AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SS Rajamouli : ರಾಜಮೌಳಿ ಜೊತೆ ಸೇರಿ ಕೆಲಸ ಮಾಡಿ ಗೆದ್ದ ಹೀರೋಗಳು ಇವರೇ ನೋಡಿ..

ರಾಜಮೌಳಿ ಜೊತೆ ಕೆಲಸ ಮಾಡಿದ ಅನೇಕ ಹೀರೋಗಳ ವೃತ್ತಿ ಜೀವನಕ್ಕೆ ಮೈಲೇಜ್​ ಸಿಕ್ಕಿದೆ. ನಿರ್ಮಾಪಕರು ಕೂಡ ದೊಡ್ಡ ಲಾಭ ಕಂಡಿದ್ದಾರೆ. ರಾಜಮೌಳಿ ಜೊತೆ ಕೆಲಸ ಮಾಡಿ ಗೆದ್ದ ಹೀರೋಗಳ ಪಟ್ಟಿ ಇಲ್ಲಿದೆ.  

SS Rajamouli : ರಾಜಮೌಳಿ ಜೊತೆ ಸೇರಿ ಕೆಲಸ ಮಾಡಿ ಗೆದ್ದ ಹೀರೋಗಳು ಇವರೇ ನೋಡಿ..
ರಾಜಮೌಳಿ ಜೊತೆ ಸೇರಿ ಕೆಲಸ ಮಾಡಿ ಗೆದ್ದ ಹೀರೋಗಳು
ರಾಜೇಶ್ ದುಗ್ಗುಮನೆ
|

Updated on: Apr 28, 2023 | 7:44 AM

Share

ಭಾರತೀಯ ಚಿತ್ರರಂಗದಲ್ಲಿ ಎಸ್​ಎಸ್​ ರಾಜಮೌಳಿ (SS Rajamouli) ಅವರದ್ದು ದೊಡ್ಡ ಹೆಸರು. ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ‘ಆರ್​ಆರ್​ಆರ್​’ ಚಿತ್ರದ (RRR Movie) ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದ ಬಳಿಕ ರಾಜಮೌಳಿ ಅವರಿಗೆ ಬೇಡಿಕೆ ಹೆಚ್ಚಿದೆ. ಅವರ ಜೊತೆ ಕೆಲಸ ಮಾಡಿದ ಅನೇಕ ಹೀರೋಗಳ ವೃತ್ತಿ ಜೀವನಕ್ಕೆ ಮೈಲೇಜ್​ ಸಿಕ್ಕಿದೆ. ನಿರ್ಮಾಪಕರು ಕೂಡ ದೊಡ್ಡ ಲಾಭ ಕಂಡಿದ್ದಾರೆ. ರಾಜಮೌಳಿ ಜೊತೆ ಕೆಲಸ ಮಾಡಿ ಗೆದ್ದ ಹೀರೋಗಳ ಪಟ್ಟಿ ಇಲ್ಲಿದೆ.

ರಾಮ್ ಚರಣ್: ರಾಜಮೌಳಿ ನಿರ್ದೇಶನದ ‘ಮಗಧೀರ’ ಹಾಗೂ ‘ಆರ್​ಆರ್​ಆರ್​’ ಸಿನಿಮಾ ಸೂಪರ್ ಹಿಟ್ ಆಗಿವೆ. ಈ ಎರಡೂ ಚಿತ್ರಗಳಲ್ಲಿ ರಾಮ್ ಚರಣ್ ನಟಿಸಿದ್ದಾರೆ. ಈ ಎರಡೂ ಚಿತ್ರಗಳಿಂದ ರಾಮ್ ಚರಣ್ ವೃತ್ತಿಜೀವನಕ್ಕೆ ಮೈಲೇಜ್ ಸಿಕ್ಕಿದೆ.

ಸುದೀಪ್​: ‘ಈಗ’ ಚಿತ್ರಕ್ಕೆ ರಾಜಮೌಳಿ ನಿರ್ದೇಶನ ಇತ್ತು. ಈ ಸಿನಿಮಾದಲ್ಲಿ ನೆಗೆಟಿವ್ ಶೇಡ್ ಪಾತ್ರ ಮಾಡಿ ಸುದೀಪ್ ಗಮನ ಸೆಳೆದರು. ಈ ಚಿತ್ರದಿಂದ ಅವರ ಜನಪ್ರಿಯತೆ ಹೆಚ್ಚಿತು. ಅವರು ವಿಲನ್ ಪಾತ್ರ ಮಾಡಿ ಎಲ್ಲರ ಗಮನ ಸೆಳೆದರು. ಈ ಚಿತ್ರದಲ್ಲಿ ನಟಿಸಿದ ನಾನಿ ಕೂಡ ಗೆದ್ದರು.

ಪ್ರಭಾಸ್: ‘ಬಾಹುಬಲಿ’ ಹಾಗೂ ‘ಬಾಹುಬಲಿ 2’ ಸಿನಿಮಾಗಳು ಭಾರತೀಯ ಸಿನಿಮಾ ಇತಿಹಾಸದಲ್ಲಿ ವಿಶೇಷ ಸ್ಥಾನ ಪಡೆದುಕೊಂಡಿವೆ. ಎರಡೂ ಚಿತ್ರಗಳು ಒಳ್ಳೆಯ ಬಿಸ್ನೆಸ್ ಮಾಡಿದ್ದವು. ರಾಜಮೌಳಿ ಆ್ಯಕ್ಷನ್ ಕಟ್ ಹೇಳಿದ್ದ ಈ ಚಿತ್ರದಿಂದ ಪ್ರಭಾಸ್ ವೃತ್ತಿಜೀವನಕ್ಕೆ ಮೈಲೇಜ್ ಸಿಕ್ಕಿದೆ.

ಜೂ.ಎನ್​ಟಿಆರ್: ‘ಸ್ಟೂಡೆಂಟ್ ನಂಬರ್ 1’, ‘ಸಿಂಹಾದ್ರಿ’, ‘ಯಮದೊಂಗ’, ‘ಆರ್​ಆರ್​ಆರ್​’ ಸಿನಿಮಾಗಳಲ್ಲಿ ಜೂ.ಎನ್​ಟಿಆರ್​ ಹಾಗೂ ರಾಜಮೌಳಿ ಒಟ್ಟಾಗಿ ಕೆಲಸ ಮಾಡಿದ್ದಾರೆ. ಈ ಚಿತ್ರಗಳಿಂದ ಜೂ.ಎನ್​​ಟಿಆರ್ ಖ್ಯಾತಿ ಹೆಚ್ಚಿದೆ. ‘ಆರ್​ಆರ್​ಆರ್​’ ಚಿತ್ರದಲ್ಲಿ ಜೂ.ಎನ್​ಟಿಆರ್ ಮಾಡಿದ ಪಾತ್ರ ಜನರಿಗೆ ಹೆಚ್ಚು ಇಷ್ಟ ಆಗಿದೆ.

ರವಿ ತೇಜ: ಟಾಲಿವುಡ್​ನಲ್ಲಿ ರವಿ ತೇಜ ಅವರು ಖ್ಯಾತಿ ಪಡೆದರು. ‘ವಿಕ್ರಮಾರ್ಕುಡು’ ಸಿನಿಮಾ ದೊಡ್ಡ ಯಶಸ್ಸು ಕಂಡಿದೆ. 2006ರಲ್ಲಿ ಈ ಚಿತ್ರ ತೆರೆಗೆ ಬಂತು.

ಇದನ್ನೂ ಓದಿ:  ಅಮೇಜಾನ್ ಕಾಡುಗಳಲ್ಲಿ ಶೂಟ್ ಆಗಲಿದೆ ರಾಜಮೌಳಿ ಮುಂದಿನ ಸಿನಿಮಾ; ಈ ಕಥೆಗೆ ಸ್ಫೂರ್ತಿ ಏನು?

ರಾಣಾ ದಗ್ಗುಬಾಟಿ: ‘ಬಾಹುಬಲಿ’ ಹಾಗೂ ‘ಬಾಹುಬಲಿ 2’ ಚಿತ್ರದಲ್ಲಿ ವಿಲನ್ ಪಾತ್ರ ಮಾಡಿದ ರಾಣಾ ದಗ್ಗುಬಾಟಿ ಎಲ್ಲರ ಗಮನ ಸೆಳೆದಿದ್ದಾರೆ. ಅವರ ಕರಿಯರ್​ಗೆ ಭದ್ರಬುನಾದಿ ಹಾಕಿದ ಖ್ಯಾತಿ ರಾಜಮೌಳಿಗೆ ಸಿಗುತ್ತದೆ.

ಇತರರು..

ರಾಜಮೌಳಿ ಚಿತ್ರದಲ್ಲಿ ಕಾಣಿಸಿಕೊಂಡ ಅನೇಕ ನಟಿಯರು ಗಮನ ಸೆಳೆದಿದ್ದಾರೆ. ತಮನ್ನಾ ಭಾಟಿಯಾ, ಅನುಷ್ಕಾ ಶೆಟ್ಟಿ, ಸಮಂತಾ ಮೊದಲಾದ ಹೀರೋಯಿನ್​ಗಳು ಮಾಡಿದ ಪಾತ್ರಗಳಿಗೂ ಜನರ ಮನಸ್ಸಲ್ಲಿ ವಿಶೇಷ ಸ್ಥಾನ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?