ಬಿಗ್​ ಬಾಸ್​ ಮನೆಗೆ ಮತ್ತೊಂದಷ್ಟು ವೈಲ್ಡ್​ ಕಾರ್ಡ್​ ಎಂಟ್ರಿ; ಸುದೀಪ್​ ಕೊಟ್ರು ಸೂಚನೆ

ವಿಶ್ವ ಮತ್ತು ಮಂಜು ವೈಲ್ಡ್​ ಕಾರ್ಡ್​ ಎಂಟ್ರಿ ಬಗ್ಗೆ ಮಾತನಾಡಿದ್ದರು. ನಾವು ಹಾಯಾಗಿದ್ದೆವು. ಈಗ ವೈಲ್ಡ್​ ಕಾರ್ಡ್​ ಎಂಟ್ರಿ ಬೇಡವಾಗಿತ್ತು ಎಂದಿದ್ದರು.

ಬಿಗ್​ ಬಾಸ್​ ಮನೆಗೆ ಮತ್ತೊಂದಷ್ಟು ವೈಲ್ಡ್​ ಕಾರ್ಡ್​ ಎಂಟ್ರಿ; ಸುದೀಪ್​ ಕೊಟ್ರು ಸೂಚನೆ
ಕಿಚ್ಚ ಸುದೀಪ್​
Follow us
| Updated By: Skanda

Updated on: Apr 04, 2021 | 7:07 AM

ಬಿಗ್​ ಬಾಸ್ ಮನೆಯಲ್ಲಿ ಚಕ್ರವರ್ತಿ ಚಂದ್ರಚೂಡ್​ ಅವರ ಎಂಟ್ರಿ ಆಗಿದೆ. ಅವರು ಮನೆಗೆ ಬಂದಿದ್ದನ್ನು ನೋಡಿದ ಅನೇಕರು ಅಸಮಾಧಾನ ಹೊರ ಹಾಕಿದ್ದಾರೆ. ಅವರು ಬರಲೇಬಾರದಿತ್ತು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಈ ವಿಚಾರದ ಬಗ್ಗೆ ಸುದೀಪ್​ ಚರ್ಚೆ ಮಾಡಿದ್ದಾರೆ. ಅಷ್ಟೇ ಅಲ್ಲ, ವೈಲ್ಡ್​ ಕಾರ್ಡ್​ ಎಂಟ್ರಿ ಇದು ಆರಂಭವಷ್ಟೇ ಎನ್ನುವ ಸೂಚನೆ ನೀಡಿದ್ದಾರೆ. ಹಾಯಾಗಿದ್ದ 13 ಸ್ಪರ್ಧಿಗಳ ನಡುವೆ ಮತ್ತೋರ್ವನ ಎಂಟ್ರಿ ಆಗಿರುವುದು ಬಿಗ್​ ಬಾಸ್​ ಸ್ಪರ್ಧಿಗಳಿಗೆ ಬೇಸರ ಇದೆ. ಚಕ್ರವರ್ತಿ ಚಂದ್ರಚೂಡ ಬಿಗ್​ ಬಾಸ್​ ಮನೆ ಪ್ರವೇಶಿಸಿದ ಕೂಡಲೇ ಎಲ್ಲರ ಗಮನವನ್ನೂ ತಮ್ಮತ್ತ ಸೆಳೆಯುವ ಪ್ರಯತ್ನ ಮಾಡಿದ್ದರು. ಅಷ್ಟೇ ಅಲ್ಲ, ಎಲ್ಲರ ಹಿಡಿತ ತೆಗೆದುಕೊಳ್ಳುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಇದು ಅನೇಕರಿಗೆ ಇಷ್ಟವಾಗಿಲ್ಲ. ಹೀಗಾಗಿ, ವೈಲ್ಡ್​ ಕಾರ್ಡ್​ ಎಂಟ್ರಿಯೇ ಬೇಡವಾಗಿತ್ತು ಎನ್ನುವ ಚರ್ಚೆ ನಡೆತ್ತು.

ವಿಶ್ವ ಮತ್ತು ಮಂಜು ವೈಲ್ಡ್​ ಕಾರ್ಡ್​ ಎಂಟ್ರಿ ಬಗ್ಗೆ ಮಾತನಾಡಿದ್ದರು. ನಾವು ಹಾಯಾಗಿದ್ದೆವು. ಈಗ ವೈಲ್ಡ್​ ಕಾರ್ಡ್​ ಎಂಟ್ರಿ ಬೇಡವಾಗಿತ್ತು. ಚಕ್ರವರ್ತಿ ಎಂದಲ್ಲ, ಯಾರೂ ಮನೆಗೆ ಬರಬಾರದಿತ್ತು. ಇಷ್ಟು ದಿನ ನಾವು ಹಾಯಾಗಿದ್ದೆವು ಎಂದು ಹೇಳಿದ್ದರು.

ಈ ಬಗ್ಗೆ ಸುದೀಪ್​ ಮಾತನಾಡಿದ್ದು, ಏಕೆ ವೈಲ್ಡ್​ ಕಾರ್ಡ್​ ಎಂಟ್ರಿ ಇಷ್ಟವಾಗಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಸ್ಪರ್ಧಿಗಳು ಆಯಾ ಕಾರಣ ನೀಡಿದ್ದಾರೆ. ಆಗ ಸುದೀಪ್​, ಬಿಗ್​ ಬಾಸ್​ ಇದು ಆರಂಭ ಮಾತ್ರ ಎಂದಿದ್ದಾರೆ. ಈ ಮೂಲಕ ಅನೇಕರು ಬಿಗ್​ ಬಾಸ್​ ಮನೆಗೆ ಪ್ರವೇಶಿಸುತ್ತಾರೆ ಎನ್ನುವ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಐದನೇ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇ

ರಘುಗೆ ನೋವನ್ನೇ ಮಾರ್ಕೆಟಿಂಗ್ ತಂತ್ರ ಮಾಡ್ಕೊಂಡಿದ್ದಾನೆ; ನೊಂದ ಮನಸ್ಸಿಗೆ ಮತ್ತೊಂದಷ್ಟು ಘಾಸಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ