AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರನೇ ವಾರ ಬಿಗ್​ ಬಾಸ್​ ಮನೆಯಿಂದ ಇಬ್ಬರು ಎಲಿಮಿನೇಟ್​!

ಈ ವಾರ ಶಮಂತ್​ ಬ್ರೋ ಗೌಡ, ಅರವಿಂದ್ ಕೆ.ಪಿ, ಪ್ರಶಾಂತ್​ ಸಂಬರಗಿ, ದಿವ್ಯಾ ಸುರೇಶ್​, ಶುಭಾ ಪೂಂಜಾ, ನಿಧಿ ಸುಬ್ಬಯ್ಯ, ರಾಜೀವ್​ ಎಲಿಮಿನೇಷನ್​ಗೆ ನಾಮಿನೇಟ್​ ಆಗಿದ್ದರು. ಈ ಪೈಕಿ ನಿಧಿ ಸುಬ್ಬಯ್ಯ ಹಾಗೂ ಅರವಿಂದ್​ ಸೇಫ್​ ಆಗಿದ್ದಾರೆ ಎಂದು ಸುದೀಪ್​ ಘೋಷಣೆ ಮಾಡಿದರು.

ಆರನೇ ವಾರ ಬಿಗ್​ ಬಾಸ್​ ಮನೆಯಿಂದ ಇಬ್ಬರು ಎಲಿಮಿನೇಟ್​!
ಬಿಗ್ ಬಾಸ್ ಕನ್ನಡ ಸೀಸನ್​ 8
ರಾಜೇಶ್ ದುಗ್ಗುಮನೆ
| Edited By: |

Updated on: Apr 11, 2021 | 7:11 AM

Share

ಬಿಗ್​ ಬಾಸ್​ ಮನೆಯಲ್ಲಿರುವ ಸ್ಪರ್ಧಿಗಳು ಐದು ವಾರ ಪೂರ್ಣಗೊಳಿಸಿ ಆರನೇ ವಾರಕ್ಕೆ ಕಾಲಿಟ್ಟಿದ್ದಾರೆ. ಪ್ರತಿ ವಾರ ಒಂದೊಂದೇ ಸ್ಪರ್ಧಿಗಳು ಮನೆಯಿಂದ ಹೊರ ಹೋಗುತ್ತಿದ್ದಾರೆ. ಆದರೆ, ಈ ವಾರ ಬಿಗ್​ ಬಾಸ್​ ಮನೆಯಲ್ಲಿ ಇಬ್ಬರು ಸ್ಪರ್ಧಿಗಳು ಎಲಿಮಿನೇಟ್​ ಆಗಲಿದ್ದಾರಂತೆ. ಇದನ್ನು ನಾವು ಹೇಳುತ್ತಿಲ್ಲ. ಸ್ವತಃ ಕಿಚ್ಚು ಸುದೀಪ್​ ಹೇಳಿದ್ದಾರೆ. ಈ ವಾರ ಬಿಗ್​ ಬಾಸ್ ಮನೆಗೆ ಇಬ್ಬರ ವೈಲ್ಡ್​ ಕಾರ್ಡ್​ ಎಂಟ್ರಿ ಆಗಿದೆ. ಒಂದೇ ವಾರ ಇಬ್ಬರು ವೈಲ್ಡ್​ ಕಾರ್ಡ್​ ಎಂಟ್ರಿ ಆಗಿರೋದು ಸಾಕಷ್ಟು ಅಚ್ಚರಿ ಮೂಡಿಸಿದೆ. ಈ ಬಗ್ಗೆ ಶುಭಾ ಕೂಡ ಮಾತನಾಡಿದ್ದರು. ಇಬ್ಬರು ಮನೆ ಒಳಗೆ ಬಂದಿದ್ದಾರೆ ಎಂದರೆ ಇಬ್ಬರು ಬಿಗ್​ ಬಾಸ್​ ಮನೆಯಿಂದ ಹೊರ ಹೋಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು. ಇದನ್ನು ಕೇಳಿ ದಿವ್ಯಾ ಹಾಗೂ ನಿಧಿ ಭಯಗೊಂಡಿದ್ದರು. ಈ ವಿಚಾರ ವೀಕೆಂಡ್​ನಲ್ಲಿ ಚರ್ಚೆಗೆ ಬಂದಿದೆ. ಅಷ್ಟೇ ಅಲ್ಲ, ಶನಿವಾರದ ( ಮಾರ್ಚ್​ 10) ಎಪಿಸೋಡ್​ ಕೊನೆಯಲ್ಲಿ ಸುದೀಪ್​ ಇದಕ್ಕೆ ಟ್ವಿಸ್ಟ್​ ನೀಡಿದ್ದಾರೆ.

ಈ ವಾರ ಶಮಂತ್​ ಬ್ರೋ ಗೌಡ, ಅರವಿಂದ್ ಕೆ.ಪಿ, ಪ್ರಶಾಂತ್​ ಸಂಬರಗಿ, ದಿವ್ಯಾ ಸುರೇಶ್​, ಶುಭಾ ಪೂಂಜಾ, ನಿಧಿ ಸುಬ್ಬಯ್ಯ, ರಾಜೀವ್​ ಎಲಿಮಿನೇಷನ್​ಗೆ ನಾಮಿನೇಟ್​ ಆಗಿದ್ದರು. ಈ ಪೈಕಿ ನಿಧಿ ಸುಬ್ಬಯ್ಯ ಹಾಗೂ ಅರವಿಂದ್​ ಸೇಫ್​ ಆಗಿದ್ದಾರೆ ಎಂದು ಸುದೀಪ್​ ಘೋಷಣೆ ಮಾಡಿದರು.

ಈಗ ಉಳಿದುಕೊಂಡಿರೋರು ಶಮಂತ್​ ಬ್ರೋ ಗೌಡ, ರಾಜೀವ್​, ಪ್ರಶಾಂತ್​ ಸಂಬರಗಿ, ದಿವ್ಯಾ ಸುರೇಶ್​, ಶುಭಾ ಪೂಂಜಾ ಇವರಲ್ಲಿ ಒಬ್ಬರು ಮನೆಯಿಂದ ಹೊರ ಹೋಗಬೇಕು. ಆದರೆ, ಈ ವಾರ ಮನೆಯಿಂದ ಒಬ್ಬರು ಹೋಗ್ತಾರೋ ಅಥವಾ ಇಬ್ಬರು ಹೋಗ್ತಾರೋ ಎಂದು ಹೇಳೋಕೆ ಆಗಲ್ಲ. ಇದಕ್ಕೆ ನಾಳೆ ಉತ್ತರ ಸಿಗಲಿದೆ ಎಂದಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಇಬ್ಬರು ಎಲಿಮಿನೇಟ್​ ಆಗುವ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಇಷ್ಟು ಸುಂದರವಾಗಿರುವ ನಾನು ನಿನ್ನ ಹಿಂದೆ ಯಾಕೆ ಬಿದ್ದೆ? ಮಂಜು ಬಗ್ಗೆ ದಿವ್ಯಾ ಮನದಲ್ಲಿ ಹೊಸ ಪ್ರಶ್ನೆ!

ಅನ್ನಕ್ಕೆ ವಿಷ ಹಾಕಿ ತಂದೆಯೇ ನನ್ನನ್ನು ಮುಗಿಸಲು ಹೊರಟಿದ್ದರು; ಬಿಗ್​ ಬಾಸ್ ಮನೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ದಿವ್ಯಾ

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ