AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರನೇ ವಾರ ಬಿಗ್​ ಬಾಸ್​ ಮನೆಯಿಂದ ಇಬ್ಬರು ಎಲಿಮಿನೇಟ್​!

ಈ ವಾರ ಶಮಂತ್​ ಬ್ರೋ ಗೌಡ, ಅರವಿಂದ್ ಕೆ.ಪಿ, ಪ್ರಶಾಂತ್​ ಸಂಬರಗಿ, ದಿವ್ಯಾ ಸುರೇಶ್​, ಶುಭಾ ಪೂಂಜಾ, ನಿಧಿ ಸುಬ್ಬಯ್ಯ, ರಾಜೀವ್​ ಎಲಿಮಿನೇಷನ್​ಗೆ ನಾಮಿನೇಟ್​ ಆಗಿದ್ದರು. ಈ ಪೈಕಿ ನಿಧಿ ಸುಬ್ಬಯ್ಯ ಹಾಗೂ ಅರವಿಂದ್​ ಸೇಫ್​ ಆಗಿದ್ದಾರೆ ಎಂದು ಸುದೀಪ್​ ಘೋಷಣೆ ಮಾಡಿದರು.

ಆರನೇ ವಾರ ಬಿಗ್​ ಬಾಸ್​ ಮನೆಯಿಂದ ಇಬ್ಬರು ಎಲಿಮಿನೇಟ್​!
ಬಿಗ್ ಬಾಸ್ ಕನ್ನಡ ಸೀಸನ್​ 8
ರಾಜೇಶ್ ದುಗ್ಗುಮನೆ
| Edited By: |

Updated on: Apr 11, 2021 | 7:11 AM

Share

ಬಿಗ್​ ಬಾಸ್​ ಮನೆಯಲ್ಲಿರುವ ಸ್ಪರ್ಧಿಗಳು ಐದು ವಾರ ಪೂರ್ಣಗೊಳಿಸಿ ಆರನೇ ವಾರಕ್ಕೆ ಕಾಲಿಟ್ಟಿದ್ದಾರೆ. ಪ್ರತಿ ವಾರ ಒಂದೊಂದೇ ಸ್ಪರ್ಧಿಗಳು ಮನೆಯಿಂದ ಹೊರ ಹೋಗುತ್ತಿದ್ದಾರೆ. ಆದರೆ, ಈ ವಾರ ಬಿಗ್​ ಬಾಸ್​ ಮನೆಯಲ್ಲಿ ಇಬ್ಬರು ಸ್ಪರ್ಧಿಗಳು ಎಲಿಮಿನೇಟ್​ ಆಗಲಿದ್ದಾರಂತೆ. ಇದನ್ನು ನಾವು ಹೇಳುತ್ತಿಲ್ಲ. ಸ್ವತಃ ಕಿಚ್ಚು ಸುದೀಪ್​ ಹೇಳಿದ್ದಾರೆ. ಈ ವಾರ ಬಿಗ್​ ಬಾಸ್ ಮನೆಗೆ ಇಬ್ಬರ ವೈಲ್ಡ್​ ಕಾರ್ಡ್​ ಎಂಟ್ರಿ ಆಗಿದೆ. ಒಂದೇ ವಾರ ಇಬ್ಬರು ವೈಲ್ಡ್​ ಕಾರ್ಡ್​ ಎಂಟ್ರಿ ಆಗಿರೋದು ಸಾಕಷ್ಟು ಅಚ್ಚರಿ ಮೂಡಿಸಿದೆ. ಈ ಬಗ್ಗೆ ಶುಭಾ ಕೂಡ ಮಾತನಾಡಿದ್ದರು. ಇಬ್ಬರು ಮನೆ ಒಳಗೆ ಬಂದಿದ್ದಾರೆ ಎಂದರೆ ಇಬ್ಬರು ಬಿಗ್​ ಬಾಸ್​ ಮನೆಯಿಂದ ಹೊರ ಹೋಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು. ಇದನ್ನು ಕೇಳಿ ದಿವ್ಯಾ ಹಾಗೂ ನಿಧಿ ಭಯಗೊಂಡಿದ್ದರು. ಈ ವಿಚಾರ ವೀಕೆಂಡ್​ನಲ್ಲಿ ಚರ್ಚೆಗೆ ಬಂದಿದೆ. ಅಷ್ಟೇ ಅಲ್ಲ, ಶನಿವಾರದ ( ಮಾರ್ಚ್​ 10) ಎಪಿಸೋಡ್​ ಕೊನೆಯಲ್ಲಿ ಸುದೀಪ್​ ಇದಕ್ಕೆ ಟ್ವಿಸ್ಟ್​ ನೀಡಿದ್ದಾರೆ.

ಈ ವಾರ ಶಮಂತ್​ ಬ್ರೋ ಗೌಡ, ಅರವಿಂದ್ ಕೆ.ಪಿ, ಪ್ರಶಾಂತ್​ ಸಂಬರಗಿ, ದಿವ್ಯಾ ಸುರೇಶ್​, ಶುಭಾ ಪೂಂಜಾ, ನಿಧಿ ಸುಬ್ಬಯ್ಯ, ರಾಜೀವ್​ ಎಲಿಮಿನೇಷನ್​ಗೆ ನಾಮಿನೇಟ್​ ಆಗಿದ್ದರು. ಈ ಪೈಕಿ ನಿಧಿ ಸುಬ್ಬಯ್ಯ ಹಾಗೂ ಅರವಿಂದ್​ ಸೇಫ್​ ಆಗಿದ್ದಾರೆ ಎಂದು ಸುದೀಪ್​ ಘೋಷಣೆ ಮಾಡಿದರು.

ಈಗ ಉಳಿದುಕೊಂಡಿರೋರು ಶಮಂತ್​ ಬ್ರೋ ಗೌಡ, ರಾಜೀವ್​, ಪ್ರಶಾಂತ್​ ಸಂಬರಗಿ, ದಿವ್ಯಾ ಸುರೇಶ್​, ಶುಭಾ ಪೂಂಜಾ ಇವರಲ್ಲಿ ಒಬ್ಬರು ಮನೆಯಿಂದ ಹೊರ ಹೋಗಬೇಕು. ಆದರೆ, ಈ ವಾರ ಮನೆಯಿಂದ ಒಬ್ಬರು ಹೋಗ್ತಾರೋ ಅಥವಾ ಇಬ್ಬರು ಹೋಗ್ತಾರೋ ಎಂದು ಹೇಳೋಕೆ ಆಗಲ್ಲ. ಇದಕ್ಕೆ ನಾಳೆ ಉತ್ತರ ಸಿಗಲಿದೆ ಎಂದಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಇಬ್ಬರು ಎಲಿಮಿನೇಟ್​ ಆಗುವ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಇಷ್ಟು ಸುಂದರವಾಗಿರುವ ನಾನು ನಿನ್ನ ಹಿಂದೆ ಯಾಕೆ ಬಿದ್ದೆ? ಮಂಜು ಬಗ್ಗೆ ದಿವ್ಯಾ ಮನದಲ್ಲಿ ಹೊಸ ಪ್ರಶ್ನೆ!

ಅನ್ನಕ್ಕೆ ವಿಷ ಹಾಕಿ ತಂದೆಯೇ ನನ್ನನ್ನು ಮುಗಿಸಲು ಹೊರಟಿದ್ದರು; ಬಿಗ್​ ಬಾಸ್ ಮನೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ದಿವ್ಯಾ

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ