Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರನೇ ವಾರ ಬಿಗ್​ ಬಾಸ್​ ಮನೆಯಿಂದ ಇಬ್ಬರು ಎಲಿಮಿನೇಟ್​!

ಈ ವಾರ ಶಮಂತ್​ ಬ್ರೋ ಗೌಡ, ಅರವಿಂದ್ ಕೆ.ಪಿ, ಪ್ರಶಾಂತ್​ ಸಂಬರಗಿ, ದಿವ್ಯಾ ಸುರೇಶ್​, ಶುಭಾ ಪೂಂಜಾ, ನಿಧಿ ಸುಬ್ಬಯ್ಯ, ರಾಜೀವ್​ ಎಲಿಮಿನೇಷನ್​ಗೆ ನಾಮಿನೇಟ್​ ಆಗಿದ್ದರು. ಈ ಪೈಕಿ ನಿಧಿ ಸುಬ್ಬಯ್ಯ ಹಾಗೂ ಅರವಿಂದ್​ ಸೇಫ್​ ಆಗಿದ್ದಾರೆ ಎಂದು ಸುದೀಪ್​ ಘೋಷಣೆ ಮಾಡಿದರು.

ಆರನೇ ವಾರ ಬಿಗ್​ ಬಾಸ್​ ಮನೆಯಿಂದ ಇಬ್ಬರು ಎಲಿಮಿನೇಟ್​!
ಬಿಗ್ ಬಾಸ್ ಕನ್ನಡ ಸೀಸನ್​ 8
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: Apr 11, 2021 | 7:11 AM

ಬಿಗ್​ ಬಾಸ್​ ಮನೆಯಲ್ಲಿರುವ ಸ್ಪರ್ಧಿಗಳು ಐದು ವಾರ ಪೂರ್ಣಗೊಳಿಸಿ ಆರನೇ ವಾರಕ್ಕೆ ಕಾಲಿಟ್ಟಿದ್ದಾರೆ. ಪ್ರತಿ ವಾರ ಒಂದೊಂದೇ ಸ್ಪರ್ಧಿಗಳು ಮನೆಯಿಂದ ಹೊರ ಹೋಗುತ್ತಿದ್ದಾರೆ. ಆದರೆ, ಈ ವಾರ ಬಿಗ್​ ಬಾಸ್​ ಮನೆಯಲ್ಲಿ ಇಬ್ಬರು ಸ್ಪರ್ಧಿಗಳು ಎಲಿಮಿನೇಟ್​ ಆಗಲಿದ್ದಾರಂತೆ. ಇದನ್ನು ನಾವು ಹೇಳುತ್ತಿಲ್ಲ. ಸ್ವತಃ ಕಿಚ್ಚು ಸುದೀಪ್​ ಹೇಳಿದ್ದಾರೆ. ಈ ವಾರ ಬಿಗ್​ ಬಾಸ್ ಮನೆಗೆ ಇಬ್ಬರ ವೈಲ್ಡ್​ ಕಾರ್ಡ್​ ಎಂಟ್ರಿ ಆಗಿದೆ. ಒಂದೇ ವಾರ ಇಬ್ಬರು ವೈಲ್ಡ್​ ಕಾರ್ಡ್​ ಎಂಟ್ರಿ ಆಗಿರೋದು ಸಾಕಷ್ಟು ಅಚ್ಚರಿ ಮೂಡಿಸಿದೆ. ಈ ಬಗ್ಗೆ ಶುಭಾ ಕೂಡ ಮಾತನಾಡಿದ್ದರು. ಇಬ್ಬರು ಮನೆ ಒಳಗೆ ಬಂದಿದ್ದಾರೆ ಎಂದರೆ ಇಬ್ಬರು ಬಿಗ್​ ಬಾಸ್​ ಮನೆಯಿಂದ ಹೊರ ಹೋಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು. ಇದನ್ನು ಕೇಳಿ ದಿವ್ಯಾ ಹಾಗೂ ನಿಧಿ ಭಯಗೊಂಡಿದ್ದರು. ಈ ವಿಚಾರ ವೀಕೆಂಡ್​ನಲ್ಲಿ ಚರ್ಚೆಗೆ ಬಂದಿದೆ. ಅಷ್ಟೇ ಅಲ್ಲ, ಶನಿವಾರದ ( ಮಾರ್ಚ್​ 10) ಎಪಿಸೋಡ್​ ಕೊನೆಯಲ್ಲಿ ಸುದೀಪ್​ ಇದಕ್ಕೆ ಟ್ವಿಸ್ಟ್​ ನೀಡಿದ್ದಾರೆ.

ಈ ವಾರ ಶಮಂತ್​ ಬ್ರೋ ಗೌಡ, ಅರವಿಂದ್ ಕೆ.ಪಿ, ಪ್ರಶಾಂತ್​ ಸಂಬರಗಿ, ದಿವ್ಯಾ ಸುರೇಶ್​, ಶುಭಾ ಪೂಂಜಾ, ನಿಧಿ ಸುಬ್ಬಯ್ಯ, ರಾಜೀವ್​ ಎಲಿಮಿನೇಷನ್​ಗೆ ನಾಮಿನೇಟ್​ ಆಗಿದ್ದರು. ಈ ಪೈಕಿ ನಿಧಿ ಸುಬ್ಬಯ್ಯ ಹಾಗೂ ಅರವಿಂದ್​ ಸೇಫ್​ ಆಗಿದ್ದಾರೆ ಎಂದು ಸುದೀಪ್​ ಘೋಷಣೆ ಮಾಡಿದರು.

ಈಗ ಉಳಿದುಕೊಂಡಿರೋರು ಶಮಂತ್​ ಬ್ರೋ ಗೌಡ, ರಾಜೀವ್​, ಪ್ರಶಾಂತ್​ ಸಂಬರಗಿ, ದಿವ್ಯಾ ಸುರೇಶ್​, ಶುಭಾ ಪೂಂಜಾ ಇವರಲ್ಲಿ ಒಬ್ಬರು ಮನೆಯಿಂದ ಹೊರ ಹೋಗಬೇಕು. ಆದರೆ, ಈ ವಾರ ಮನೆಯಿಂದ ಒಬ್ಬರು ಹೋಗ್ತಾರೋ ಅಥವಾ ಇಬ್ಬರು ಹೋಗ್ತಾರೋ ಎಂದು ಹೇಳೋಕೆ ಆಗಲ್ಲ. ಇದಕ್ಕೆ ನಾಳೆ ಉತ್ತರ ಸಿಗಲಿದೆ ಎಂದಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಇಬ್ಬರು ಎಲಿಮಿನೇಟ್​ ಆಗುವ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಇಷ್ಟು ಸುಂದರವಾಗಿರುವ ನಾನು ನಿನ್ನ ಹಿಂದೆ ಯಾಕೆ ಬಿದ್ದೆ? ಮಂಜು ಬಗ್ಗೆ ದಿವ್ಯಾ ಮನದಲ್ಲಿ ಹೊಸ ಪ್ರಶ್ನೆ!

ಅನ್ನಕ್ಕೆ ವಿಷ ಹಾಕಿ ತಂದೆಯೇ ನನ್ನನ್ನು ಮುಗಿಸಲು ಹೊರಟಿದ್ದರು; ಬಿಗ್​ ಬಾಸ್ ಮನೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ದಿವ್ಯಾ

ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ
ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್
ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್
ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ಕೇವಲ ಅಧಿಕಾರದ ತೆವಲು: ಗೋವಿಂದು
ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ಕೇವಲ ಅಧಿಕಾರದ ತೆವಲು: ಗೋವಿಂದು