AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಬಿಜೆಪಿ ಜೊತೆ ಕೈ ಜೋಡಿಸಲು ಸಜ್ಜಾದ ಸುದೀಪ್​? ಕಿಚ್ಚನ ರಾಜಕೀಯ ಎಂಟ್ರಿ ಬಗ್ಗೆ ದೊಡ್ಡ ಸುದ್ದಿ

Sudeep | Karnataka BJP: ಬಸವರಾಜ ಬೊಮ್ಮಾಯಿ ಹಾಗೂ ಬಿ.ಎಸ್​. ಯಡಿಯೂರಪ್ಪ ಜೊತೆ ಕಿಚ್ಚ ಸುದೀಪ್​ ಅವರ ಮಾತುಕತೆ ನಡೆದಿದೆ ಎನ್ನುತ್ತಿವೆ ಮೂಲಗಳು. ಈ ಹಿನ್ನೆಲೆಯಲ್ಲಿ ಕೌತುಕ ಗರಿಗೆದರಿದೆ.

Kichcha Sudeep: ಬಿಜೆಪಿ ಜೊತೆ ಕೈ ಜೋಡಿಸಲು ಸಜ್ಜಾದ ಸುದೀಪ್​? ಕಿಚ್ಚನ ರಾಜಕೀಯ ಎಂಟ್ರಿ ಬಗ್ಗೆ ದೊಡ್ಡ ಸುದ್ದಿ
ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ, ಕಿಚ್ಚ ಸುದೀಪ್
ಮದನ್​ ಕುಮಾರ್​
|

Updated on:Apr 03, 2023 | 2:59 PM

Share

ಮುಖ್ಯಾಂಶಗಳು

  • ಕನ್ನಡ ಚಿತ್ರರಂಗದ ಸ್ಟಾರ್​ ಕಲಾವಿದರಿಗೆ ಮಣೆ ಹಾಕುತ್ತಿವೆ ರಾಜಕೀಯ ಪಕ್ಷಗಳು
  • ಕಿಚ್ಚ ಸುದೀಪ್​ ಜೊತೆ ಮಾತುಕತೆ ನಡೆಸಿರುವ ಬಿಜೆಪಿ ಮುಖಂಡರು
  • ಏಪ್ರಿಲ್​ 5ರಂದು ಸುದೀಪ್​ ರಾಜಕೀಯ ಎಂಟ್ರಿ ಬಗ್ಗೆ ಸಿಗಲಿದೆ ಸ್ಪಷ್ಟ ಚಿತ್ರಣ

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ (Karnataka Assembly Elections 2023) ಕಾವು ಜೋರಾಗಿದೆ. ಅನೇಕ ಸಿನಿಮಾ ಕಲಾವಿದರಿಗೆ ರಾಜಕೀಯ ಪಕ್ಷಗಳು ಮಣೆ ಹಾಕುತ್ತಿವೆ. ಚಂದನವನದ ಸ್ಟಾರ್​ ನಟರ ಒಲವು ಯಾವ ಪಕ್ಷದ ಕಡೆಗೆ ಇದೆ ಎಂಬುದನ್ನು ತಿಳಿಯುವ ಸಮಯ ಹತ್ತಿರವಾಗಿದೆ. ನಟ ಕಿಚ್ಚ ಸುದೀಪ್​ (Kichcha Sudeep) ಅವರಿಗೆ ಹಲವು ಪ್ರಮುಖ ಮುಖಂಡರ ಜೊತೆ ಒಡನಾಟ ಇದೆ. ಅವರನ್ನು ರಾಜಕೀಯಕ್ಕೆ ಕರೆತರಲು ಒಂದಷ್ಟು ಪ್ರಯತ್ನಗಳು ಕೂಡ ನಡೆದಿವೆ. ಮೂಲಗಳ ಪ್ರಕಾರ ಅವರು ಬಿಜೆಪಿ (BJP) ಜೊತೆ ಕೈ ಜೋಡಿಸುವ ಸಾಧ್ಯತೆ ದಟ್ಟವಾಗಿದೆ. ಈ ಕುರಿತು ಶೀಘ್ರದಲ್ಲೇ ಸ್ಪಷ್ಟ ಚಿತ್ರಣ ಸಿಗಲಿದೆ. ಸುದೀಪ್​ ಅವರು ನೇರವಾಗಿ ರಾಜಕೀಯಕ್ಕೆ ಧುಮುಕುತ್ತಾರೋ ಅಥವಾ ಕೇವಲ ಬಿಜೆಪಿ ಪರವಾಗಿ ಪ್ರಚಾರ ರಾಯಭಾರಿ ಆಗುತ್ತಾರೋ ಎಂಬುದು ಏಪ್ರಿಲ್​ 5ರಂದು ಬಹಿರಂಗ ಆಗಲಿದೆ ಎನ್ನುತ್ತಿವೆ ಮೂಲಗಳು.

ಬಸವರಾಜ ಬೊಮ್ಮಾಯಿ ಹಾಗೂ ಬಿ.ಎಸ್​. ಯಡಿಯೂರಪ್ಪ ಜೊತೆ ಕಿಚ್ಚ ಸುದೀಪ್​ ಅವರ ಮಾತುಕತೆ ನಡೆದಿದೆ ಎಂಬುದು ಮೂಲಗಳ ಮಾಹಿತಿ. ಈ ಹಿನ್ನೆಲೆಯಲ್ಲಿ ಕೌತುಕ ಗರಿದೆದರಿದೆ. ಸುದೀಪ್​ ಅವರಿಂದ ಬೆಂಬಲ ಪಡೆಯಬೇಕು ಎಂಬುದು ಕಾಂಗ್ರೆಸ್​ ಮತ್ತು ಬಿಜೆಪಿಯ ಉದ್ದೇಶ ಆಗಿತ್ತು. ಪಕ್ಷಕ್ಕೆ ಸೇರ್ಪಡೆ ಆಗುವಂತೆ ಎರಡೂ ಕಡೆಯಿಂದ ಅವರಿಗೆ ಆಹ್ವಾನ ನೀಡಲಾಗಿತ್ತು. ಅಂತಿಮವಾಗಿ ಸುದೀಪ್​ ಅವರು ಬಿಜೆಪಿ ಪರ ಆಸಕ್ತಿ ತೋರಿಸುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: K. Manju: ರಾಜಕೀಯ ಪ್ರವೇಶಕ್ಕೆ ಸಜ್ಜಾದ ನಿರ್ಮಾಪಕ ಕೆ. ಮಂಜು; ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ?

ಇದನ್ನೂ ಓದಿ
Image
ಮುಖ ತೋರಿಸದೇ ಫೇಮಸ್​ ಆದ ಭಾಸ್ಕರ್​; ಕಿಚ್ಚ ಸುದೀಪ್​ ಬದುಕಿನಲ್ಲೂ ಇದ್ದಾನೆ ಅಂಥ ಒಬ್ಬ ವ್ಯಕ್ತಿ
Image
Kichcha Sudeep: ‘ಕನ್ನಡ್​’ ಎಂದರೆ ಸಹಿಸಲ್ಲ ಸುದೀಪ್​; ಹಿಂದಿ ಮಂದಿಗೆ ಕಿಚ್ಚ ಖಡಕ್​ ತಿರುಗೇಟು ನೀಡಿದ ವಿಡಿಯೋ ವೈರಲ್​
Image
Bigg Boss OTT: ಬಿಗ್​​ ಬಾಸ್​ ಶೋ ಹಿಂದೆ ಸುದೀಪ್​ಗೆ ಹಲವು ಚಾಲೆಂಜ್​; ವೇದಿಕೆಯಲ್ಲಿ ಎಲ್ಲವನ್ನೂ ವಿವರಿಸಿದ ಕಿಚ್ಚ
Image
Kichcha Sudeep: ಕಿಚ್ಚನ ಹೃದಯವಂತಿಕೆ; ಹಾರ್ಟ್​ ಸಮಸ್ಯೆ ಹೊಂದಿರುವ ಪುಟ್ಟ ಬಾಲಕನನ್ನು ಭೇಟಿಯಾದ ಸುದೀಪ್​

ಒಂದೆರಡು ತಿಂಗಳ ಹಿಂದೆ ಕೂಡ ರಾಜಕೀಯ ಮುಖಂಡರು ಸುದೀಪ್​ ಅವರನ್ನು ಭೇಟಿ ಮಾಡಿದ್ದರು. ಆಗಲೇ ಅವರ ರಾಜಕೀಯದ ಎಂಟ್ರಿ ಬಗ್ಗೆ ಸುದ್ದಿ ಹಬ್ಬಿತ್ತು. ಆಗ ಟಿವಿ9 ಜೊತೆ ಮಾತನಾಡಿದ್ದ ಸುದೀಪ್​ ಅವರು ತಮ್ಮ ನಿಲುವು ಏನೆಂಬುದನ್ನು ತಿಳಿಸಿದ್ದರು. ‘ನಾನೊಬ್ಬ ಕಲಾವಿದ. ಹಂಡ್ರೆಡ್​ ಪರ್ಸೆಂಟ್ ಮಾತುಕತೆಗೆ ಬಂದಿದ್ದರು. ಇಲ್ಲ ಅಂತ ತೇಲಿಸೋಕೆ ಹೋಗಲ್ಲ. ಇತ್ತೀಚೆಗೆ ಪೊಲಿಟಿಕಲ್ ನಾಯಕರಿಗೆ ನಂಬಿಕೆ ಬಂದಿದೆ. ಡಿಕೆ ಶಿವಕುಮಾರ್​, ಸುಧಾಕರ್, ಬಸವರಾಜ ಬೊಮ್ಮಾಯಿ, ರಮ್ಯಾ ಅವರು ನನ್ನ ಸ್ನೇಹಿತರು. ನಾನು ಇನ್ನೂ ನಿರ್ಧಾರ ತಗೊಂಡಿಲ್ಲ. ಎರಡೂ ಕಡೆ ಆಪ್ತರು ಇರುವಾಗ ನಿರ್ಧಾರ ತೆಗೆದುಕೊಳ್ಳುವುದು ಕಷ್ಟ ಆಗುತ್ತದೆ’ ಎಂದು ಕಿಚ್ಚ ಸುದೀಪ್​ ಹೇಳಿದ್ದರು.

ಇದನ್ನೂ ಓದಿ: Kichcha Sudeep: ನರೇಂದ್ರ ಮೋದಿ ಭೇಟಿಗೆ ಸುದೀಪ್​ ಯಾಕೆ ಬರಲಿಲ್ಲ? ಅಸಲಿ ಕಾರಣ ವಿವರಿಸಿದ ಕಿಚ್ಚ

‘ಎಮೋಶನ್ಸ್ ಇದೆ. ಅದರ ಜೊತೆ ನಮ್ಮ ನಿರ್ಧಾರವನ್ನು ಸೇರಿಸೋಕೆ ಹೋಗಲ್ಲ. ಸುದೀಪ್​ ಅವರು ರಾಜಕೀಯಕ್ಕೆ ಬರೋದು ಬೇಡ ಅಂತ ನಮ್ಮ ಜನರ ತಲೆಯಲ್ಲಿ ಇರಬಹುದು. ಒಳ್ಳೆಯದನ್ನು ಮಾಡೋಕೆ ಪವರ್​ ಬೇಕಂತಲೇ ಇಲ್ಲ. ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುತ್ತೇನೆ’ ಎಂದಿದ್ದರು ಸುದೀಪ್.​

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:42 pm, Mon, 3 April 23

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್