AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಗೆ ಮತ್ತೊಂದಷ್ಟು ವೈಲ್ಡ್​ ಕಾರ್ಡ್​ ಎಂಟ್ರಿ; ಸುದೀಪ್​ ಕೊಟ್ರು ಸೂಚನೆ

ವಿಶ್ವ ಮತ್ತು ಮಂಜು ವೈಲ್ಡ್​ ಕಾರ್ಡ್​ ಎಂಟ್ರಿ ಬಗ್ಗೆ ಮಾತನಾಡಿದ್ದರು. ನಾವು ಹಾಯಾಗಿದ್ದೆವು. ಈಗ ವೈಲ್ಡ್​ ಕಾರ್ಡ್​ ಎಂಟ್ರಿ ಬೇಡವಾಗಿತ್ತು ಎಂದಿದ್ದರು.

ಬಿಗ್​ ಬಾಸ್​ ಮನೆಗೆ ಮತ್ತೊಂದಷ್ಟು ವೈಲ್ಡ್​ ಕಾರ್ಡ್​ ಎಂಟ್ರಿ; ಸುದೀಪ್​ ಕೊಟ್ರು ಸೂಚನೆ
ಕಿಚ್ಚ ಸುದೀಪ್​
ರಾಜೇಶ್ ದುಗ್ಗುಮನೆ
| Edited By: |

Updated on: Apr 04, 2021 | 7:07 AM

Share

ಬಿಗ್​ ಬಾಸ್ ಮನೆಯಲ್ಲಿ ಚಕ್ರವರ್ತಿ ಚಂದ್ರಚೂಡ್​ ಅವರ ಎಂಟ್ರಿ ಆಗಿದೆ. ಅವರು ಮನೆಗೆ ಬಂದಿದ್ದನ್ನು ನೋಡಿದ ಅನೇಕರು ಅಸಮಾಧಾನ ಹೊರ ಹಾಕಿದ್ದಾರೆ. ಅವರು ಬರಲೇಬಾರದಿತ್ತು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಈ ವಿಚಾರದ ಬಗ್ಗೆ ಸುದೀಪ್​ ಚರ್ಚೆ ಮಾಡಿದ್ದಾರೆ. ಅಷ್ಟೇ ಅಲ್ಲ, ವೈಲ್ಡ್​ ಕಾರ್ಡ್​ ಎಂಟ್ರಿ ಇದು ಆರಂಭವಷ್ಟೇ ಎನ್ನುವ ಸೂಚನೆ ನೀಡಿದ್ದಾರೆ. ಹಾಯಾಗಿದ್ದ 13 ಸ್ಪರ್ಧಿಗಳ ನಡುವೆ ಮತ್ತೋರ್ವನ ಎಂಟ್ರಿ ಆಗಿರುವುದು ಬಿಗ್​ ಬಾಸ್​ ಸ್ಪರ್ಧಿಗಳಿಗೆ ಬೇಸರ ಇದೆ. ಚಕ್ರವರ್ತಿ ಚಂದ್ರಚೂಡ ಬಿಗ್​ ಬಾಸ್​ ಮನೆ ಪ್ರವೇಶಿಸಿದ ಕೂಡಲೇ ಎಲ್ಲರ ಗಮನವನ್ನೂ ತಮ್ಮತ್ತ ಸೆಳೆಯುವ ಪ್ರಯತ್ನ ಮಾಡಿದ್ದರು. ಅಷ್ಟೇ ಅಲ್ಲ, ಎಲ್ಲರ ಹಿಡಿತ ತೆಗೆದುಕೊಳ್ಳುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಇದು ಅನೇಕರಿಗೆ ಇಷ್ಟವಾಗಿಲ್ಲ. ಹೀಗಾಗಿ, ವೈಲ್ಡ್​ ಕಾರ್ಡ್​ ಎಂಟ್ರಿಯೇ ಬೇಡವಾಗಿತ್ತು ಎನ್ನುವ ಚರ್ಚೆ ನಡೆತ್ತು.

ವಿಶ್ವ ಮತ್ತು ಮಂಜು ವೈಲ್ಡ್​ ಕಾರ್ಡ್​ ಎಂಟ್ರಿ ಬಗ್ಗೆ ಮಾತನಾಡಿದ್ದರು. ನಾವು ಹಾಯಾಗಿದ್ದೆವು. ಈಗ ವೈಲ್ಡ್​ ಕಾರ್ಡ್​ ಎಂಟ್ರಿ ಬೇಡವಾಗಿತ್ತು. ಚಕ್ರವರ್ತಿ ಎಂದಲ್ಲ, ಯಾರೂ ಮನೆಗೆ ಬರಬಾರದಿತ್ತು. ಇಷ್ಟು ದಿನ ನಾವು ಹಾಯಾಗಿದ್ದೆವು ಎಂದು ಹೇಳಿದ್ದರು.

ಈ ಬಗ್ಗೆ ಸುದೀಪ್​ ಮಾತನಾಡಿದ್ದು, ಏಕೆ ವೈಲ್ಡ್​ ಕಾರ್ಡ್​ ಎಂಟ್ರಿ ಇಷ್ಟವಾಗಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಸ್ಪರ್ಧಿಗಳು ಆಯಾ ಕಾರಣ ನೀಡಿದ್ದಾರೆ. ಆಗ ಸುದೀಪ್​, ಬಿಗ್​ ಬಾಸ್​ ಇದು ಆರಂಭ ಮಾತ್ರ ಎಂದಿದ್ದಾರೆ. ಈ ಮೂಲಕ ಅನೇಕರು ಬಿಗ್​ ಬಾಸ್​ ಮನೆಗೆ ಪ್ರವೇಶಿಸುತ್ತಾರೆ ಎನ್ನುವ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಐದನೇ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇ

ರಘುಗೆ ನೋವನ್ನೇ ಮಾರ್ಕೆಟಿಂಗ್ ತಂತ್ರ ಮಾಡ್ಕೊಂಡಿದ್ದಾನೆ; ನೊಂದ ಮನಸ್ಸಿಗೆ ಮತ್ತೊಂದಷ್ಟು ಘಾಸಿ

Follow Us
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು