AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಗೆ ಮತ್ತೊಂದಷ್ಟು ವೈಲ್ಡ್​ ಕಾರ್ಡ್​ ಎಂಟ್ರಿ; ಸುದೀಪ್​ ಕೊಟ್ರು ಸೂಚನೆ

ವಿಶ್ವ ಮತ್ತು ಮಂಜು ವೈಲ್ಡ್​ ಕಾರ್ಡ್​ ಎಂಟ್ರಿ ಬಗ್ಗೆ ಮಾತನಾಡಿದ್ದರು. ನಾವು ಹಾಯಾಗಿದ್ದೆವು. ಈಗ ವೈಲ್ಡ್​ ಕಾರ್ಡ್​ ಎಂಟ್ರಿ ಬೇಡವಾಗಿತ್ತು ಎಂದಿದ್ದರು.

ಬಿಗ್​ ಬಾಸ್​ ಮನೆಗೆ ಮತ್ತೊಂದಷ್ಟು ವೈಲ್ಡ್​ ಕಾರ್ಡ್​ ಎಂಟ್ರಿ; ಸುದೀಪ್​ ಕೊಟ್ರು ಸೂಚನೆ
ಕಿಚ್ಚ ಸುದೀಪ್​
ರಾಜೇಶ್ ದುಗ್ಗುಮನೆ
| Edited By: |

Updated on: Apr 04, 2021 | 7:07 AM

Share

ಬಿಗ್​ ಬಾಸ್ ಮನೆಯಲ್ಲಿ ಚಕ್ರವರ್ತಿ ಚಂದ್ರಚೂಡ್​ ಅವರ ಎಂಟ್ರಿ ಆಗಿದೆ. ಅವರು ಮನೆಗೆ ಬಂದಿದ್ದನ್ನು ನೋಡಿದ ಅನೇಕರು ಅಸಮಾಧಾನ ಹೊರ ಹಾಕಿದ್ದಾರೆ. ಅವರು ಬರಲೇಬಾರದಿತ್ತು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಈ ವಿಚಾರದ ಬಗ್ಗೆ ಸುದೀಪ್​ ಚರ್ಚೆ ಮಾಡಿದ್ದಾರೆ. ಅಷ್ಟೇ ಅಲ್ಲ, ವೈಲ್ಡ್​ ಕಾರ್ಡ್​ ಎಂಟ್ರಿ ಇದು ಆರಂಭವಷ್ಟೇ ಎನ್ನುವ ಸೂಚನೆ ನೀಡಿದ್ದಾರೆ. ಹಾಯಾಗಿದ್ದ 13 ಸ್ಪರ್ಧಿಗಳ ನಡುವೆ ಮತ್ತೋರ್ವನ ಎಂಟ್ರಿ ಆಗಿರುವುದು ಬಿಗ್​ ಬಾಸ್​ ಸ್ಪರ್ಧಿಗಳಿಗೆ ಬೇಸರ ಇದೆ. ಚಕ್ರವರ್ತಿ ಚಂದ್ರಚೂಡ ಬಿಗ್​ ಬಾಸ್​ ಮನೆ ಪ್ರವೇಶಿಸಿದ ಕೂಡಲೇ ಎಲ್ಲರ ಗಮನವನ್ನೂ ತಮ್ಮತ್ತ ಸೆಳೆಯುವ ಪ್ರಯತ್ನ ಮಾಡಿದ್ದರು. ಅಷ್ಟೇ ಅಲ್ಲ, ಎಲ್ಲರ ಹಿಡಿತ ತೆಗೆದುಕೊಳ್ಳುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಇದು ಅನೇಕರಿಗೆ ಇಷ್ಟವಾಗಿಲ್ಲ. ಹೀಗಾಗಿ, ವೈಲ್ಡ್​ ಕಾರ್ಡ್​ ಎಂಟ್ರಿಯೇ ಬೇಡವಾಗಿತ್ತು ಎನ್ನುವ ಚರ್ಚೆ ನಡೆತ್ತು.

ವಿಶ್ವ ಮತ್ತು ಮಂಜು ವೈಲ್ಡ್​ ಕಾರ್ಡ್​ ಎಂಟ್ರಿ ಬಗ್ಗೆ ಮಾತನಾಡಿದ್ದರು. ನಾವು ಹಾಯಾಗಿದ್ದೆವು. ಈಗ ವೈಲ್ಡ್​ ಕಾರ್ಡ್​ ಎಂಟ್ರಿ ಬೇಡವಾಗಿತ್ತು. ಚಕ್ರವರ್ತಿ ಎಂದಲ್ಲ, ಯಾರೂ ಮನೆಗೆ ಬರಬಾರದಿತ್ತು. ಇಷ್ಟು ದಿನ ನಾವು ಹಾಯಾಗಿದ್ದೆವು ಎಂದು ಹೇಳಿದ್ದರು.

ಈ ಬಗ್ಗೆ ಸುದೀಪ್​ ಮಾತನಾಡಿದ್ದು, ಏಕೆ ವೈಲ್ಡ್​ ಕಾರ್ಡ್​ ಎಂಟ್ರಿ ಇಷ್ಟವಾಗಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಸ್ಪರ್ಧಿಗಳು ಆಯಾ ಕಾರಣ ನೀಡಿದ್ದಾರೆ. ಆಗ ಸುದೀಪ್​, ಬಿಗ್​ ಬಾಸ್​ ಇದು ಆರಂಭ ಮಾತ್ರ ಎಂದಿದ್ದಾರೆ. ಈ ಮೂಲಕ ಅನೇಕರು ಬಿಗ್​ ಬಾಸ್​ ಮನೆಗೆ ಪ್ರವೇಶಿಸುತ್ತಾರೆ ಎನ್ನುವ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಐದನೇ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇ

ರಘುಗೆ ನೋವನ್ನೇ ಮಾರ್ಕೆಟಿಂಗ್ ತಂತ್ರ ಮಾಡ್ಕೊಂಡಿದ್ದಾನೆ; ನೊಂದ ಮನಸ್ಸಿಗೆ ಮತ್ತೊಂದಷ್ಟು ಘಾಸಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್