AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ‘ಉತ್ತರ ಕರ್ನಾಟಕದ ಜನರಿಗೆ ಬರೀ ನೀರು ಕೊಟ್ಟು ಸಮಾಧಾನ ಮಾಡಿದ್ದಾರೆ’: ಮತದಾನದ ಬಳಿಕ ಸುದೀಪ್​ ಪ್ರತಿಕ್ರಿಯೆ

Karnataka Assembly Elections 2023: ಕಿಚ್ಚ ಸುದೀಪ್​ ಅವರು ಜೆ.ಪಿ. ನಗರದ ಆಕ್ಸ್​ಫರ್ಡ್​ ಶಾಲೆಯಲ್ಲಿ ಮತದಾನ ಮಾಡಿದ್ದಾರೆ. ಪತ್ನಿ ಪ್ರಿಯಾ ಹಾಗೂ ಪುತ್ರಿ ಸಾನ್ವಿ ಜತೆ ಆಗಮಿಸಿದ ಅವರು ತಮ್ಮ ಮತ ಚಲಾಯಿಸಿದ್ದಾರೆ.

ಮದನ್​ ಕುಮಾರ್​
|

Updated on: May 10, 2023 | 4:17 PM

Share

ನಟ ಕಿಚ್ಚ ಸುದೀಪ್​ ಅವರು ಈ ಬಾರಿ ಚುನಾವಣಾ (Karnataka Assembly Elections 2023) ಕ್ಯಾಂಪೇನ್​ನಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದರು. ಹಲವು ಅಭ್ಯರ್ಥಿಗಳ ಪರವಾಗಿ ಅವರು ಪ್ರಚಾರ ಮಾಡಿದ್ದರು. ಇಂದು (ಮೇ 10) ಕುಟುಂಬದ ಸದಸ್ಯರ ಜೊತೆ ಬಂದು ಅವರು ಮತ ಚಲಾಯಿಸಿದ್ದಾರೆ. ಜೆ.ಪಿ.ನಗರದ ಆಕ್ಸ್​ಫರ್ಡ್​ ಶಾಲೆಯಲ್ಲಿ ಅವರು ಮತದಾನ ಮಾಡಿದ್ದಾರೆ. ಪತ್ನಿ ಪ್ರಿಯಾ ಹಾಗೂ ಪುತ್ರಿ ಸಾನ್ವಿ (Sanvi Sudeep) ಜತೆ ಆಗಮಿಸಿದ ಅವರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ, ಮತದಾನ ಜಾಗೃತಿ ಸಂದೇಶ ನೀಡಿದ್ದಾರೆ. ಸುದೀಪ್​ ಪುತ್ರಿ ಸಾನ್ವಿ ಅವರಿಗೆ ಇದು ಮೊದಲ ಮತದಾನ. ಹಾಗಾಗಿ ಅವರ ಪಾಲಿಗೆ ಈ ಬಾರಿಯ ಎಲೆಕ್ಷನ್​ ತುಂಬ ವಿಶೇಷ. ಮಗಳ ಬಗ್ಗೆ ಸುದೀಪ್​ (Kichcha Sudeep) ಮಾತಾಡಿದ್ದಾರೆ. ‘ನನ್ನ ಮಗಳು ಫಸ್ಟ್ ಟೈಮ್ ವೋಟ್ ಮಾಡಿದ್ದಾಳೆ. ದಾರಿಯುದ್ದಕ್ಕೂ ವಿಡಿಯೋ ಮಾಡ್ತಾ ಬಂದೆ. ಆಕೆ ಏನೇ ಮಾಡಿದ್ರೂ ಅದನ್ನು ವೀಡಿಯೋ ಮಾಡಿ ಸೆಲೆಬ್ರೇಟ್ ಮಾಡ್ತೀನಿ’ ಎಂದಿದ್ದಾರೆ ಸುದೀಪ್​.

‘ಕ್ಯಾಂಪೇನ್​ ವೇಳೆ ತುಂಬ ವಿಷಯ ಕಲಿತಿದ್ದೇನೆ. ಈಗ ಕೇವಲ ಶೇಕಡ 60ರಷ್ಟು ಮಾತ್ರ ಮತದಾನ ಆಗುತ್ತಿದೆ. ಒಳ್ಳೆಯದಾಗಬೇಕು ಎಂದರೆ ಎಲ್ಲರೂ ವೋಟ್​ ಹಾಕಬೇಕು. ಇಂದು ವೋಟ್​ ಮಾಡದೇ ಆಮೇಲೆ ಸೋಶಿಯಲ್​ ಮೀಡಿಯಾದಲ್ಲಿ ರಾಜಕೀಯ ನಾಯಕರಿಗೆ ಮತ್ತು ಸರ್ಕಾರಕ್ಕೆ ಬಯ್ಯೋದು ಸರಿಯಲ್ಲ. ಮತದಾನ ಮಾಡಿ ಅಂತ ಒತ್ತಾಯ ಮಾಡೋಕೆ ಆಗಲ್ಲ. ಪ್ರತಿಯೊಬ್ಬರು ತಮ್ಮ ಜವಾಬ್ದಾರಿ ಅರ್ಥ ಮಾಡಿಕೊಳ್ಳಬೇಕು’ ಎಂದು ಸುದೀಪ್​ ಹೇಳಿದ್ದಾರೆ.

ಬರೀ ನೀರು ಕೊಟ್ಟಿದ್ದಾರೆ!

‘ನಾನು ಕ್ಯಾಂಪೇನ್​ಗೆ ಹೋದಾದ ತುಂಬ ಸತ್ಯಗಳನ್ನು ನೋಡಿಕೊಂಡು ಬಂದಿದ್ದೇನೆ. ಆ ಸತ್ಯಗಳು ನನ್ನ ಜೊತೆ ಇರುತ್ತವೆ. ತುಂಬ ಊರುಗಳಲ್ಲಿ ಸಾಕಷ್ಟು ಕೊರತೆ ಇದೆ. ಉತ್ತರ ಕರ್ನಾಟಕದ ತುಂಬ ಕಡೆ ಜನಗಳಿಗೆ ಕೇವಲ ನೀರು ಕೊಟ್ಟು ಸಮಾಧಾನ ಮಾಡಿ ಬಿಟ್ಟಿದ್ದಾರೆ ಅನಿಸುತ್ತದೆ. ಆ ಊರುಗಳು ಇನ್ನೂ ಸಾಕಷ್ಟು ಹಿಂದೆ ಉಳಿದುಕೊಂಡಿವೆ. ಅವರಿಗೆಲ್ಲ ಒಂದು ಒಳ್ಳೆಯ ಜೀವನ ಸಿಗಬೇಕು ಎಂದರೆ ಎಲ್ಲರೂ ಚೆನ್ನಾಗಿ ಕೆಲಸ ಮಾಡಬೇಕು’ ಎಂದಿದ್ದಾರೆ ಸುದೀಪ್​.

ಇದನ್ನೂ ಓದಿ: Kichcha Sudeep: ರಾಜಕೀಯ ಪ್ರಚಾರದ ನಡುವೆಯೂ ಅಭಿಮಾನಿಗಳ ಪ್ರೀತಿ ಕಡೆಗೆ ಗಮನ ಹರಿಸಿದ ಸುದೀಪ್​

‘ನಾನು ಸ್ನೇಹಿತರಿಗಾಗಿ ಕ್ಯಾಂಪೇನ್​ ಮಾಡಿದ್ದೇನೆ. ಅವರಿಗೆಲ್ಲ ಒಳ್ಳೆಯದಾಗಬೇಕು. ಅದಕ್ಕಿಂತಲೂ ಹೆಚ್ಚಾಗಿ ಜನರಿಗೆ ಒಳ್ಳೆಯದಾಗಬೇಕು. ಜನರು ಅವರ ಆಯ್ಕೆಗಳನ್ನು ಚೆನ್ನಾಗಿ ಮಾಡುತ್ತಾರೆ ಎಂಬ ನಂಬಿಕೆ ನನಗಿದೆ’ ಎಂದು ಕಿಚ್ಚ ಸುದೀಪ್​ ಹೇಳಿದ್ದಾರೆ.

ಇದನ್ನೂ ಓದಿ: ಸುದೀಪ್​ಗೆ ಬೆದರಿಕೆ ಪತ್ರ ಪ್ರಕರಣ: ಡೈರೆಕ್ಟರ್ ರಮೇಶ್ ಕಿಟ್ಟಿ ಬಂಧನ

‘ಮಗಳಿಗೆ ಮೊದಲ ಮತದಾನ. ಕೊಂಚ ನರ್ವಸ್​ ಆಗಿದ್ದಳು. ಏನು ಮಾಡಬೇಕು ಅಂತ ಕೇಳುತ್ತಲೇ ಇದ್ದಳು. ನಮ್ಮ ತಂದೆಯ ಬಳಿ ಚರ್ಚೆ ಮಾಡಿ ಒಂದಷ್ಟು ವಿಷಯ ತಿಳಿದುಕೊಂಡು ಆಕೆ ವೋಟ್​ ಮಾಡಿದ್ದಾಳೆ’ ಎಂದು ಸುದೀಪ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ