AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​ ಹೇಳಿದ ಬುದ್ಧಿವಾದ ಮರೆತ ಬಿಗ್​ ಬಾಸ್​ ಸ್ಪರ್ಧಿಗಳು; ಈ ವಾರವೂ ಇದೆ ಕಿಚ್ಚನ ಕ್ಲಾಸ್​?

ಬಿಗ್​ ಬಾಸ್​ ಮನೆಯ ಮೊದಲ ವಾರದ ಪಂಚಾಯ್ತಿಯಲ್ಲಿ ಕೆಲವರು ಆಡಿದ ಮಾತುಗಳು ಅನೇಕರಿಗೆ ಬೇಸರ ತರಿಸಿದೆ. ಇದರ ಪರಿಣಾಮವಾಗಿ ಮನೆಯಲ್ಲಿ ಎರಡು ಟೀಂಗಳಾಗಿವೆ. ಸೋಮವಾರದಿಂದ ಇಲ್ಲಿಯವರೆಗೆ ಮನೆಯಲ್ಲಿ ನಿರಂತರವಾಗಿ ಜಗಳಗಳು ನಡೆಯುತ್ತಲೇ ಇವೆ.

ಸುದೀಪ್​ ಹೇಳಿದ ಬುದ್ಧಿವಾದ ಮರೆತ ಬಿಗ್​ ಬಾಸ್​ ಸ್ಪರ್ಧಿಗಳು; ಈ ವಾರವೂ ಇದೆ ಕಿಚ್ಚನ ಕ್ಲಾಸ್​?
ಸುದೀಪ್​
ರಾಜೇಶ್ ದುಗ್ಗುಮನೆ
| Edited By: |

Updated on: Jul 01, 2021 | 7:20 AM

Share

ಬಿಗ್​ ಬಾಸ್​ ಸೀಸನ್​ 8 ಮೊದಲ ಇನ್ನಿಂಗ್ಸ್​ ಆರಂಭದಲ್ಲಿ ಬಿಗ್​ ಬಾಸ್​ ಮನೆ ರಣರಂಗವಾಗಿತ್ತು. ವೈರಸ್​ ಮತ್ತು ಮನುಷ್ಯರ ಟಾಸ್ಕ್​ನಲ್ಲಿ ಸ್ಪರ್ಧಿಗಳು ಕಿತ್ತಾಡಿಕೊಂಡಿದ್ದರು. ಪ್ರೀತಿಯಿಂದ ಆಡಬಹುದಾದ ಗೇಮ್​ನಲ್ಲಿ ದ್ವೇಷ ಕಾರಿಕೊಂಡಿದ್ದರು. ಎರಡನೇ ಇನ್ನಿಂಗ್ಸ್​ ಆರಂಭದಲ್ಲೂ ಇದು ಪುನರಾವರ್ತನೆ ಆಗಿದೆ. ಈ ವಿಚಾರದಲ್ಲಿ ಸ್ಪರ್ಧಿಗಳಿಗೆ ಸುದೀಪ್​ ಕ್ಲಾಸ್​ ತೆಗೆದುಕೊಳ್ಳುವ ಎಲ್ಲಾ ಲಕ್ಷಣ ಕಾಣುತ್ತಿದೆ. ಮೊದಲ ಇನ್ನಿಂಗ್ಸ್​ನಲ್ಲಿ ಬಿಗ್​ ಬಾಸ್​ ಸ್ಪರ್ಧಿಗಳು ನಡೆದುಕೊಂಡಿದ್ದ ರೀತಿ ಸುದೀಪ್​ಗೆ ಇಷ್ಟವಾಗಿಲ್ಲ. ಖುಷಿಯಿಂದ ನಡೆಯಬೇಕಿದ್ದ ಟಾಸ್ಕ್​ ರಣರಂಗವಾಗಿದ್ದಕ್ಕೆ ಸುದೀಪ್​ ಛೀಮಾರಿ ಹಾಕಿದ್ದರು. ಇದಾದ ನಂತರ ಮನೆಯವರು ಪಾಠ ಕಲಿತಿದ್ದರು. ಎಲ್ಲರೂ ಒಂದಾಗಿದ್ದರು. ಈಗ ಮತ್ತದೇ ರಿಪೀಟ್​ ಆಗಿದೆ.

ಬಿಗ್​ ಬಾಸ್​ ಮನೆಯ ಮೊದಲ ವಾರದ ಪಂಚಾಯ್ತಿಯಲ್ಲಿ ಕೆಲವರು ಆಡಿದ ಮಾತುಗಳಿಂದ ಈ ದ್ವೇಷ ಹುಟ್ಟಿಕೊಂಡಿದೆ. ಇದರ ಪರಿಣಾಮವಾಗಿ ಮನೆಯಲ್ಲಿ ಎರಡು ಟೀಂಗಳಾಗಿವೆ. ಸೋಮವಾರದಿಂದ ಇಲ್ಲಿಯವರೆಗೆ ಮನೆಯಲ್ಲಿ ನಿರಂತರವಾಗಿ ಜಗಳಗಳು ನಡೆಯುತ್ತಲೇ ಇವೆ. ಮಂಜು-ದಿವ್ಯಾ ಜತೆ ಪ್ರಶಾಂತ್​-ಚಕ್ರವರ್ತಿ ಜಗಳ ಆಡಿದ್ದಾರೆ. ನಿಧಿ ಸುಬ್ಬಯ್ಯ ಹಾಗೂ ಅರವಿಂದ್ ಕೆಪಿ ಕಿತ್ತಾಡಿಕೊಂಡಿದ್ದಾರೆ. ಕ್ಲೋಸ್​ ಫ್ರೆಂಡ್ಸ್​ ಆಗಿರುವ ನಿಧಿ-ಶುಭಾ ನಡುವೆಯೂ ಮಾತಿನ ಚಕಮಕಿ ನಡೆದಿದೆ. ರಘು-ವೈಷ್ಣವಿ ನಡುವೆ ಉಂಟಾದ ಮಿಸ್​ ಅಂಡರ್​​ಸ್ಟ್ಯಾಂಡಿಗ್​ನಿಂದ ಇಬ್ಬರೂ ಬೇಸರ ಮಾಡಿಕೊಂಡರು.

ಒಟ್ಟಿನಲ್ಲಿ ಎರಡನೇ ಇನ್ನಿಂಗ್ಸ್​ನ ಎರಡನೇ ವಾರ ಮನೆ ಸಂಪೂರ್ಣವಾಗಿ ರಣರಂಗವಾಗಿದೆ. ಶಮಂತ್​ ಹಾಗೂ ಶುಭಾ ಪೂಂಜಾ ಎಲ್ಲವನ್ನೂ ಸರಿ ಮಾಡೋಕೆ ಪ್ರಯತ್ನಿಸುತ್ತಿದ್ದಾರೆ. ಆದರೆ, ಭಿನ್ನಾಭಿಪ್ರಾಯಗಳು ಶಮನವಾಗುತ್ತಿಲ್ಲ. ಹೀಗಾಗಿ, ಈ ವಾರ​ ಸ್ಪರ್ಧಿಗಳಿಗೆ ಸುದೀಪ್ ಕ್ಲಾಸ್​ ತೆಗೆದುಕೊಳ್ಳುವ ಎಲ್ಲಾ ಸಾಧ್ಯತೆ ಇದೆ.

ಇದನ್ನೂ ಓದಿ:

 ‘ಮಂಜು ಬೆಂಬಲಿಗರ ವೋಟ್​ ನಂಗೆ ಸಿಗಲ್ಲ’; ದಿವ್ಯಾ ಸುರೇಶ್​ ಲೆಕ್ಕಾಚಾರ ಉಲ್ಟಾಪಲ್ಟಾ

Divya Uruduga: ಪದೇಪದೇ ಅರವಿಂದ್ ವಹಿಸಿಕೊಂಡು ಬರುವ ದಿವ್ಯಾಗೆ ಮಾತಿನಲ್ಲೇ ತಿವಿದ ಸುದೀಪ್

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್