, 2023 | 4:17 PM

Share

ನಟ ಕಿಚ್ಚ ಸುದೀಪ್​ ಅವರು ಈ ಬಾರಿ ಚುನಾವಣಾ (Karnataka Assembly Elections 2023) ಕ್ಯಾಂಪೇನ್​ನಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದರು. ಹಲವು ಅಭ್ಯರ್ಥಿಗಳ ಪರವಾಗಿ ಅವರು ಪ್ರಚಾರ ಮಾಡಿದ್ದರು. ಇಂದು (ಮೇ 10) ಕುಟುಂಬದ ಸದಸ್ಯರ ಜೊತೆ ಬಂದು ಅವರು ಮತ ಚಲಾಯಿಸಿದ್ದಾರೆ. ಜೆ.ಪಿ.ನಗರದ ಆಕ್ಸ್​ಫರ್ಡ್​ ಶಾಲೆಯಲ್ಲಿ ಅವರು ಮತದಾನ ಮಾಡಿದ್ದಾರೆ. ಪತ್ನಿ ಪ್ರಿಯಾ ಹಾಗೂ ಪುತ್ರಿ ಸಾನ್ವಿ (Sanvi Sudeep) ಜತೆ ಆಗಮಿಸಿದ ಅವರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ, ಮತದಾನ ಜಾಗೃತಿ ಸಂದೇಶ ನೀಡಿದ್ದಾರೆ. ಸುದೀಪ್​ ಪುತ್ರಿ ಸಾನ್ವಿ ಅವರಿಗೆ ಇದು ಮೊದಲ ಮತದಾನ. ಹಾಗಾಗಿ ಅವರ ಪಾಲಿಗೆ ಈ ಬಾರಿಯ ಎಲೆಕ್ಷನ್​ ತುಂಬ ವಿಶೇಷ. ಮಗಳ ಬಗ್ಗೆ ಸುದೀಪ್​ (Kichcha Sudeep) ಮಾತಾಡಿದ್ದಾರೆ. ‘ನನ್ನ ಮಗಳು ಫಸ್ಟ್ ಟೈಮ್ ವೋಟ್ ಮಾಡಿದ್ದಾಳೆ. ದಾರಿಯುದ್ದಕ್ಕೂ ವಿಡಿಯೋ ಮಾಡ್ತಾ ಬಂದೆ. ಆಕೆ ಏನೇ ಮಾಡಿದ್ರೂ ಅದನ್ನು ವೀಡಿಯೋ ಮಾಡಿ ಸೆಲೆಬ್ರೇಟ್ ಮಾಡ್ತೀನಿ’ ಎಂದಿದ್ದಾರೆ ಸುದೀಪ್​.

‘ಕ್ಯಾಂಪೇನ್​ ವೇಳೆ ತುಂಬ ವಿಷಯ ಕಲಿತಿದ್ದೇನೆ. ಈಗ ಕೇವಲ ಶೇಕಡ 60ರಷ್ಟು ಮಾತ್ರ ಮತದಾನ ಆಗುತ್ತಿದೆ. ಒಳ್ಳೆಯದಾಗಬೇಕು ಎಂದರೆ ಎಲ್ಲರೂ ವೋಟ್​ ಹಾಕಬೇಕು. ಇಂದು ವೋಟ್​ ಮಾಡದೇ ಆಮೇಲೆ ಸೋಶಿಯಲ್​ ಮೀಡಿಯಾದಲ್ಲಿ ರಾಜಕೀಯ ನಾಯಕರಿಗೆ ಮತ್ತು ಸರ್ಕಾರಕ್ಕೆ ಬಯ್ಯೋದು ಸರಿಯಲ್ಲ. ಮತದಾನ ಮಾಡಿ ಅಂತ ಒತ್ತಾಯ ಮಾಡೋಕೆ ಆಗಲ್ಲ. ಪ್ರತಿಯೊಬ್ಬರು ತಮ್ಮ ಜವಾಬ್ದಾರಿ ಅರ್ಥ ಮಾಡಿಕೊಳ್ಳಬೇಕು’ ಎಂದು ಸುದೀಪ್​ ಹೇಳಿದ್ದಾರೆ.

ಬರೀ ನೀರು ಕೊಟ್ಟಿದ್ದಾರೆ!

‘ನಾನು ಕ್ಯಾಂಪೇನ್​ಗೆ ಹೋದಾದ ತುಂಬ ಸತ್ಯಗಳನ್ನು ನೋಡಿಕೊಂಡು ಬಂದಿದ್ದೇನೆ. ಆ ಸತ್ಯಗಳು ನನ್ನ ಜೊತೆ ಇರುತ್ತವೆ. ತುಂಬ ಊರುಗಳಲ್ಲಿ ಸಾಕಷ್ಟು ಕೊರತೆ ಇದೆ. ಉತ್ತರ ಕರ್ನಾಟಕದ ತುಂಬ ಕಡೆ ಜನಗಳಿಗೆ ಕೇವಲ ನೀರು ಕೊಟ್ಟು ಸಮಾಧಾನ ಮಾಡಿ ಬಿಟ್ಟಿದ್ದಾರೆ ಅನಿಸುತ್ತದೆ. ಆ ಊರುಗಳು ಇನ್ನೂ ಸಾಕಷ್ಟು ಹಿಂದೆ ಉಳಿದುಕೊಂಡಿವೆ. ಅವರಿಗೆಲ್ಲ ಒಂದು ಒಳ್ಳೆಯ ಜೀವನ ಸಿಗಬೇಕು ಎಂದರೆ ಎಲ್ಲರೂ ಚೆನ್ನಾಗಿ ಕೆಲಸ ಮಾಡಬೇಕು’ ಎಂದಿದ್ದಾರೆ ಸುದೀಪ್​.

ಇದನ್ನೂ ಓದಿ: Kichcha Sudeep: ರಾಜಕೀಯ ಪ್ರಚಾರದ ನಡುವೆಯೂ ಅಭಿಮಾನಿಗಳ ಪ್ರೀತಿ ಕಡೆಗೆ ಗಮನ ಹರಿಸಿದ ಸುದೀಪ್​

‘ನಾನು ಸ್ನೇಹಿತರಿಗಾಗಿ ಕ್ಯಾಂಪೇನ್​ ಮಾಡಿದ್ದೇನೆ. ಅವರಿಗೆಲ್ಲ ಒಳ್ಳೆಯದಾಗಬೇಕು. ಅದಕ್ಕಿಂತಲೂ ಹೆಚ್ಚಾಗಿ ಜನರಿಗೆ ಒಳ್ಳೆಯದಾಗಬೇಕು. ಜನರು ಅವರ ಆಯ್ಕೆಗಳನ್ನು ಚೆನ್ನಾಗಿ ಮಾಡುತ್ತಾರೆ ಎಂಬ ನಂಬಿಕೆ ನನಗಿದೆ’ ಎಂದು ಕಿಚ್ಚ ಸುದೀಪ್​ ಹೇಳಿದ್ದಾರೆ.

ಇದನ್ನೂ ಓದಿ: ಸುದೀಪ್​ಗೆ ಬೆದರಿಕೆ ಪತ್ರ ಪ್ರಕರಣ: ಡೈರೆಕ್ಟರ್ ರಮೇಶ್ ಕಿಟ್ಟಿ ಬಂಧನ

‘ಮಗಳಿಗೆ ಮೊದಲ ಮತದಾನ. ಕೊಂಚ ನರ್ವಸ್​ ಆಗಿದ್ದಳು. ಏನು ಮಾಡಬೇಕು ಅಂತ ಕೇಳುತ್ತಲೇ ಇದ್ದಳು. ನಮ್ಮ ತಂದೆಯ ಬಳಿ ಚರ್ಚೆ ಮಾಡಿ ಒಂದಷ್ಟು ವಿಷಯ ತಿಳಿದುಕೊಂಡು ಆಕೆ ವೋಟ್​ ಮಾಡಿದ್ದಾಳೆ’ ಎಂದು ಸುದೀಪ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!