AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್​’ ವೇದಿಕೆಗೆ ಹೇಗಿತ್ತು ಸುದೀಪ್ ಎಂಟ್ರಿ? ಇಲ್ಲಿದೆ ವಿಡಿಯೋ

ಶಿವರಾಜ್​ಕುಮಾರ್ ಅವರು ಈ ಬಾರಿ ‘ಡಿಕೆಡಿ 6’ಗೆ ಜಡ್ಜ್​ ಆಗಿರುವುದು ವಿಶೇಷ. ರಕ್ಷಿತಾ ಕೂಡ ಜಡ್ಜ್​ ಸ್ಥಾನದಲ್ಲಿ ಇದ್ದಾರೆ. ಈಗ ಇವರ ಜತೆ ಸುದೀಪ್ ಕೂಡ ಸೇರಿಕೊಂಡಿದ್ದಾರೆ.

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್​’ ವೇದಿಕೆಗೆ ಹೇಗಿತ್ತು ಸುದೀಪ್ ಎಂಟ್ರಿ? ಇಲ್ಲಿದೆ ವಿಡಿಯೋ
ಸುದೀಪ್
TV9 Web
| Edited By: |

Updated on: Jul 02, 2022 | 6:30 AM

Share

ಕಿಚ್ಚ ಸುದೀಪ್ (Kichcha Sudeep) ಅವರು ‘ವಿಕ್ರಾಂತ್​ ರೋಣ’ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ಬಗ್ಗೆ ಅವರಿಗೆ ದೊಡ್ಡ ಮಟ್ಟದಲ್ಲಿ ನಿರೀಕ್ಷೆ ಇದೆ. ಅವರು ಈ ಚಿತ್ರದ ಬಗ್ಗೆ ಹೆಚ್ಚು ಕಾಳಜಿ ತೋರುತ್ತಿದ್ದಾರೆ. ಈಗಾಗಲೇ ಪರ ಭಾಷೆಯಲ್ಲಿ ಒಂದು ಹಂತದ ಪ್ರಚಾರ ಕಾರ್ಯ ಪೂರ್ಣಗೊಂಡಿದೆ. ಈಗ ಕರ್ನಾಟಕದಲ್ಲಿ ಚಿತ್ರಕ್ಕೆ ಪ್ರಚಾರ ಮಾಡಲಾಗುತ್ತಿದೆ. ಸುದೀಪ್ (Sudeep) ಅವರು ಈ ಬಾರಿ ಜೀ ಕನ್ನಡದ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೀಸನ್ 6’ (Dance Karnataka Dance 6 ) ವೇದಿಕೆ ಏರಿದ್ದಾರೆ. ಶನಿವಾರ (ಜೂನ್ 2) ಹಾಗೂ ಭಾನುವಾರ (ಜೂನ್ 3) ಈ ಸಂಚಿಕೆ ಪ್ರಸಾರ ಆಗಲಿದೆ. ವೇದಿಕೆ ಮೇಲೆ ಸುದೀಪ್ ಎಂಟ್ರಿ ನೋಡಿ ಫ್ಯಾನ್ಸ್ ಖುಷಿಯಾಗಿದ್ದಾರೆ.

‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ 6’ ಅನೇಕ ಟ್ಯಾಲೆಂಟ್​ಗಳಿಗೆ ವೇದಿಕೆ ಆಗಿದೆ. ಸಾಕಷ್ಟು ಡ್ಯಾನ್ಸರ್​ಗಳು ಇಲ್ಲಿಗೆ ಆಗಮಿಸಿ ತಮ್ಮ ಕಲೆಯನ್ನು ತೋರಿಸಿದ್ದಾರೆ. ಹಲವು ಸಿನಿಮಾಗಳಲ್ಲಿ ಬ್ಯುಸಿ ಇರುವ ಶಿವರಾಜ್​ಕುಮಾರ್ ಅವರು ಈ ಬಾರಿ ‘ಡಿಕೆಡಿ 6’ಗೆ ಜಡ್ಜ್​ ಆಗಿರುವುದು ವಿಶೇಷ. ರಕ್ಷಿತಾ ಕೂಡ ಜಡ್ಜ್​ ಸ್ಥಾನದಲ್ಲಿ ಇದ್ದಾರೆ. ಈಗ ಇವರ ಜತೆ ಸುದೀಪ್ ಕೂಡ ಸೇರಿಕೊಂಡಿದ್ದಾರೆ.

ಇದನ್ನೂ ಓದಿ
Image
Kichcha Sudeep: ಕೇರಳದಲ್ಲಿ ‘ವಿಕ್ರಾಂತ್​ ರೋಣ’: ಕೊಚ್ಚಿಗೆ ತೆರಳಿದ ಕಿಚ್ಚ ಸುದೀಪ್​ಗೆ ಅಭಿಮಾನಿಗಳ ಆತ್ಮೀಯ ಸ್ವಾಗತ
Image
Vikrant Rona: ಮುಂಬೈನಲ್ಲಿ ಸುದೀಪ್​ ಜತೆ ರಕ್ಕಮ್ಮ ಜಾಕ್ವೆಲಿನ್​ ಫರ್ನಾಂಡಿಸ್​ ಮಿರಿಮಿರಿ ಮಿಂಚಿಂಗ್
Image
‘ವಿಕ್ರಾಂತ್​ ರೋಣ’ ರಿಲೀಸ್​ ಸಮಯದಲ್ಲಿ ಸುದೀಪ್​ಗೆ ಸ್ಟ್ರೆಸ್​ ಇದೆಯಾ? ನೇರ ಉತ್ತರ ನೀಡಿದ ಕಿಚ್ಚ
Image
Vikrant Rona: ಕಿಚ್ಚನ ‘ರಾ ರಾ ರಕ್ಕಮ್ಮ..’ ಹಾಡಿಗೆ ಹೆಜ್ಜೆ ಹಾಕಿದ ಬಾಲಿವುಡ್​ ಸ್ಟಾರ್​ ನಟ ರಿತೇಶ್​ ದೇಶಮುಖ್​

ಸುದೀಪ್ ಅವರು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಶೂಟಿಂಗ್​ಗೆ ಆಗಮಿಸಿರುವ ವಿಡಿಯೋವನ್ನು ಜೀ ಕನ್ನಡ ವಾಹಿನಿ ಹಂಚಿಕೊಂಡಿದೆ. ಜತೆಗೆ ಈ ಕಾರ್ಯಕ್ರಮದಲ್ಲಿ ಏನೆಲ್ಲ ಆಯ್ತು ಎನ್ನುವ ಸಣ್ಣ ಝಲಕ್ ನೀಡಲಾಗಿದೆ. ಸುದೀಪ್ ಆಗಮಿಸಿದ್ದ ಈ ಸಂಚಿಕೆಯಲ್ಲಿ ಸ್ಪರ್ಧಿಗಳು ಪವರ್​ಫುಲ್​ ಆಗಿ ಡ್ಯಾನ್ಸ್ ಮಾಡಿದ್ದಾರೆ. ಸ್ಪರ್ಧಿಗಳ ನೃತ್ಯ ನೋಡಿ ಸುದೀಪ್ ಅಚ್ಚರಿ ಹೊರಹಾಕಿದ್ದಾರೆ.

View this post on Instagram

A post shared by Zee Kannada (@zeekannada)

ಸುದೀಪ್ ಹಾಗೂ ಶಿವರಾಜ್​ಕುಮಾರ್ ಅವರು ಜೋಗಿ ಪ್ರೇಮ್ ನಿರ್ದೇಶನದ ‘ದಿ ವಿಲನ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಕಾರಣಕ್ಕೂ ಇವರ ನಡುವೆ ಒಳ್ಳೆಯ ಫ್ರೆಂಡ್​ಶಿಪ್ ಬೆಳೆದಿದೆ. ಈಗ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ 6’ ವೇದಿಕೆ ಮೇಲೆ ಸುದೀಪ್ ಹಾಗೂ ಶಿವರಾಜ್​ಕುಮಾರ್ ಒಟ್ಟಾಗಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ‘ವಿಕ್ರಾಂತ್ ರೋಣ’ ಸಿನಿಮಾದ ‘ರಾ ರಾ ರಕ್ಕಮ್ಮ’ ಹಾಡಿಗೆ ಶಿವಣ್ಣ ಹಾಗೂ ಸುದೀಪ್ ಡ್ಯಾನ್ಸ್ ಮಾಡಲಿ ಎಂದು ಫ್ಯಾನ್ಸ್​ ಆಶಿಸುತ್ತಿದ್ದಾರೆ.

View this post on Instagram

A post shared by Zee Kannada (@zeekannada)

‘ವಿಕ್ರಾಂತ್ ರೋಣ’ ಚಿತ್ರವನ್ನು ಜಾಕ್ ಮಂಜು ನಿರ್ಮಾಣ ಮಾಡಿದ್ದು ಅನೂಪ್ ಭಂಡಾರಿ ನಿರ್ದೇಶನ ಮಾಡಿದ್ದಾರೆ. ಬಾಲಿವುಡ್​ನ ಜಾಕ್ವೆಲಿನ್ ಫರ್ನಾಂಡಿಸ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: ‘ಯಾರಾದ್ರೂ ಬಿಟ್ಟು ಹೋದ್ರೆ ಹೋಗಲಿ, ಯಾವುದೋ ಒಂದು ಹೊಸದು ಆರಂಭವಾಗುತ್ತದೆ’: ಸುದೀಪ್

‘ವಿಕ್ರಾಂತ್ ರೋಣ’ ಸಿನಿಮಾ ಕಡೆಯಿಂದ ಸಿಕ್ತು ಮತ್ತೊಂದು ಅಪ್​ಡೇಟ್​; ಹೊಸ ಸಾಂಗ್ ರಿಲೀಸ್​ಗೆ ಡೇಟ್ ಫಿಕ್ಸ್

Follow Us
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು